Webdunia - Bharat's app for daily news and videos

Install App

ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದ ತಕ್ಷಣ ಟೀಂ ಇಂಡಿಯಾ ಆಟಗಾರರು ಮಾಡಿದ್ದೇನು ನೋಡಿ

Krishnaveni K
ಗುರುವಾರ, 4 ಜುಲೈ 2024 (08:50 IST)
Photo Credit: X
ದೆಹಲಿ: ಟಿ20 ವಿಶ್ವಕಪ್ 2024 ರ ಫೈನಲ್ ಗೆದ್ದು ಚಾಂಪಿಯನ್ ಆಗಿರುವ ಟೀಂ ಇಂಡಿಯಾ ಆಟಗಾರರು ದೆಹಲಿ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದು, ಅಭಿಮಾನಿಗಳಿಂದ ಭಾರೀ ಸ್ವಾಗತ ಸಿಕ್ಕಿದೆ.

ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಇಂದು ಬೆಳಿಗ್ಗೆ ವಿಶೇಷ ವಿಮಾನದಲ್ಲಿ ದೆಹಲಿಯ ವಿಮಾನ ನಿಲ್ದಾಣಕ್ಕೆ ಬಂದಿಳಿಯಿತು. ಈ ವೇಳೆ ಹನಿ ಮಳೆಯಾಗುತ್ತಿದ್ದರೂ ಜನ ಕ್ರಿಕೆಟಿಗರನ್ನು ನೋಡಲು ಸಾಲುಗಟ್ಟಿ ನಿಂತಿದ್ದರು. ವಿಶೇಷವಾಗಿ ಕ್ರಿಕೆಟಿಗರ ಸ್ವಾಗತಕ್ಕೆ ಸಾಂಪ್ರದಾಯಿಕ ಉಡುಗೆ ತೊಟ್ಟು ಡೋಲು ಬಡಿದು ಬಾಂಗ್ರಾ ನೃತ್ಯಕ್ಕೆ ನೃತ್ಯಗಾರರು ಹೆಜ್ಜೆ ಹಾಕುತ್ತಿದ್ದರು.

ನಾಯಕ ರೋಹಿತ್ ಶರ್ಮಾ ಟ್ರೋಫಿ ಹಿಡಿದುಕೊಂಡೇ ಹೊರಬಂದರೆ ಇತರೆ ಕ್ರಿಕೆಟಿಗರು ಕುತ್ತಿಗೆಯಲ್ಲಿ ವಿಶ್ವ ಚಾಂಪಿಯನ್ ಮೆಡಲ್ ತೊಟ್ಟುಕೊಂಡಿದ್ದರು. ತಂಡದ ಆಟಗಾರರನ್ನು ಸ್ವಾಗತಿಸಲು ನೃತ್ಯಗಾರರು ಬಾಂಗ್ರಾ ನೃತ್ಯ ಮಾಡುತ್ತಿರುವುದನ್ನು ನೋಡಿ ಸೂರ್ಯಕುಮಾರ್ ಯಾದವ್, ರಿಷಬ್ ಪಂತ್, ನಾಯಕ ರೋಹಿತ್ ಶರ್ಮಾ, ಮೊಹಮ್ಮದ್ ಸಿರಾಜ್ ಸೇರಿದಂತೆ ಕೆಲವು ಕ್ರಿಕೆಟಿಗರು ಅವರೊಂದಿಗೆ ತಾವೂ ಹೆಜ್ಜೆ ಹಾಕಿ ಖುಷಿ ನೀಡಿದರು. ಅದರಲ್ಲೂ ಸೂರ್ಯಕುಮಾರ್ ಯಾದವ್ ಅಂತೂ ನೃತ್ಯಗಾರರ ಕೈ ಹಿಡಿದುಕೊಂಡು ಕೆಲವು ಹೊತ್ತು ಟಪ್ಪಾಂಗುಚ್ಚಿ ಸ್ಟೆಪ್ಸ್ ಹಾಕಿ ಮನರಂಜನೆ ನೀಡಿದರು.

ಎಲ್ಲಾ ಆಟಗಾರರು ನೇರವಾಗಿ ವಿಮಾನ ನಿಲ್ದಾಣದಿಂದ ಹೋಟೆಲ್ ರೂಂಗೆ ತೆರಳಿದ್ದಾರೆ. ಬೆಳಿಗ್ಗೆ 11 ಗಂಟೆಗೆ ಪ್ರಧಾನಿ ಮೋದಿ ಜೊತೆ ಔತಣಕೂಟದಲ್ಲಿ ಆಟಗಾರರು ಭಾಗಿಯಾಗಲಿದ್ದಾರೆ. ಬಳಿಕ ಸಂಜೆ ಅಭಿಮಾನಿಗಳ ಸಮ್ಮುಖದಲ್ಲಿ ಆಟಗಾರರು ಟ್ರೋಫಿ ಜೊತೆ ಮೆರವಣಿಗೆ ನಡೆಸಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments