ವಾಜಪೇಯಿ ಕ್ರೀಡಾಂಗಣಕ್ಕೆ ಭರ್ಜರಿ ಓಪನಿಂಗ್ ನೀಡಿದ ಟೀಂ ಇಂಡಿಯಾ

Webdunia
ಬುಧವಾರ, 7 ನವೆಂಬರ್ 2018 (08:43 IST)
ಲಕ್ನೋ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆದ ದ್ವಿತೀಯ ಟಿ20 ಪಂದ್ಯವನ್ನು ಟೀಂ ಇಂಡಿಯಾ ರನ್ ಗಳಿಂದ ಗೆದ್ದುಕೊಂಡಿದೆ. ಈ ಮೂಲಕ ನೂತನವಾಗಿ ನಾಮಕರಣಗೊಂಡ ಅಟಲ್ ಬಿಹಾರ್ ವಾಜಪೇಯಿ ಕ್ರೀಡಾಂಗಣಕ್ಕೆ ಭರ್ಜರಿ ಓಪನಿಂಗ್ ನೀಡಿದೆ.

ದ್ವಿತೀಯ ಪಂದ್ಯವನ್ನು 71 ರನ್ ಗಳಿಂದ ಟೀಂ ಇಂಡಿಯಾ ಗೆದ್ದುಕೊಂಡಿದೆ. ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ರೋಹಿತ್ ಶರ್ಮಾ ಅಬ್ಬರದ ಶತಕ ( 61 ಬಾಲ್ ಗಳಲ್ಲಿ 7 ಸಿಕ್ಸರ್ ಸಹಿತ 111 ರನ್) ಮತ್ತು ಶಿಖರ್ ಧವನ್ (43 ರನ್) ಉತ್ತಮ ಬ್ಯಾಟಿಂಗ್ ನಿಂದ 20 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 195 ರನ್ ಗಳಿಸಿತು. ರಿಷಬ್ ಪಂತ್ ಕೇವಲ 5 ರನ್ ಗಳಿಗೆ ವಿಕೆಟ್ ಒಪ್ಪಿಸಿದರೆ ಮಧ್ಯಮ ಕ್ರಮಾಂಕದಲ್ಲಿ ಬಂದು ಸಿಡಿದ ಕೆಎಲ್ ರಾಹುಲ್ ಕೇವಲ 14 ಎಸೆತಗಳಲ್ಲಿ 26 ರನ್ ಗಳಿಸಿದರು.

ನಂತರ ಗುರಿ ಬೆನ್ನತ್ತಿದ ವಿಂಡೀಸ್ ಗೆ ಆರಂಭದಲ್ಲಿಯೇ ಖಲೀಲ್ ಅಹಮ್ಮದ್ ಎರಡು ವಿಕೆಟ್ ಕಿತ್ತು ಆಘಾತ ನೀಡಿದರು. ಬಳಿಕ ನಿರಂತರವಾಗಿ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿದ ವಿಂಡೀಸ್ ಅಂತಿಮವಾಗಿ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 124 ರನ್ ಗಳಿಸಲಷ್ಟೇ ಶಕ್ತವಾಯಿತು. ಇದರೊಂದಿಗೆ ಭಾರತ 71 ರನ್ ಗಳ ಜಯ ಗಳಿಸಿದ್ದಲ್ಲದೆ, ಸರಣಿ ಕೈ ವಶ ಮಾಡಿಕೊಂಡಿತು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ಯಾಪ್ಟನ್ ಜೊತೆ ಹೊಂದಾಣಿಕೆಯಾಗ್ತಿಲ್ಲ ಎಂದಾಕ್ಷಣ ಕೋಚ್ ಹುದ್ದೆ ಬಿಟ್ಟಿದ್ದ ಅನಿಲ್ ಕುಂಬ್ಳೆ: ಆದ್ರೆ ಗಂಭೀರ್...

ಗೌತಮ್ ಗಂಭೀರ್ ಹಾಯ್ ಹಾಯ್: ಸೋತ ಬೆನ್ನಲ್ಲೇ ಕೋಚ್ ಗೆ ಮೈದಾನದಲ್ಲೇ ಫ್ಯಾನ್ಸ್ ಮಂಗಳಾರತಿ Video

IND vs SA: ಗೌತಮ್ ಗಂಭೀರ್ ತೊಲಗಬೇಕು, ಇದು ಬಿಸಿಸಿಐಗೂ ತಲುಪಬೇಕು

ಬಾಸ್ಕೆಟ್ ಬಾಲ್ ಕಂಬ ಬಿದ್ದು ರಾಷ್ಟ್ರಮಟ್ಟದ ಆಟಗಾರ ಸಾವು, ಎದೆ ಝಲ್ಲೆನಿಸುತ್ತದೆ, Video

ಭಾರತದಲ್ಲಿ ಹೊಸ ಇತಿಹಾಸ ನಿರ್ಮಿಸಿದ ತೆಂಬಾ ಬವುಮಾ ಪಡೆ: ಗೌತಮ್‌ ಗಂಭೀರ್‌ಗೆ ಭಾರೀ ಮುಖಭಂಗ

ಮುಂದಿನ ಸುದ್ದಿ
Show comments