Webdunia - Bharat's app for daily news and videos

Install App

ಕಾಟಾಚಾರಕ್ಕೆ ನಡೆಯುತ್ತಿದೆಯಾ ಟೀಂ ಇಂಡಿಯಾ ಕೋಚ್ ಆಯ್ಕೆ ಪ್ರಕ್ರಿಯೆ?

Webdunia
ಭಾನುವಾರ, 28 ಜುಲೈ 2019 (09:08 IST)
ಮುಂಬೈ: ಟೀಂ ಇಂಡಿಯಾ ಹಾಲಿ ಕೋಚ್ ರವಿಶಾಸ್ತ್ರಿ ಅವಧಿ ಮುಕ್ತಾಯವಾದ ಹಿನ್ನಲೆಯಲ್ಲಿ ಹೊಸ ಕೋಚ್ ಆಯ್ಕೆಗೆ ಬಿಸಿಸಿಐ ಅರ್ಜಿ ಆಹ್ವಾನಿಸಿದ್ದು, ಕಪಿಲ್ ದೇವ್ ನೇತೃತ್ವದ ಸಮಿತಿ ಹೊಸ ಕೋಚ್ ಆಯ್ಕೆ ಮಾಡುವುದಾಗಿ ಹೇಳಿದೆ.


ಆದರೆ ಈ ಆಯ್ಕೆ ಪ್ರಕ್ರಿಯೆ ಕೇವಲ ಕಾಟಾಚಾರಕ್ಕೆ ನಡೆಯುತ್ತಿದೆ ಎನ್ನಲಾಗುತ್ತಿದೆ. ನಾಯಕ ವಿರಾಟ್ ಕೊಹ್ಲಿ ಜತೆಗೆ ಉತ್ತಮ ಬಾಂಧವ್ಯ ಹೊಂದಿರುವ ರವಿಶಾಸ್ತ್ರಿಯನ್ನೇ ಮತ್ತೆ ಕೋಚ್ ಆಗಿ ಆಯ್ಕೆ ಮಾಡುವುದಾಗಿ ಸಲಹಾ ಸಮಿತಿ ಸದಸ್ಯರಲ್ಲೊಬ್ಬರಾದ ಅಂಶುಮಾನ್ ಗಾಯಕ್ ವಾಡ್ ಸುಳಿವು ನೀಡಿದ್ದಾರೆ.

ಅನಿಲ್ ಕುಂಬ್ಳೆ-ಕೊಹ್ಲಿ ವೈಮನಸ್ಯದ ನಂತರ ಬಿಸಿಸಿಐ ಕೂಡಾ ನಾಯಕನ ಮೆಚ್ಚಿನ ಕೋಚ್ ಆಯ್ಕೆ ಮಾಡುವುದರತ್ತಲೇ ಹೆಚ್ಚು ಒಲವು ಹೊಂದಿದೆ. ಹೀಗಾಗಿ ಸದ್ಯಕ್ಕೆ ಕೊಹ್ಲಿ ಮೆಚ್ಚಿನ ರವಿಶಾಸ್ತ್ರಿಯನ್ನೇ ಆಯ್ಕೆ ಮಾಡುವ ಸಿದ್ಧತೆಯಲ್ಲಿದೆ. ಹಾಗಾಗಿ ಮುಖ್ಯ ಕೋಚ್ ಆಯ್ಕೆ ವಿಚಾರ ಕೇವಲ ಕಾಟಾಚಾರಕ್ಕೆ ನಡೆಯುತ್ತಿದೆ ಎನ್ನುವುದು ಸ್ಪಷ್ಟವಾಗಿದೆ.

ಆದರೆ ಬ್ಯಾಟಿಂಗ್ ಮತ್ತು ಬೌಲಿಂಗ್ ಕೋಚ್ ಹುದ್ದೆಗಳು ಇನ್ನೂ ಮುಕ್ತವಾಗಿದೆ ಎಂದು ಗಾಯಕ್ ವಾಡ್ ಹೇಳಿದ್ದಾರೆ. ಹೀಗಾಗಿ ಈ ಕೋಚಿಂಗ್ ಸ್ಥಾನಗಳಿಗೆ ಹೊಸಬರನ್ನು ಆಯ್ಕೆ ಮಾಡುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ಮುಂದಿನ ಸುದ್ದಿ
Show comments