Webdunia - Bharat's app for daily news and videos

Install App

ಟೀಂ ಇಂಡಿಯಾದ ಮತ್ತೊಬ್ಬ ಸ್ಟಾರ್ ಕ್ರಿಕೆಟಿಗನಿಗೆ ಗಾಯ: ಮುಂದಿನ ಪಂದ್ಯಕ್ಕೆ ಅಲಭ್ಯ

Krishnaveni K
ಶುಕ್ರವಾರ, 9 ಫೆಬ್ರವರಿ 2024 (13:24 IST)
Photo Courtesy: Twitter
ಮುಂಬೈ: ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾಗೆ ಗಾಯಾಳುಗಳದ್ದೇ ಚಿಂತೆಯಾಗಿದೆ. ಇದೀಗ ಗಾಯಾಳುಗಳ ಲಿಸ್ಟ್ ಗೆ ಮತ್ತೊಬ್ಬ ಆಟಗಾರನ ಸೇರ್ಪಡೆಯಾಗಿದೆ.

ಟೀಂ ಇಂಡಿಯಾ ಮಧ್ಯಮ ಕ್ರಮಾಂಕದ ಬ್ಯಾಟಿಗ ಶ್ರೇಯಸ್ ಅಯ್ಯರ್ ಗೆ ಮತ್ತೆ ಬೆನ್ನು ನೋವು ಮರುಕಳಿಸಿದ್ದು, ಮುಂದಿನ ಟೆಸ್ಟ್ ಪಂದ್ಯಗಳಿಗೆ ಲಭ್ಯರಾಗುವುದು ಅನುಮಾನ ಎನ್ನಲಾಗಿದೆ. ಅಭ್ಯಾಸದ ವೇಳೆ ಅಯ್ಯರ್ ಬೆನ್ನು ನೋವು ಅನುಭವಿಸಿದ್ದಾರೆ. ಹೀಗಾಗಿ ಅವರನ್ನು ಮುಂದಿನ ಮೂರು ಟೆಸ್ಟ್ ಪಂದ್ಯಗಳಿಂದ ಹೊರಗಿಡಲಾಗಿದೆ ಎಂಬ ಮಾತು ಕೇಳಿಬರುತ್ತಿದೆ.

ಈ ಬಗ್ಗೆ ಅಧಿಕೃತ ಮಾಹಿತಿ ಹೊರಬಂದಿಲ್ಲ. ಆದರೆ ಉಳಿದೆಲ್ಲಾ ಆಟಗಾರರ ಕಿಟ್ ವಿಶಾಖಪಟ್ಟಣಂನಿಂದ ರಾಜ್ ಕೋಟ್ ಗೆ ಕಳುಹಿಸಿಕೊಡಲಾಗಿದೆ. ಆದರೆ ಅಯ್ಯರ್ ಅವರ ಕಿಟ್ ಮಾತ್ರ ಕಳುಹಿಸಲಾಗಿಲ್ಲ. ಹೀಗಾಗಿ ಅಯ್ಯರ್ ಮುಂದಿನ ಪಂದ್ಯಗಳಿಗೆ ಅಲಭ್ಯರಾಗುತ್ತಾರರೆ ಎನ್ನಲಾಗಿದೆ.

ಇತ್ತೀಚೆಗಿನ ದಿನಗಳಲ್ಲಿ ಪದೇ ಪದೇ ಅಯ್ಯರ್ ಬೆನ್ನು ನೋವಿನ ಸಮಸ್ಯೆಗೊಳಗಾಗುತ್ತಿದ್ದಾರೆ. ಈ ಸರಣಿಯಲ್ಲಿ ಎರಡು ಪಂದ್ಯಗಳಲ್ಲಿ ಆಡಿಯೂ ಅವರಿಂದ ಹೇಳಿಕೊಳ್ಳುವಂತಹ ರನ್ ಬಂದಿಲ್ಲ. ಹೀಗಾಗಿ ಅಯ್ಯರ್ ಅನುಪಸ್ಥಿತಿ ತಂಡಕ್ಕೆ ಅಷ್ಟೊಂದು ಕಾಡದು. ಹಾಗಿದ್ದರೂ ಕೆಎಲ್ ರಾಹುಲ್ ನಂತಹ ಅನುಭವಿ ಆಟಗಾರರು ಮುಂದಿನ ಪಂದ್ಯಕ್ಕೆ ಕಮ್ ಬ್ಯಾಕ್ ಮಾಡದೇ ಇದ್ದರೆ ಅಯ್ಯರ್ ಅನುಪಸ್ಥಿತಿ ಭಾರತಕ್ಕೆ ದೊಡ್ಡ ಹೊಡೆತ ನೀಡಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಕೆಎಲ್ ರಾಹುಲ್ ಟೀಂ ಇಂಡಿಯಾಗೆ ನೀವೇ ಗತಿ

IND vs ENG: ದ್ವಿತೀಯ ಇನಿಂಗ್ಸ್ ನಲ್ಲಿ ಟೀಂ ಇಂಡಿಯಾಕ್ಕೆ ಇದೆಂಥಾ ಅವಸ್ಥೆ

ಶಮಿ ಡ್ರಾಪ್ ಮಾಡಿಸಿದ್ರು, ರೋಹಿತ್, ಕೊಹ್ಲಿ, ಅಶ್ವಿನ್ ನಿವೃತ್ತಿ ಮಾಡಿಸಿದ್ರು: ಗಂಭೀರ್ ವಿರುದ್ಧ ಆರೋಪ ಪಟ್ಟಿ

ಗೌತಮ್ ಗಂಭೀರ್ ತಾನಾಗಿಯೇ ಕೋಚ್ ಹುದ್ದೆ ಬಿಟ್ರೆ ಒಳ್ಳೇದು

ಮಹಿಳಾ ಚೆಸ್ ವಿಶ್ವಕಪ್ ಫೈನಲ್‌ಗೆ ದಿವ್ಯಾ ದೇಶಮುಖ್‌, ಕೋನೇರು ಹಂಪಿ: ಯಾರೇ ಗೆದ್ದರೂ ಭಾರತಕ್ಕೆ ಕಿರೀಟ

ಮುಂದಿನ ಸುದ್ದಿ
Show comments