ಟಿ20 ವಿಶ್ವಕಪ್ 2024: ಭಾರತ, ಪಾಕಿಸ್ತಾನ ಪಂದ್ಯಕ್ಕೆ ಮಳೆ ಅಡ್ಡಿ

Krishnaveni K
ಭಾನುವಾರ, 9 ಜೂನ್ 2024 (19:41 IST)
ನ್ಯೂಯಾರ್ಕ್: ಟಿ20 ವಿಶ್ವಕಪ್ ಕ್ರಿಕೆಟ್ ನಲ್ಲಿ ಇಂದು ನಡೆಯುತ್ತಿರುವ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಮಳೆ ಅಡ್ಡಿಯಾಗಿದೆ. ಮಳೆಯಿಂದಾಗ ಟಾಸ್ ವಿಳಂಬವಾಗಿದೆ.

ಇಂದಿನ ಪಂದ್ಯಕ್ಕೆ ಮಳೆ ಅಡ್ಡಿಯಾಗಬಹುದು ಎಂದು ಮೊದಲೇ ಹವಾಮಾನ ವರದಿಗಳಾಗಿತ್ತು. ಮಳೆಯಿಂದಾಗಿ ಮೈದಾನದ ಕವರ್ ಇನ್ನೂ ತೆಗೆದಿಲ್ಲ. ಮೈದಾನ ಒದ್ದೆಯಾಗಿರುವುದರಿಂದ ಅಂಪಾಯರ್ ಗಳು ಕಾದು ನೋಡುವ ತಂತ್ರಕ್ಕೆ ಮೊರೆ ಹೋಗಿದ್ದಾರೆ. ಇದೀಗ ಟೀಂ ಇಂಡಿಯಾ ಕೋಚ್ ರಾಹುಲ್ ದ್ರಾವಿಡ್ ಮತ್ತು ನಾಯಕ ರೋಹಿತ್ ಶರ್ಮಾ ಜೊತೆಗೆ ಮಾತುಕತೆ ನಡೆಸಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ನಡುವಿನ ರೋಚಕ ಪಂದ್ಯಕ್ಕೆ ಇಡೀ ವಿಶ್ವವೇ ಕಾತುರದಿಂದ ಕಾಯುತ್ತಿದೆ. ಆದರೆ ಮಳೆಯಿಂದಾಗಿ ಪಂದ್ಯ ತಡವಾಗಿರುವುದರಿಂದ ಅಭಿಮಾನಿಗಳಿಗೆ ನಿರಾಸೆಯಾಗಿದೆ. ಪರಿಸ್ಥಿತಿ ನೋಡಿಕೊಂಡು ಮೈದಾನ ಒಣಗಿದ ಬಳಿಕ ಟಾಸ್ ನಡೆಯಲಿದೆ.

ಇಂದಿನ ಪಂದ್ಯ ಪಾಕಿಸ್ತಾನದ ಪಾಲಿಗೆ ಮಹತ್ವದ್ದಾಗಿದೆ. ಕಳೆದ ಪಂದ್ಯದಲ್ಲಿ ಅಮೆರಿಕಾ ವಿರುದ್ಧ ಸೋತಿದ್ದ ಪಾಕಿಸ್ತಾನಕ್ಕೆ ಈಗ ಮುಂದಿನ ಹಂತಕ್ಕೆ ಏರಲು ಈ ಪಂದ್ಯದಲ್ಲಿ ಗೆಲುವು ಅನಿವಾರ್ಯವಾಗಿದೆ. ಈಗ ಮಳೆ ಕೊಂಚ ಬಿಡುವು ನೀಡಿದ್ದು ಕೆಲವೇ ಕ್ಷಣಗಳಲ್ಲಿ ಟಾಸ್ ನಡೆಯುವ ನಿರೀಕ್ಷೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೇಯಸ್ ಅಯ್ಯರ್‌ ತಂದೆಯಿಂದಲೇ ಬಂತು ಅಭಿಮಾನಿಗಳಿಗೆ ಸಂದೇಶ, ಇಲ್ಲಿದೆ ಮಾಹಿತಿ

ರೋಹಿತ್, ವಿರಾಟ್ ಕೊಹ್ಲಿ ಟೀಕಕಾರರಿಗೆ ಚಾಟಿ ಬೀಸಿದ ಎಬಿ ಡಿಲಿವಿಯರ್ಸ್‌

ಗಾಯಗೊಂಡ ಪ್ರತೀಕಾ ರಾವಲ್ ಜಾಗಕ್ಕೆ ಸ್ಥಾನ ಗಿಟ್ಟಿಸಿಕೊಂಡ ಶಫಾಲಿ ವರ್ಮಾ

ಶ್ರೇಯಸ್ ಅಯ್ಯರ್ ಪೋಷಕರ ಆಗಮನಕ್ಕಾಗಿ ಕಾಯುತ್ತಿರುವ ಬಿಸಿಸಿಐ, ಯಾಕೆ ಗೊತ್ತಾ

ಶ್ರೇಯಸ್ ಅಯ್ಯರ್ ಹೇಗಿದ್ದಾರೆ ಎಂದಿದ್ದಕ್ಕೆ ಸೂರ್ಯಕುಮಾರ್ ಯಾದವ್ ಹೇಳಿದ್ದೇನು

ಮುಂದಿನ ಸುದ್ದಿ
Show comments