Webdunia - Bharat's app for daily news and videos

Install App

ಟಿ20 ವಿಶ್ವಕಪ್ ಗೆ ಟೀಂ ಇಂಡಿಯಾ ಸಂಭಾವ್ಯ ಓಪನರ್ ಗಳು

Krishnaveni K
ಶನಿವಾರ, 4 ಮೇ 2024 (09:35 IST)
Photo Courtesy: Twitter
ಮುಂಬೈ: ಮುಂಬರುವ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ಪರ ಆರಂಭಿಕರಾಗಿ ಕಣಕ್ಕಿಳಿಯಲಿರುವ ಬ್ಯಾಟಿಗರು ಯಾರು ಎಂಬ ಬಗ್ಗೆ ವಿಶ್ಲೇಷಣೆ ಇಲ್ಲಿದೆ.

ಇತ್ತೀಚೆಗಷ್ಟೇ ಟಿ20 ವಿಶ್ವಕಪ್ ಗೆ 15 ಸದಸ್ಯರ ಟೀಂ ಇಂಡಿಯಾ ಬಳಗವನ್ನು ಆಯ್ಕೆ ಮಾಡಲಾಗಿತ್ತು. ಉಳಿದಂತೆ ನಾಲ್ವರು ಮೀಸಲು ಆಟಗಾರರನ್ನೂ ಆಯ್ಕೆ ಮಾಡಲಾಗಿದೆ. ಟೀಂ ಇಂಡಿಯಾದಲ್ಲಿ ಇಬ್ಬರು ವಿಕೆಟ್ ಕೀಪರ್ ಗಳು, ಐವರು ಬೌಲರ್ ಗಳು, ನಾಲ್ವರು ಆಲ್ ರೌಂಡರ್ ಗಳು ಮತ್ತು ನಾಲ್ವರು ಸ್ಪೆಷಲಿಸ್ಟ್ ಬ್ಯಾಟಿಗರಿಗೆ ತಂಡದಲ್ಲಿ ಅವಕಾಶ ನೀಡಲಾಗಿದೆ.

ಈ ಪೈಕಿ ಆರಂಭಿಕರಾಗಿ ಕಣಕ್ಕಿಳಿಯಬಲ್ಲ ಮೂವರು ಸ್ಪೆಷಲಿಸ್ಟ್ ಗಳು ತಂಡದಲ್ಲಿದ್ದಾರೆ. ರೋಹಿತ್ ಶರ್ಮಾ ಖಾಯಂ ಓಪನರ್ ಆಗಿದ್ದರೆ ಅವರ ಜೊತೆಗೆ ಯಶಸ್ವಿ ಜೈಸ್ವಾಲ್ ಮತ್ತು ವಿರಾಟ್ ಕೊಹ್ಲಿ ಆರಂಭಿಕ ಸ್ಥಾನಕ್ಕೆ ಪೈಪೋಟಿಯಲ್ಲಿದ್ದಾರೆ. ಈ ಪೈಕಿ ಮೊದಲ ಆಯ್ಕೆ ಯಶಸ್ವಿ ಜೈಸ್ವಾಲ್ ಆಗಿರುತ್ತಾರೆ.

ಹಾಗಿದ್ದರೂ ಐಪಿಎಲ್ ನಲ್ಲಿ ಆರಂಭಿಕರಾಗಿ ಯಶಸ್ಸು ಕಂಡಿರುವ ವಿರಾಟ್ ಕೊಹ್ಲಿಯನ್ನು ಆರಂಭಿಕರಾಗಿ ಕಣಕ್ಕಿಳಿಸಬೇಕು ಎಂದು ಕೆಲವರು ಒತ್ತಾಯಿಸುತ್ತಿದ್ದಾರೆ.  ಸದ್ಯಕ್ಕೆ ನಮ್ಮ ತಂಡದ ಕಾಂಬಿನೇಷನ್ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲ ಎಂದು ರೋಹಿತ್ ಹೇಳಿದ್ದಾರೆ. ಅಗತ್ಯ ಬಂದರೆ ಕೊಹ್ಲಿ ಓಪನರ್ ಆಗಿ ಕಣಕ್ಕಿಳಿದರೂ ಅಚ್ಚರಿಯಿಲ್ಲ.

ಜೈಸ್ವಾಲ್ ಆರಂಭಿಕರಾಗಿಯೇ ಯಶಸ್ಸು ಕಂಡವರು. ಹೀಗಾಗಿ ಅವರನ್ನು ಮೂರನೇ ಕ್ರಮಾಂಕದಲ್ಲಿ ಕಣಕ್ಕಿಳಿಸುವ ಸಾಧ‍್ಯತೆ ಕಡಿಮೆ. ಐಪಿಎಲ್ ನಲ್ಲೂ ಜೈಸ್ವಾಲ್ ಆರಂಭಿಕರಾಗಿಯೇ ಸಕ್ಸಸ್ ಕಂಡಿದ್ದಾರೆ. ಹೀಗಾಗಿ ಅವರನ್ನು ಆರಂಭಿಕರಾಗಿ ಕಣಕ್ಕಿಳಿಸಲಿದ್ದಾರೆ. ಅವರು ಓಪನರ್ ಆದರೆ ವಿರಾಟ್ ಕೊಹ್ಲಿ ಮೂರನೇ ಕ್ರಮಾಂಕದಲ್ಲಿಯೇ ಕಣಕ್ಕಿಳಿಯಬಹುದು. ಒಂದು ವೇಳೆ ಕೊಹ್ಲಿ ಆರಂಭಿಕನಾಗಿಯೇ ಕಣಕ್ಕಿಳಿಯಬೇಕೆಂದಿದ್ದರೆ ರೋಹಿತ್ ಶರ್ಮಾ ತಮ್ಮ ಸ್ಥಾನ ಬಿಟ್ಟುಕೊಡಬೇಕಾಗುತ್ತದೆ. ರೋಹಿತ್ ಗೂ ಕೆಳ ಕ್ರಮಾಂಕದಲ್ಲಿ ಆಡಿದ ಅನುಭವವಿದೆ. ಆದರೆ ಆರಂಭಿಕ ಓವರ್ ಗಳಲ್ಲಿ ತಂಡಕ್ಕೆ ಸ್ಪೋಟಕ ಆರಂಭ ನೀಡುವ ರೋಹಿತ್ ಕೆಳ ಕ್ರಮಾಂಕದಲ್ಲಿ ಬ್ಯಾಟಿಂಗ್ ಗಿಳಿಯುವ ಅವಕಾಶ ಕಡಿಮೆ. ಹೀಗಾಗಿ ರೋಹಿತ್-ಜೈಸ್ವಾಲ್ ಜೋಡಿಯೇ ಟಿ20 ವಿಶ್ವಕಪ್ ನಲ್ಲಿ ಭಾರತಕ್ಕೆ ಓಪನಿಂಗ್ ನೀಡುವ ಸಾಧ‍್ಯತೆ ಹೆಚ್ಚಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂದಿನ ಸುದ್ದಿ
Show comments