Webdunia - Bharat's app for daily news and videos

Install App

ಟೀಂ ಇಂಡಿಯಾವನ್ನು ಪಾಕಿಸ್ತಾನಕ್ಕೆ ಕಳುಹಿಸಿದ್ದ ವಾಜಪೇಯಿಯನ್ನು ಕ್ರಿಕೆಟಿಗ ಸೆಹ್ವಾಗ್ ಸ್ಮರಿಸಿದ್ದು ಹೀಗೆ!

Webdunia
ಶುಕ್ರವಾರ, 17 ಆಗಸ್ಟ್ 2018 (09:01 IST)
ನವದೆಹಲಿ: ಟೀಂ ಇಂಡಿಯಾ 2004 ರಲ್ಲಿ ಮಹತ್ವದ ಪಾಕಿಸ್ತಾನ ವಿರುದ್ಧ ಕ್ರಿಕೆಟ್ ಸರಣಿ ಆಡಲು ಪಾಕ್ ನೆಲಕ್ಕೆ ಹೋಗಬೇಕೋ ಬೇಡವೋ ಎಂಬ ಗೊಂದಲದಲ್ಲಿದ್ದಾಗ ಅಂದಿನ ಪ್ರಧಾನಿ ವಾಜಪೇಯಿ ಧೈರ್ಯ ಮಾಡಿ ನಮ್ಮ ಕ್ರಿಕೆಟಿಗರನ್ನು ಎದುರಾಳಿ ರಾಷ್ಟ್ರಕ್ಕೆ ಕಳುಹಿಸಲು ಒಪ್ಪಿಗೆ ಕೊಟ್ಟಿದ್ದರು.

ಸೌರವ್ ಗಂಗೂಲಿ ನೇತೃತ್ವದ ಟೀಂ ಇಂಡಿಯಾ ಪಾಕ್ ಗೆ ವಿಮಾನವೇರುವ ಮುನ್ನ ಅಂದಿನ ಪ್ರಧಾನಿ ವಾಜಪೇಯಿ ಅವರನ್ನು ಭೇಟಿ ಮಾಡಿ ಫೋಟೋ ಸೆಷನ್ ನಡೆಸಿತು. ಈ ಸರಣಿ ಎರಡು ದೇಶಗಳ ನಡುವೆ ಹೊಸ ಬಾಂಧವ್ಯ ಸೃಷ್ಟಿಸುವ ಸರಣಿಯಾಗಲಿ ಎಂದು ಅಟಲ್ ಮನದುಂಬಿ ಹಾರೈಸಿ ಕಳುಹಿಸಿದ್ದರು.

ಇದೀಗ ನಮ್ಮೆಲ್ಲರನ್ನು ಅಗಲಿದ ಮಹಾನ್ ನಾಯಕನಿಗೆ ಅಂದು ತಂಡದಲ್ಲಿದ್ದ ವೀರೇಂದ್ರ ಸೆಹ್ವಾಗ್, ಅನಿಲ್ ಕುಂಬ್ಳೆ, ಸಚಿನ್ ತೆಂಡುಲ್ಕರ್ ಶ್ರದ್ಧಾಂಜಲಿ ಅರ್ಪಿಸಿದ್ದಾರೆ. ಸೆಹ್ವಾಗ್ ಅಂತೂ ತಾವು ಅಂದು ವಾಜಪೇಯಿ ಜತೆ ತೆಗೆಸಿದ್ದ ಟೀಂ ಇಂಡಿಯಾ ಫೋಟೋ ಹಾಕಿ ಅವರ ಬಗ್ಗೆ ಕವಿತೆಯ ಸಾಲುಗಳನ್ನೇ ಬರೆದು ಸಂತಾಪ ವ್ಯಕ್ತಪಡಿಸಿದ್ದಾರೆ.

ಇನ್ನು ಅನಿಲ್ ಕುಂಬ್ಳೆ, ಸಚಿನ್ ತೆಂಡುಲ್ಕರ್ ಭಾರತ ಮಹಾನ್ ನಾಯಕನನ್ನು ಕಳೆದುಕೊಂಡಿದೆ. ಇಂತಹ ಪುತ್ರ ಭಾರತ ಮಾತೆಗೆ ಇನ್ನೊಂದು ಬಾರಿ ಹುಟ್ಟಲಾರ ಎಂದು ಇಬ್ಬರೂ ದಿಗ್ಗಜ ಕ್ರಿಕೆಟಿಗರು ಬಣ್ಣಿಸಿದ್ದಾರೆ.

ಇವರು ಮಾತ್ರವಲ್ಲದೆ, ಸುರೇಶ್ ರೈನಾ, ಹರ್ಭಜನ್ ಸಿಂಗ್, ರವಿಚಂದ್ರನ್ ಅಶ್ವಿನ್ ಸೇರಿದಂತೆ ಕ್ರಿಕೆಟ್ ಲೋಕವೇ ದಿಗ್ಗಜ ನಾಯಕನ ನಿಧನಕ್ಕೆ ಕಂಬನಿ ಮಿಡಿದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Shubman Gill: ಸಚಿನ್, ಕೊಹ್ಲಿಗೇ ಇಲ್ಲದ ಅಹಂ ಶುಬ್ಮನ್ ಗಿಲ್ ತಲೆಗೆ ಹತ್ತಿದ್ಯಾ: ನೆಟ್ಟಿಗರ ಆಕ್ರೋಶ

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

ಮುಂದಿನ ಸುದ್ದಿ
Show comments