Webdunia - Bharat's app for daily news and videos

Install App

Gautam Gambhir: ಟೀಂ ಇಂಡಿಯಾ ಕೋಚ್ ಗೌತಮ್ ಗಂಭೀರ್ ಗೆ ಕೊಲೆ ಬೆದರಿಕೆ

Krishnaveni K
ಗುರುವಾರ, 24 ಏಪ್ರಿಲ್ 2025 (10:24 IST)
ಮುಂಬೈ: ಟೀಂ ಇಂಡಿಯಾ ಕೋಚ್, ಮಾಜಿ ಸಂಸದ ಗೌತಮ ಗಂಭೀರ್ ಗೆ ಐಸಿಸ್ ಕಾಶ್ಮೀರ ಖಾತೆಯಿಂದ ಕೊಲೆ ಬೆದರಿಕೆ ಬಂದಿದ್ದು, ತಕ್ಷಣವೇ ಪೊಲೀಸರಿಗೆ ದೂರು ನೀಡಿದ್ದಾರೆ.

ಟೀಂ ಇಂಡಿಯಾ ಕೋಚ್ ಆಗಿರುವ ಗೌತಮ್ ಗಂಭೀರ್ ಈ ಹಿಂದೆ ಬಿಜೆಪಿ ಸಂಸದರಾಗಿದ್ದಾಗಲೂ ಅವರಿಗೆ ಇದೇ ಖಾತೆಯಿಂದ ಕೊಲೆ ಬೆದರಿಕೆ ಬಂದಿತ್ತು. ಇದೀಗ ಎರಡನೇ ಬಾರಿಗೆ ಕೊಲೆ ಬೆದರಿಕೆ ಬಂದಿದೆ. ಈಮೇಲ್ ಮೂಲಕ ‘ಐ ಕಿಲ್ ಯೂ’ ಎಂದು ಮೆಸೇಜ್ ಮಾಡಲಾಗಿದೆ.

ಇದರ ಬೆನ್ನಲ್ಲೇ ಅಲರ್ಟ್ ಆದ ಗೌತಮ್ ಗಂಭೀರ್ ರಾಜೇಂದ್ರ ನಗರ ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದಾರೆ. ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಮೊನ್ನೆಯಷ್ಟೇ ಕಾಶ್ಮೀರದಲ್ಲಿ ಉಗ್ರ ದಾಳಿಯ ಬೆನ್ನಲ್ಲೇ ಗಂಭೀರ್ ಗೆ ಈ ಬೆದರಿಕೆ ಬಂದಿರುವುದು ಗಮನಿಸಬೇಕಾದ ಅಂಶವಾಗಿದೆ.

ಪಹಲ್ಗಾಮ್ ನಲ್ಲಿ ಉಗ್ರ ದಾಳಿಯಾದ ಬಳಿಕ ತಕ್ಷಣ ಗೌತಮ್ ಗಂಭೀರ್ ಟ್ವೀಟ್ ಮಾಡಿ ಘಟನೆಯನ್ನು ಖಂಡಿಸಿದ್ದರು. ಉಗ್ರರನ್ನು ಸದೆಬಡಿಯಬೇಕು ಎಂದು ಆಗ್ರಹಿಸಿದ್ದರು. ಇದರ ಬೆನ್ನಲ್ಲೇ ಅವರಿಗೆ ಬೆದರಿಕೆ ಈಮೇಲ್ ಬಂದಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಮತ್ತೆ ಅಬ್ಬರಿಸಿದ ರೋಹಿತ್‌ ಶರ್ಮಾ: ಫೀನಿಕ್ಸ್‌ನಂತೆ ಎದ್ದು ಸತತ ನಾಲ್ಕನೇ ಪಂದ್ಯ ಗೆದ್ದ ಮುಂಬೈ

MI vs SRH Match: ಬೋಲ್ಟ್‌ ದಾಳಿಗೆ ತತ್ತರಿಸಿದ ಹೈದರಾಬಾದ್‌: ಮುಂಬೈ ಗೆಲುವಿಗೆ 144 ರನ್‌ಗಳ ಗುರಿ

Pahalgam Terror Attack:ಚಿಯರ್‌ಲೀಡರ್ಸ್‌, ಪಟಾಕಿ ಸದ್ದಿಲ್ಲದೆ ನಡೆಯುತ್ತಿರುವ SRH vs MI ಪಂದ್ಯಾಟ

MI vs SRH Match: ಟಾಸ್‌ ಗೆದ್ದ ಮುಂಬೈ ಇಂಡಿಯನ್ಸ್‌, ಹೈದರಾಬಾದ್‌ಗೆ ಹೆಚ್ಚಿದ ಒತ್ತಡ

KL Rahul viral video: ಕೆಎಲ್ ರಾಹುಲ್, ಸಂಜೀವ್ ಗೊಯೆಂಕಾ ಭೇಟಿ: ಅವಮಾನ ಮಾಡಿದ್ಮೇಲೆ ಯಾವ ಮುಖ ಇಟ್ಕೊಂಡು ಬಂದ್ರಿ

ಮುಂದಿನ ಸುದ್ದಿ
Show comments