ಕಾಮನಬಿಲ್ಲಿನ ನಾಡಿನಲ್ಲಿ ಕೊನೆಗೂ ಟೀಂ ಇಂಡಿಯಾ ಕೈಗೆ ಸಿಗದ ಸರಣಿ ಗೆಲುವು

Webdunia
ಶುಕ್ರವಾರ, 14 ಜನವರಿ 2022 (17:11 IST)
ಕೇಪ್ ಟೌನ್: ಎಲ್ಲಾ ದೇಶಗಳಲ್ಲೂ ದಿಗ್ವಿಜಯ ಸಾಧಿಸಿದ್ದ ಟೀಂ ಇಂಡಿಯಾಗೆ ದ.ಆಫ್ರಿಕಾದಲ್ಲಿ ಟೆಸ್ಟ್ ಸರಣಿ ಗೆಲ್ಲುವ ಕನಸಿತ್ತು. ಈ ಬಾರಿ ಕೊಹ್ಲಿ-ದ್ರಾವಿಡ್ ಕಾಂಬಿನೇಷನ್ ನಲ್ಲಿ ಭಾರತ ಟೆಸ್ಟ್ ಸರಣಿ ಗೆಲ್ಲುತ್ತದೆ ಎಂದೇ ಎಲ್ಲರ ನಂಬಿಕೆಯಾಗಿತ್ತು. ಆದರೆ ಕಾಮನಬಿಲ್ಲಿನ ನಾಡಿನಲ್ಲಿ ಟೆಸ್ಟ್ ಸರಣಿ ಗೆಲ್ಲುವ ಕನಸು ಕನಸಾಗಿಯೇ ಉಳಿದಿದೆ.

ಮೂರನೇ ಟೆಸ್ಟ್ ನಲ್ಲಿ ಆಫ್ರಿಕಾ ವಿರುದ್ಧ 7 ವಿಕೆಟ್ ಗಳಿಂದ ಸೋತ ಟೀಂ ಇಂಡಿಯಾ 1-2 ಅಂತರದಿಂದ ಸೋಲು ಅನುಭವಿಸಿತು. ನಿನ್ನೆ 101 ರನ್ ಗೆ 2 ವಿಕೆಟ್ ಕಳೆದುಕೊಂಡಿದ್ದ ಆಫ್ರಿಕಾ ಇಂದು ಕೇವಲ 3 ವಿಕೆಟ್ ಕಳೆದುಕೊಂಡು 212 ರನ್ ಗಳಿಸುವ ಮೂಲಕ ಗೆಲುವಿನ ಗುರಿ ತಲುಪಿತು. ಇದರೊಂದಿಗೆ ಈ ಬಾರಿ ದ.ಆಫ್ರಿಕಾದಲ್ಲಿ ಐತಿಹಾಸಿಕ ಟೆಸ್ಟ್ ಸರಣಿ ಗೆಲ್ಲುವ ಮಹದಾಸೆ ಹೊತ್ತಿದ್ದ ಕನಸು ಭಗ್ನವಾಯಿತು.

ಈ ಸರಣಿ ಸೋಲಿಗೆ ಭಾರತ ತನ್ನ ಬ್ಯಾಟಿಗರನ್ನೇ ಹಳಿದುಕೊಳ್ಳಬೇಕು. ದ್ವಿತೀಯ ಇನಿಂಗ್ಸ್ ನಲ್ಲಿ 198 ರನ್ ಗಳ ಪೈಕಿ ರಿಷಬ್ ಪಂತ್ ಒಬ್ಬರೇ 100 ರನ್ ಗಳಿಸಿದ್ದರು. ಉಳಿದಂತೆ 28 ರನ್ ಇತರೆ ರೂಪದಲ್ಲಿ ಬಂದಿತ್ತು. ಹಾಗಿದ್ದರೆ ಬಾಕಿ ಉಳಿದ 9 ಬ್ಯಾಟಿಗರಿಂದ ಬಂದ ರನ್ ಗಳೆಷ್ಟೆಂದು ನೋಡಿದರೆ ಬ್ಯಾಟಿಗರ ವೈಫಲ್ಯ ಎಷ್ಟಿತ್ತು ಎಂಬುದು ಗೊತ್ತಾಗುತ್ತದೆ. ಇನ್ನಾದರೂ ಟೀಂ ಇಂಡಿಯಾ ಟೆಸ್ಟ್ ಆಡಬಲ್ಲ ಬ್ಯಾಟಿಗರನ್ನು ತಯಾರು ಮಾಡುವುದರತ್ತ ಗಮನಹರಿಸಲೇಬೇಕು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ, ಪಾಲಾಶ್ ಮುಚ್ಚಲ್ ಹೊಸ ಮದುವೆ ದಿನಾಂಕ ಫಿಕ್ಸ್

ವಿವಾದಗಳ ಬೆನ್ನಲ್ಲೇ ಏರ್ ಪೋರ್ಟ್ ನಲ್ಲಿ ಆಯ್ಕೆ ಸಮಿತಿಯ ಪ್ರಗ್ಯಾನ್ ಓಝಾ ಜೊತೆ ಕೊಹ್ಲಿ ಗಂಭೀರ ಚರ್ಚೆ video

ವಿರಾಟ್ ಕೊಹ್ಲಿ ಶತಕ ಸಿಡಿಸಿದಾಗ ಅಗ್ರೆಸಿವ್ ಆಗಿ ರೋಹಿತ್ ಶರ್ಮಾ ಹೇಳಿದ್ದೇನು: ಕೊನೆಗೂ ರಿವೀಲ್

ಗೌತಮ್ ಗಂಭೀರ್ ವಿರುದ್ಧ ಸೀನಿಯರ್ ಆಟಗಾರರು ಸಿಟ್ಟಾಗಿರುವುದಕ್ಕೆ ಕಾರಣ ಬಯಲು

ವಿರಾಟ್ ಕೊಹ್ಲಿ, ಧೋನಿ ಮೇಲೆ ಗೌತಮ್ ಗಂಭೀರ್ ಗೆ ವೈಮನಸ್ಯ ಹುಟ್ಟಿಕೊಂಡಿದ್ದು ಇದೇ ಕಾರಣಕ್ಕಾ

ಮುಂದಿನ ಸುದ್ದಿ
Show comments