ಮುಂಬೈ: ಮುಂಬರುವ ಐಸಿಸಿ ಏಕದಿನ ವಿಶ್ವಕಪ್ ಗೆ ಟೀಂ ಇಂಡಿಯಾ ಅಂತಿಮ 15 ಸದಸ್ಯರ ಬಳಗವನ್ನು ಪ್ರಕಟಿಸಲಾಗಿದೆ. ಹೊಸದಾಗಿ ರವಿಚಂದ್ರನ್ ಅಶ್ವಿನ್ ತಂಡಕ್ಕೆ ಸೇರ್ಪಡೆಯಾಗಿದ್ದಾರೆ.
ಗಾಯಗೊಂಡಿರುವ ಸ್ಪಿನ್ ಆಲ್ ರೌಂಡರ್ ಅಕ್ಸರ್ ಪಟೇಲ್ ಬದಲಾಗಿ ರವಿಚಂದ್ರನ್ ಅಶ್ವಿನ್ ತಂಡಕ್ಕೆ ಸೇರ್ಪಡೆಯಾಗಿದ್ದಾರೆ. ಉಳಿದಂತೆ ಇದಕ್ಕೆ ಮೊದಲು ಪ್ರಕಟಿಸಿದ್ದ ಅದೇ ಆಟಗಾರರು ತಂಡದಲ್ಲಿದ್ದಾರೆ.