Webdunia - Bharat's app for daily news and videos

Install App

ಟೀಂ ಇಂಡಿಯಾಗೆ ಕೈಕೊಟ್ಟ ಬ್ಯಾಟ್ಸ್ ಮನ್ ಗಳು

Webdunia
ಬುಧವಾರ, 17 ಮಾರ್ಚ್ 2021 (09:01 IST)
ಅಹಮ್ಮದಾಬಾದ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ತೃತೀಯ ಟಿ20 ಪಂದ್ಯವನ್ನು ಇಂಗ್ಲೆಂಡ್ 8 ವಿಕೆಟ್ ಗಳಿಂದ ಗೆದ್ದು ಕೊಂಡಿದೆ. ಇದರೊಂದಿಗೆ ಸರಣಿಯಲ್ಲಿ 2-1 ರಿಂದ ಮುನ್ನಡೆ ಸಾಧಿಸಿದೆ.

 

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾಗೆ ಬ್ಯಾಟ್ಸ್ ಮನ್ ಗಳು ಕೈಕೊಟ್ಟರು. ಆರಂಭಿಕ ಕೆಎಲ್ ರಾಹುಲ್ ಗೆ ಮತ್ತೊಂದು ಅವಕಾಶ ನೀಡಲಾಯಿತಾದರೂ ಅದನ್ನು ಅವರು ಬಳಸಿಕೊಳ್ಳುವಲ್ಲಿ ಸಂಪೂರ್ಣ ವಿಫಲರಾದರು. ಮತ್ತೆ ಶೂನ್ಯಕ್ಕೆ ನಿರ್ಗಮಿಸಿದರು. ಹಿಟ್ ಮ್ಯಾನ್ ರೋಹಿತ್ ಶರ್ಮಾ ತಮ್ಮ ಖ್ಯಾತಿಗೆ ತಕ್ಕ ಆಟವಾಡಲಿಲ್ಲ. ಅವರ ಕೊಡುಗೆ ಕೇವಲ 17 ರನ್.

ಕಳೆದ ಪಂದ್ಯದ ಹೀರೋ ಇಶಾನ್ ಕಿಶನ್ ಕೇವಲ 4 ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡರು. ಇದಾದ ಬಳಿಕ ನಾಯಕನ ಆಟವಾಡಿದ ವಿರಾಟ್ ಕೊಹ್ಲಿ 46 ಎಸೆತಗಳಿಂದ 77 ರನ್ ಗಳಿಸಿ ಅಜೇಯರಾಗುಳಿದರು. ಕೊಹ್ಲಿಯ ಅಬ್ಬರದ ಆಟದಿಂದಾಗಿ ಟೀಂ ಇಂಡಿಯಾ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 156 ರನ್ ಗಳಿಸಲು ಶಕ್ತವಾಯಿತು.

ಈ ಮೊತ್ತವನ್ನು ಆತ್ಮವಿಶ್ವಾಸದಿಂದಲೇ ಬೆನ್ನತ್ತಿದ ಇಂಗ್ಲೆಂಡ್ 18.2 ಓವರ್ ಗಳಲ್ಲಿ 2 ವಿಕೆಟ್ ಕಳೆದುಕೊಂಡು158 ರನ್ ಗಳಿಸುವ ಮೂಲಕ ಗೆಲುವಿನ ನಗೆ ಬೀರಿತು. ಇಂಗ್ಲೆಂಡ್ ಪರ ಅಬ್ಬರದ ಆಟವಾಡಿದ ಆರಂಭಿಕ ಜೋಸ್ ಬಟ್ಲರ್ ಅಜೇಯ 82 ರನ್ ಗಳಿಸಿದರು. ಜಾನಿ ಬೇರ್ ಸ್ಟೋ 40 ರನ್ ಗಳಿಸಿದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ENG vs IND: ಇಂಗ್ಲೆಂಡ್ ಗೆಲುವನ್ನು ಕಸಿದ ಸಿರಾಜ್ ಬೆಂಕಿಯ ಎಸೆತ, ಆಂಗ್ಲರ ನೆಲದಲ್ಲಿ ಗೆದ್ದು ಬೀಗಿದ ಗಿಲ್ ಪಡೆ

IND vs ENG: ಆ ಒಂದು ಯಾರ್ಕರ್ ಮೊಹಮ್ಮದ್ ಸಿರಾಜ್ ಜೀವನದಲ್ಲೇ ಮರೆಯಲ್ಲ: video

IND vs ENG: ಗೌತಮ್ ಗಂಭೀರ್ ಗೆ ಅಹಂ ಜಾಸ್ತಿಯಾಯ್ತು, ಇಲ್ಲಾಂದ್ರೆ ಹೀಗೆ ಮಾಡ್ತಿದ್ರಾ

ಕಣ್ಣು ಕುಕ್ಕಿದ ಇಂಗ್ಲೆಂಡ್ ಪ್ರೇಕ್ಷಕನ ಕೆಂಪು ಟೀ ಶರ್ಟ್‌, ಕ್ರೀಸ್‌ನಲ್ಲಿದ್ದ ಜಡೇಜಾ ಮಾಡಿದ್ದೇನು ಗೊತ್ತಾ

ಕೆಣಕಿದ ಕ್ರಾಲಿಗೆ ತಕ್ಕ ಉತ್ತರ ನೀಡಿದ ಮೊಹಮ್ಮದ್‌ ಸಿರಾಜ್‌: ಕುತೂಹಲಕರ ಘಟ್ಟದತ್ತ ಐದನೇ ಟೆಸ್ಟ್‌

ಮುಂದಿನ ಸುದ್ದಿ
Show comments