Webdunia - Bharat's app for daily news and videos

Install App

ಭವಿಷ್ಯ ಭದ್ರವಾಗಿದೆ ಎಂದು ಸಾರಿದ ಟೀಂ ಇಂಡಿಯಾ ಯವ ಕ್ರಿಕೆಟಿಗರು

Krishnaveni K
ಭಾನುವಾರ, 14 ಜುಲೈ 2024 (11:17 IST)
ಹರಾರೆ: ಜಿಂಬಾಬ್ವೆ ವಿರುದ್ಧ ನಡೆದ ಟಿ20 ಸರಣಿಯನ್ನು ಭರ್ಜರಿಯಾಗಿ ಗೆದ್ದುಕೊಂಡಿರುವ ಟೀಂ ಇಂಡಿಯಾ ಯುವ ಪಡೆ ಭವಿಷ್ಯ ಭದ್ರವಾಗಿದೆ ಎಂದು ಸಾರಿದಂತಾಗಿದೆ.

ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಟಿ20 ಕ್ರಿಕೆಟ್ ನಿಂದ ನಿವೃತ್ತರಾದ ಮೇಲೆ ಟೀಂ ಇಂಡಿಯಾ ಭವಿಷ್ಯ ಏನಾಗಬಹುದು ಎಂಬ ಆತಂಕವಿತ್ತು. ಅದೀಗ ಈ ಸರಣಿಯ ಮೂಲಕ ದೂರವಾಗಿದೆ. ಆರಂಭಿಕರಾಗಿ ಯಶಸ್ವಿ ಜೈಸ್ವಾಲ್-ಶುಬ್ಮನ್ ಗಿಲ್ ಜೋಡಿ ಈ ಸರಣಿಯುದ್ದಕ್ಕೂ ಉತ್ತಮ ಪ್ರದರ್ಶನ ನೀಡಿದ್ದಾರೆ.

ಇನ್ನು, ಮಧ್ಯಮ ಕ್ರಮಾಂಕಕ್ಕೆ ಋತುರಾಜ್ ಗಾಯಕ್ ವಾಡ್, ಸಂಜು ಸ್ಯಾಮ್ಸನ್ ಬಲ ತುಂಬಬಲ್ಲರು. ವಿರಾಟ್ ಕೊಹ್ಲಿಯ ಅನುಪಸ್ಥಿತಿಯನ್ನು ಕಿರು ಮಾದರಿ ಕ್ರಿಕೆಟ್ ನಲ್ಲಿ ತುಂಬುವ ಸಾಮರ್ಥ್ಯ ಋತುರಾಜ್ ಗಾಯಕ್ ವಾಡ್ ಗಿದೆ ಎನ್ನಬಹುದು. ರಿಷಬ್ ಪಂತ್, ಹಾರ್ದಿಕ್ ಪಾಂಡ್ಯ ತಂಡಕ್ಕೆ ಬಂದರೆ ತಂಡ ಇನ್ನಷ್ಟು ಬಲಗೊಳ್ಳಲಿದೆ.

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಯಷ್ಟು ಈಗಿನ ಯುವ ಕ್ರಿಕೆಟಿಗಲು ಮಾಗಲು ಕೆಲವು ಸಮಯ ಬೇಕಾಗಬಹುದು. ಆದರೆ ಆಸ್ಟ್ರೇಲಿಯಾ, ಇಂಗ್ಲೆಂಡ್ ನಂತಹ ಪ್ರಬಲ ತಂಡಗಳೆದುರು ಒಂದಷ್ಟು ಪಂದ್ಯಗಳನ್ನು ಆಡುವ ಅವಕಾಶ ಸಿಕ್ಕರೆ, ಈ ಯುವ ಕ್ರಿಕೆಟಿಗರೂ ಒತ್ತಡ ನಿಭಾಯಿಸಲು ಕಲಿಯುತ್ತಾರೆ. ಯಾಕೆಂದರೆ ಟಿ20 ಕ್ರಿಕೆಟ್ ಗೆ ಅನುಭವಿಗಳಿಗಿಂತ ಒತ್ತಡ ನಿಭಾಯಿಸಬಲ್ಲ ಯುವ ಕ್ರಿಕೆಟಿಗರೇ ಹೆಚ್ಚು ಅವಶ್ಯಕ. ಹೀಗಾಗಿ ಟಿ20 ಕ್ರಿಕೆಟ್ ನಲ್ಲಿ ಕೊಹ್ಲಿ, ರೋಹಿತ್ ಅನುಪಸ್ಥಿತಿ ಕಾಡದು ಎಂದೇ ಹೇಳಬಹುದು.
 

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments