TATA WPL 2025: ಆರ್ ಸಿಬಿಗೆ ಇಂದು ಯಪಿ ವಾರಿಯರ್ಸ್ ಸವಾಲು

Krishnaveni K
ಸೋಮವಾರ, 24 ಫೆಬ್ರವರಿ 2025 (09:33 IST)
ಬೆಂಗಳೂರು: ಡಬ್ಲ್ಯುಪಿಎಲ್ ಕೂಟದಲ್ಲಿ ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ವನಿತೆಯರು ಯುಪಿ ವಾರಿಯರ್ಸ್ ತಂಡವನ್ನು ಎದುರಿಸಲಿದ್ದಾರೆ.

ಚಿನ್ನಸ್ವಾಮಿ ಮೈದಾನದಲ್ಲಿ ನಡೆಯುತ್ತಿರುವ ಪಂದ್ಯಕ್ಕೆ ಅಭಿಮಾನಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ. ಶುಕ್ರವಾರ ನಡೆದಿದ್ದ ಆರ್ ಸಿಬಿ ಪಂದ್ಯಕ್ಕೆ ಸ್ಟೇಡಿಯಂ ಹೌಸ್ ಫುಲ್ ಆಗಿತ್ತು. ಇಂದೂ ಅದೇ ರೀತಿ ಮೈದಾನ ಭರ್ತಿಯಾಗುವ ನಿರೀಕ್ಷೆಯಿದೆ.

ವಡೋದರಾದಲ್ಲಿ ಎರಡು ಪಂದ್ಯಗಳನ್ನು ಸತತವಾಗಿ ಗೆದ್ದು ಬಂದಿದ್ದ ಆರ್ ಸಿಬಿ ಮೂರನೇ ಪಂದ್ಯವನ್ನು ತವರು ಚಿನ್ನಸ್ವಾಮಿ ಮೈದಾನದಲ್ಲಿ ಆಡಿದೆ. ಆದರೆ ಈ ಪಂದ್ಯವನ್ನು ಹೋರಾಡಿ ಸೋತಿತ್ತು. ಆದರೆ ಇಂದಿನ ಪಂದ್ಯದಲ್ಲಿ ಮತ್ತೆ ಗೆಲುವಿನ ಹಳಿಗೆ ಮರಳುವ ವಿಶ್ವಾಸವಿದೆ.

ಆರ್ ಸಿಬಿಗೆ ಎಲ್ಲಿಸ್ ಪೆರಿ, ಸ್ಮೃತಿ ಮಂಧನಾ, ರಿಚಾ ಘೋಷ್ ಬ್ಯಾಟಿಂಗ್ ಫಾರ್ಮ್ ವರವಾಗಿದೆ. ಬೌಲಿಂಗ್ ನಲ್ಲಿ ಕಳೆದ ಪಂದ್ಯದಲ್ಲಿ ಮೈನ್ ಬೌಲರ್ ರೇಣುಕಾ ಸಿಂಗ್ ಅಷ್ಟೇನೂ ಪ್ರಭಾವ ಬೀರಿರಲಿಲ್ಲ. ಆದರೆ ಕಿಮ್ ಗ್ರಾಥ್ ಆ ಕೊರತೆ ನೀಗಿಸಿದ್ದರು.

ಇತ್ತ ಯುಪಿ ವಾರಿಯರ್ಸ್ ಮೊದಲ ಎರಡು ಪಂದ್ಯಗಳನ್ನು ಸತತವಾಗಿ ಸೋತರೂ ಮೂರನೇ ಪಂದ್ಯದಲ್ಲಿ ಡೆಲ್ಲಿ ವಿರುದ್ಧ ಗೆದ್ದು ಆತ್ಮವಿಶ್ವಾಸ ಪಡೆದುಕೊಂಡಿದೆ. ಭಾರತೀಯ ಮೂಲದ ದೀಪ್ತಿ ಶರ್ಮ ನಾಯಕಿಯಾಗಿರುವ ತಂಡದಲ್ಲಿ ಕನ್ನಡತಿ ರಾಜೇಶ್ವರಿ ಗಾಯಕ್ ವಾಡ್ ಕೂಡಾ ಇದ್ದಾರೆ. ಈ ಪಂದ್ಯ ಸಂಜೆ 7.30 ಕ್ಕೆ ಆರಂಭವಾಗಲಿದ್ದು, ಜಿಯೋ ಹಾಟ್ ಸ್ಟಾರ್ ನಲ್ಲಿ ನೇರ ಪ್ರಸಾರ ವೀಕ್ಷಿಸಬಹುದಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ ಜೊತೆ ಮದುವೆ ಆಗುತ್ತೋ ಇಲ್ವೋ ಆತಂಕದಲ್ಲಿ ಎಲ್ಲಿ ಸೇರಿದ್ದಾರೆ ನೋಡಿ ಪಾಲಾಶ್ ಮುಚ್ಚಲ್

ಸ್ಮೃತಿ ಮಂಧಾನ ಮದುವೆ ಬಗ್ಗೆ ಕೊನೆಗೂ ಸ್ಪಷ್ಟ ನಿರ್ಧಾರ ಹೇಳಿದ ಸಹೋದರ: ಫ್ಯಾನ್ಸ್ ಶಾಕ್

ಸ್ಮೃತಿ ಮಂಧಾನ, ಪಾಲಾಶ್ ಮುಚ್ಚಲ್ ಹೊಸ ಮದುವೆ ದಿನಾಂಕ ಫಿಕ್ಸ್

ವಿವಾದಗಳ ಬೆನ್ನಲ್ಲೇ ಏರ್ ಪೋರ್ಟ್ ನಲ್ಲಿ ಆಯ್ಕೆ ಸಮಿತಿಯ ಪ್ರಗ್ಯಾನ್ ಓಝಾ ಜೊತೆ ಕೊಹ್ಲಿ ಗಂಭೀರ ಚರ್ಚೆ video

ವಿರಾಟ್ ಕೊಹ್ಲಿ ಶತಕ ಸಿಡಿಸಿದಾಗ ಅಗ್ರೆಸಿವ್ ಆಗಿ ರೋಹಿತ್ ಶರ್ಮಾ ಹೇಳಿದ್ದೇನು: ಕೊನೆಗೂ ರಿವೀಲ್

ಮುಂದಿನ ಸುದ್ದಿ
Show comments