Webdunia - Bharat's app for daily news and videos

Install App

ಚೆಪಾಕ್ ಸ್ಟೇಡಿಯಂನಲ್ಲಿ ಅಂತಿಮ ಟೆಸ್ಟ್ ಪಂದ್ಯ ನಡೆಸಲು ಆತಂಕ ದೂರ

Webdunia
ಶುಕ್ರವಾರ, 9 ಡಿಸೆಂಬರ್ 2016 (10:00 IST)
ಚೆನ್ನೈ: ತಮಿಳು ನಾಡು ಸಿಎಂ ಜಯಲಲಿತಾ ನಿಧನದ ಹಿನ್ನಲೆಯಲ್ಲಿ ಇಂಗ್ಲೆಂಡ್ ವಿರುದ್ಧ ಅಂತಿಮ ಟೆಸ್ಟ್ ಪಂದ್ಯವನ್ನು ಚೆನ್ನೈನ ಎಂ.ಎ. ಚಿದಂಬರಂ ಮೈದಾನದಲ್ಲಿ ನಡೆಸಬೇಕೋ ಎಂಬ ಬಗ್ಗೆ ಇದ್ದ ಆತಂಕ ದೂರವಾಗಿದೆ. ನಿಗದಿಯಂತೆ ಇಲ್ಲಿ ಡಿಸೆಂಬರ್ 16 ರಿಂದ ಅಂತಿಮ ಟೆಸ್ಟ್ ಪಂದ್ಯ ನಡೆಯಲಿದೆ.

ಈ ಬಗ್ಗೆ ತಮಿಳುನಾಡು ಕ್ರಿಕೆಟ್ ಅಸೋಸಿಯೇಷನ್ ನ್ನು ಸಂಪರ್ಕಿಸಿದ್ದ ಬಿಸಿಸಿಐ ಪಂದ್ಯ ನಡೆಸಲು ಸಾಧ್ಯವೇ ಎಂದು ಪರಾಮರ್ಶಿಸಲು ಸೂಚಿಸಿತ್ತು. ಈ ಹಿನ್ನಲೆಯಲ್ಲಿ ತಮಿಳುನಾಡು ಪೊಲೀಸರನ್ನು ಸಂಪರ್ಕಿಸಿದ ಕ್ರಿಕೆಟ್ ಮಂಡಳಿ ಭದ್ರತೆ ಸಮಸ್ಯೆ ಎದುರಾಗಬಹುದೇ ಎಂದು ಪ್ರಶ್ನಿಸಿತ್ತು. ಹೀಗಾಗಿ ಅಂತಿಮ ಟೆಸ್ಟ್ ಪಂದ್ಯಕ್ಕೆ ಯಾವುದೇ ಭದ್ರತೆ ಸಮಸ್ಯೆ ಎದುರಾಗದು ಎಂದು ತಮಿಳುನಾಡು ಪೊಲೀಸರು ಭರವಸೆ ನೀಡಿದ ಹಿನ್ನಲೆಯಲ್ಲಿ ಇಲ್ಲಿ ನಿಗದಿಯಂತೆ ಪಂದ್ಯ ನಡೆಸಲು ಉದ್ದೇಶಿಸಲಾಗಿದೆ.

ಆದರೆ ಡಿಸೆಂಬರ್ 7 ರಂದು ಇಲ್ಲಿ ನಡೆಯಬೇಕಿದ್ದ ರಣಜಿ ಟ್ರೋಫಿ ಪಂದ್ಯ ರದ್ದಾಗಿದೆ. ಜಯಲಲಿತಾ ಸಾವಿನ ಹಿನ್ನಲೆಯಲ್ಲಿ ಏಳು ದಿನ ಶೋಕಾಚರಣೆ ನಡೆಯುತ್ತಿರುವುದರಿಂದ ಈ ತೀರ್ಮಾನ ಕೈಗೊಳ್ಳಲಾಗಿತ್ತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments