Webdunia - Bharat's app for daily news and videos

Install App

ಬಾಂಗ್ಲಾದೇಶ ವಿರುದ್ಧ ದ್ವಿತೀಯ ಟೆಸ್ಟ್ ಗೆ ಟೀಂ ಇಂಡಿಯಾ ಹೀಗಿದೆ

Krishnaveni K
ಸೋಮವಾರ, 23 ಸೆಪ್ಟಂಬರ್ 2024 (09:57 IST)
ಮುಂಬೈ: ಭಾರತ ಮತ್ತು ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್ ಪಂದ್ಯ ಮುಗಿದ ಬೆನ್ನಲ್ಲೇ ಈಗ ದ್ವಿತೀಯ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಘೋಷಣೆ ಮಾಡಲಾಗಿದೆ.

ಚೆನ್ನೈನಲ್ಲಿ ನಡೆದಿದ್ದ ಮೊದಲ ಟೆಸ್ಟ್ ಪಂದ್ಯವನ್ನು ಟೀಂ ಇಂಡಿಯಾ ಭರ್ಜರಿಯಾಗಿ ಗೆದ್ದುಕೊಂಡಿತ್ತು. ಅದರಲ್ಲೂ ರವಿಚಂದ್ರನ್ ಅಶ್ವಿನ್್ ತಮ್ಮ ತವರಿನಲ್ಲಿ ಬ್ಯಾಟಿಂಗ್ ಮತ್ತು ಬೌಲಿಂಗ್ ನಿಂದ ತಂಡಕ್ಕೆ ಅಕ್ಷರಶಃ ಆಪತ್ ಬಾಂಧವರಾಗಿದ್ದರು. ಅವರ ಹೊರತಾಗಿ ಶುಬ್ಮನ್ ಗಿಲ್ ಮೊದಲ ಇನಿಂಗ್ಸ್ ನಲ್ಲಿ ವಿಫಲರಾದರೂ ಎರಡನೇ ಇನಿಂಗ್ಸ್ ನಲ್ಲಿ ಶತಕ ಸಿಡಿಸಿದ್ದರು.

ಈ ಪೈಕಿ ರಿಷಬ್ ಪಂತ್ ಎರಡೂ ಇನಿಂಗ್ಸ್ ನಲ್ಲಿ ಉಪಯುಕ್ತ ಕಾಣಿಕೆ ನೀಡಿದ್ದರು. ಕೆಎಲ್ ರಾಹುಲ್ ಮೊದಲ ಇನಿಂಗ್ಸ್ ನಲ್ಲಿ ವಿಫಲರಾದರೂ ಎರಡನೇ ಇನಿಂಗ್ಸ್ ನಲ್ಲಿ ಕೊಂಚ ಚೇತೋಹಾರಿ ಪ್ರದರ್ಶನ ನೀಡಿದ್ದರು. ಹೀಗಾಗಿ ಎರಡನೇ ಪಂದ್ಯಕ್ಕೂ ಅವರು ತಂಡದಲ್ಲಿ ಸ್ಥಾನ ಉಳಿಸಿಕೊಂಡಿದ್ದಾರೆ. ಆದರೆ ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಇಬ್ಬರೂ ಎರಡೂ ಇನಿಂಗ್ಸ್ ಗಳಲ್ಲಿ ವೈಫಲ್ಯ ಅನುಭವಿಸಿದ್ದರು.

ಇದೀಗ ಎರಡನೇ ಪಂದ್ಯಕ್ಕೆ ಟೀಂ ಇಂಡಿಯಾ ಘೋಷಣೆ ಮಾಡಲಾಗಿದೆ. ಈ ತಂಡದಲ್ಲೂ ಯಾವುದೇ ಬದಲಾವಣೆಯಿಲ್ಲ.

ತಂಡ ಇಂತಿದೆ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸರ್ಫರಾಜ್ ಖಾನ್, ರಿಷಭ್ ಪಂತ್ (ವಿ.ಕೀ), ಧ್ರುವ ಜ್ಯುರೆಲ್ (ವಿ.ಕೀ.), ಆರ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಸರ್ ಪಟೇಲ್, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ಆಕಾಶ್ ದೀಪ್, ಜಸ್ಪ್ರೀತ್ ಬುಮ್ರಾ, ಯಶ್ ದಯಾಳ್.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸೌರವ್ ಗಂಗೂಲಿ, ಪತ್ನಿಗೆ ಪ್ರಾಣ ಬೆದರಿಕೆ: ದೂರು ದಾಖಲು

ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಕೀರ್ತಿ ಪತಾಕೆಯನ್ನು ಬಾನೆತ್ತರಕ್ಕೆ ಹಾರಿಸಿದ ಶಿಲ್ಪಾಗೆ ಬಂಪರ್ ಬಹುಮಾನ

ಪದೇ ಪದೇ ಆಟಗಾರರಿಗೆ ಗಾಯ, ಫಿಟ್ನೆಸ್ ವಿಚಾರಕ್ಕೆ ಬಿಸಿಸಿಐ ಅಸಮಾಧಾನ

ರೋಹಿತ್ ಶರ್ಮಾರನ್ನು ಹೊರಹಾಕ್ತೀನಿ ಎಂದು ಅಜಿತ್ ಅಗರ್ಕರ್ ಗೆ ತಾನೇ ನಡೆಯುವ ಪರಿಸ್ಥಿತಿ: ಟ್ರೋಲ್

ಮುಂದಿನ ಸುದ್ದಿ
Show comments