Select Your Language

Notifications

webdunia
webdunia
webdunia
webdunia

Gautam Gambhir: ಟೀಂ ಇಂಡಿಯಾ ಕೋಚ್ ಗೌತಮ್ ಗಂಭೀರ್ ಗೆ ಕೊಲೆ ಬೆದರಿಕೆ

Gautam Gambhir

Krishnaveni K

ಮುಂಬೈ , ಗುರುವಾರ, 24 ಏಪ್ರಿಲ್ 2025 (10:24 IST)
ಮುಂಬೈ: ಟೀಂ ಇಂಡಿಯಾ ಕೋಚ್, ಮಾಜಿ ಸಂಸದ ಗೌತಮ ಗಂಭೀರ್ ಗೆ ಐಸಿಸ್ ಕಾಶ್ಮೀರ ಖಾತೆಯಿಂದ ಕೊಲೆ ಬೆದರಿಕೆ ಬಂದಿದ್ದು, ತಕ್ಷಣವೇ ಪೊಲೀಸರಿಗೆ ದೂರು ನೀಡಿದ್ದಾರೆ.

ಟೀಂ ಇಂಡಿಯಾ ಕೋಚ್ ಆಗಿರುವ ಗೌತಮ್ ಗಂಭೀರ್ ಈ ಹಿಂದೆ ಬಿಜೆಪಿ ಸಂಸದರಾಗಿದ್ದಾಗಲೂ ಅವರಿಗೆ ಇದೇ ಖಾತೆಯಿಂದ ಕೊಲೆ ಬೆದರಿಕೆ ಬಂದಿತ್ತು. ಇದೀಗ ಎರಡನೇ ಬಾರಿಗೆ ಕೊಲೆ ಬೆದರಿಕೆ ಬಂದಿದೆ. ಈಮೇಲ್ ಮೂಲಕ ‘ಐ ಕಿಲ್ ಯೂ’ ಎಂದು ಮೆಸೇಜ್ ಮಾಡಲಾಗಿದೆ.

ಇದರ ಬೆನ್ನಲ್ಲೇ ಅಲರ್ಟ್ ಆದ ಗೌತಮ್ ಗಂಭೀರ್ ರಾಜೇಂದ್ರ ನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಮೊನ್ನೆಯಷ್ಟೇ ಕಾಶ್ಮೀರದಲ್ಲಿ ಉಗ್ರ ದಾಳಿಯ ಬೆನ್ನಲ್ಲೇ ಗಂಭೀರ್ ಗೆ ಈ ಬೆದರಿಕೆ ಬಂದಿರುವುದು ಗಮನಿಸಬೇಕಾದ ಅಂಶವಾಗಿದೆ.

ಪಹಲ್ಗಾಮ್ ನಲ್ಲಿ ಉಗ್ರ ದಾಳಿಯಾದ ಬಳಿಕ ತಕ್ಷಣ ಗೌತಮ್ ಗಂಭೀರ್ ಟ್ವೀಟ್ ಮಾಡಿ ಘಟನೆಯನ್ನು ಖಂಡಿಸಿದ್ದರು. ಉಗ್ರರನ್ನು ಸದೆಬಡಿಯಬೇಕು ಎಂದು ಆಗ್ರಹಿಸಿದ್ದರು. ಇದರ ಬೆನ್ನಲ್ಲೇ ಅವರಿಗೆ ಬೆದರಿಕೆ ಈಮೇಲ್ ಬಂದಿದೆ.


Share this Story:

Follow Webdunia kannada

ಮುಂದಿನ ಸುದ್ದಿ

IPL 2025 RCB vs RR: ತವರಿನಲ್ಲಿ ಮಾನ ವಾಪಸ್ ಪಡೆಯಲು ಆರ್ ಸಿಬಿಗೆ ಇಂದು ಒಳ್ಳೆ ಚಾನ್ಸ್