Webdunia - Bharat's app for daily news and videos

Install App

ಚುನಾವಣೆ ಗದ್ದಲದ ನಡುವೆ ಕಳೆದೇ ಹೋದ ಟಿ20 ವಿಶ್ವಕಪ್ ಕೌತುಕ

Krishnaveni K
ಗುರುವಾರ, 6 ಜೂನ್ 2024 (09:26 IST)
ನವದೆಹಲಿ: ಈ ಬಾರಿ ಟಿ20 ವಿಶ್ವಕಪ್ ಆರಂಭವಾಗಿದ್ದು ಬಹುಶಃ ಕೆಲವರಿಗೆ ಗೊತ್ತೇ ಆಗಿಲ್ಲ. ಕಾರಣ, ದೇಶದಲ್ಲಿ ಈಗ ಲೋಕಸಭಾ ಚುನಾವಣೆ 2024 ಫಲಿತಾಂಶದ ನಂತರದ ರಾಜಕೀಯ ಚಟುವಟಿಕೆಗಳೇ ಜನರಿಗೆ ಹೆಚ್ಚು ಇಂಟ್ರೆಸ್ಟಿಂಗ್ ಎನಿಸುತ್ತಿದೆ.

ನಿನ್ನೆ ಭಾರತ ಮತ್ತು ಐರ್ಲೆಂಡ್ ನಡುವೆ ಟಿ20 ವಿಶ್ವಕಪ್ ಪಂದ್ಯವಿತ್ತು. ಭಾರತಕ್ಕೆ ಇದು ಮೊದಲ ಪಂದ್ಯ. ಸಾಮಾನ್ಯವಾಗಿ ಭಾರತ ಆಡುವ ಪಂದ್ಯವೆಂದರೆ ಕೋಟ್ಯಾಂತರ ಮಂದಿ ವೀಕ್ಷಿಸುತ್ತಾರೆ. ಅದು ಯಾವುದೇ ತಂಡವಾಗಿರಲಿ, ಬೌಲಿಂಗ್ ಇರಲಿ, ಬ್ಯಾಟಿಂಗ್ ಇರಲಿ ಕೋಟಿಗಟ್ಟಲೆ ಮಂದಿ ವೀಕ್ಷಣೆ ಮಾಡುತ್ತಿರುತ್ತಾರೆ.

ಆದರೆ ನಿನ್ನೆ ದೆಹಲಿಯಲ್ಲಿ ಎನ್ ಡಿಎ ಮತ್ತು ಇಂಡಿಯಾ ಬ್ಲಾಕ್ ನಡುವೆ ಸರ್ಕಾರ ರಚಿಸಲು ಪೈಪೋಟಿಯಿತ್ತು. ಈ ಬಗ್ಗೆ ಸಂಜೆ ಸಭೆ ನಡೆದಿತ್ತು. ಯಾರು ಸರ್ಕಾರ ರಚನೆ ಮಾಡುತ್ತಾರೆ ಎಂಬ ಕುತೂಹಲವಿತ್ತು. ಹೀಗಾಗಿ ಜನರಿಗೆ ಟಿ20 ವಿಶ್ವಕಪ್ ಮರೆತೇ ಹೋಗಿತ್ತು.

ನಿನ್ನೆಯ ಪಂದ್ಯದಲ್ಲಿ ಭಾರತ ಫೀಲ್ಡಿಂಗ್ ಮಾಡುವಾಗ ಕೇವಲ 1 ಕೋಟಿ ಜನ ಆಪ್ ಮೂಲಕ ವೀಕ್ಷಣೆ ಮಾಡುತ್ತಿದ್ದರು. ಚುಟುಕು ಕ್ರಿಕೆಟ್ ಗೆ ಅಭಿಮಾನಿಗಳು ಜಾಸ್ತಿ. ಅದರಲ್ಲೂ ಭಾರತ ಆಡುವ ಪಂದ್ಯಗಳೆಂದರೆ ದಾಖಲೆಯ ವೀಕ್ಷಣೆಯಾಗುತ್ತದೆ. ಆದರೆ ಈ ಪಂದ್ಯಕ್ಕೆ ಕಡಿಮೆ ವೀಕ್ಷಕರಿರಲು ರಾಜಕೀಯ ಕಲಾಪಗಳೇ ಕಾರಣವಾಯಿತು ಎನ್ನಬಹುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ENG vs IND: ಇಂಗ್ಲೆಂಡ್ ಗೆಲುವನ್ನು ಕಸಿದ ಸಿರಾಜ್ ಬೆಂಕಿಯ ಎಸೆತ, ಆಂಗ್ಲರ ನೆಲದಲ್ಲಿ ಗೆದ್ದು ಬೀಗಿದ ಗಿಲ್ ಪಡೆ

IND vs ENG: ಆ ಒಂದು ಯಾರ್ಕರ್ ಮೊಹಮ್ಮದ್ ಸಿರಾಜ್ ಜೀವನದಲ್ಲೇ ಮರೆಯಲ್ಲ: video

IND vs ENG: ಗೌತಮ್ ಗಂಭೀರ್ ಗೆ ಅಹಂ ಜಾಸ್ತಿಯಾಯ್ತು, ಇಲ್ಲಾಂದ್ರೆ ಹೀಗೆ ಮಾಡ್ತಿದ್ರಾ

ಕಣ್ಣು ಕುಕ್ಕಿದ ಇಂಗ್ಲೆಂಡ್ ಪ್ರೇಕ್ಷಕನ ಕೆಂಪು ಟೀ ಶರ್ಟ್‌, ಕ್ರೀಸ್‌ನಲ್ಲಿದ್ದ ಜಡೇಜಾ ಮಾಡಿದ್ದೇನು ಗೊತ್ತಾ

ಕೆಣಕಿದ ಕ್ರಾಲಿಗೆ ತಕ್ಕ ಉತ್ತರ ನೀಡಿದ ಮೊಹಮ್ಮದ್‌ ಸಿರಾಜ್‌: ಕುತೂಹಲಕರ ಘಟ್ಟದತ್ತ ಐದನೇ ಟೆಸ್ಟ್‌

ಮುಂದಿನ ಸುದ್ದಿ
Show comments