ಟೀಂ ಇಂಡಿಯಾಗೆ ಕೈಕೊಟ್ಟ ಬ್ಯಾಟ್ಸ್ ಮನ್ ಗಳು

Webdunia
ಬುಧವಾರ, 17 ಮಾರ್ಚ್ 2021 (09:01 IST)
ಅಹಮ್ಮದಾಬಾದ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ತೃತೀಯ ಟಿ20 ಪಂದ್ಯವನ್ನು ಇಂಗ್ಲೆಂಡ್ 8 ವಿಕೆಟ್ ಗಳಿಂದ ಗೆದ್ದು ಕೊಂಡಿದೆ. ಇದರೊಂದಿಗೆ ಸರಣಿಯಲ್ಲಿ 2-1 ರಿಂದ ಮುನ್ನಡೆ ಸಾಧಿಸಿದೆ.

 

ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾಗೆ ಬ್ಯಾಟ್ಸ್ ಮನ್ ಗಳು ಕೈಕೊಟ್ಟರು. ಆರಂಭಿಕ ಕೆಎಲ್ ರಾಹುಲ್ ಗೆ ಮತ್ತೊಂದು ಅವಕಾಶ ನೀಡಲಾಯಿತಾದರೂ ಅದನ್ನು ಅವರು ಬಳಸಿಕೊಳ್ಳುವಲ್ಲಿ ಸಂಪೂರ್ಣ ವಿಫಲರಾದರು. ಮತ್ತೆ ಶೂನ್ಯಕ್ಕೆ ನಿರ್ಗಮಿಸಿದರು. ಹಿಟ್ ಮ್ಯಾನ್ ರೋಹಿತ್ ಶರ್ಮಾ ತಮ್ಮ ಖ್ಯಾತಿಗೆ ತಕ್ಕ ಆಟವಾಡಲಿಲ್ಲ. ಅವರ ಕೊಡುಗೆ ಕೇವಲ 17 ರನ್.

ಕಳೆದ ಪಂದ್ಯದ ಹೀರೋ ಇಶಾನ್ ಕಿಶನ್ ಕೇವಲ 4 ರನ್ ಗಳಿಸಿ ಪೆವಿಲಿಯನ್ ಸೇರಿಕೊಂಡರು. ಇದಾದ ಬಳಿಕ ನಾಯಕನ ಆಟವಾಡಿದ ವಿರಾಟ್ ಕೊಹ್ಲಿ 46 ಎಸೆತಗಳಿಂದ 77 ರನ್ ಗಳಿಸಿ ಅಜೇಯರಾಗುಳಿದರು. ಕೊಹ್ಲಿಯ ಅಬ್ಬರದ ಆಟದಿಂದಾಗಿ ಟೀಂ ಇಂಡಿಯಾ ನಿಗದಿತ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 156 ರನ್ ಗಳಿಸಲು ಶಕ್ತವಾಯಿತು.

ಈ ಮೊತ್ತವನ್ನು ಆತ್ಮವಿಶ್ವಾಸದಿಂದಲೇ ಬೆನ್ನತ್ತಿದ ಇಂಗ್ಲೆಂಡ್ 18.2 ಓವರ್ ಗಳಲ್ಲಿ 2 ವಿಕೆಟ್ ಕಳೆದುಕೊಂಡು158 ರನ್ ಗಳಿಸುವ ಮೂಲಕ ಗೆಲುವಿನ ನಗೆ ಬೀರಿತು. ಇಂಗ್ಲೆಂಡ್ ಪರ ಅಬ್ಬರದ ಆಟವಾಡಿದ ಆರಂಭಿಕ ಜೋಸ್ ಬಟ್ಲರ್ ಅಜೇಯ 82 ರನ್ ಗಳಿಸಿದರು. ಜಾನಿ ಬೇರ್ ಸ್ಟೋ 40 ರನ್ ಗಳಿಸಿದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

T20 WC: ಟೀಂ ಇಂಡಿಯಾ ಗೆಲುವಿಗೆ ಆ ಎರಡು ಶಾಟ್ ಕಾರಣ, ಯಾರೂ ಅದರ ಬಗ್ಗೆ ಮಾತಾಡಲ್ಲ ಎಂದು ಬೇಸರಿಸಿದ ಜಸ್ಪ್ರೀತ್ ಬುಮ್ರಾ

T20 WC: ಟೀಂ ಇಂಡಿಯಾಗೆ ಸೆಮಿಫೈನಲ್ ನಲ್ಲಿ ಯಾರು ಎದುರಾಳಿ, ಯಾವಾಗ ಇಲ್ಲಿದೆ ವಿವರ

T20 WC: ಅಭಿಷೇಕ್ ಬಿಟ್ಟು ಸಂಜು ಹಾಕ್ಲಾ ಎಂದಿದ್ದ ಸೂರ್ಯಕುಮಾರ್ ಯಾದವ್: ಇದೀಗ ಫುಲ್ ಟ್ರೋಲ್

Ind vs WI, T20 WC: ಟೀಕೆಗಳಿಗೆ ಅಬ್ಬರದ ಬ್ಯಾಟಿಂಗ್‌ನಿಂದಲೇ ಉತ್ತರಿಸಿದ ಸಂಜು ಸ್ಯಾಮ್ಸನ್‌

ದುಬೈನಲ್ಲಿ ಸಿಲುಕಿದ ಬ್ಯಾಡ್ಮಿಂಟನ್‌ ತಾರೆ ಪಿ.ವಿ. ಸಿಂಧು: ವಿಮಾನ ನಿಲ್ದಾಣದಿಂದಲೇ ಹೇಳಿದ್ದೇನು

ಮುಂದಿನ ಸುದ್ದಿ
Show comments