Webdunia - Bharat's app for daily news and videos

Install App

ಔಪಚಾರಿಕ ಪಂದ್ಯವೇ ಆದರೂ ಟೀಂ ಇಂಡಿಯಾ ಇದನ್ನು ಪ್ರೂವ್ ಮಾಡಲೇಬೇಕಿದೆ!

Webdunia
ಶುಕ್ರವಾರ, 16 ಫೆಬ್ರವರಿ 2018 (07:57 IST)
ನವದೆಹಲಿ: ಭಾರತ ಮತ್ತು ದ.ಆಫ್ರಿಕಾ ನಡುವಿನ ಏಕದಿನ ಪಂದ್ಯದಲ್ಲಿ ಈಗಾಗಲೇ ವಿಜೇತರು ಯಾರೆಂದು ತೀರ್ಮಾನವಾಗಿದೆ. ಹಾಗಿದ್ದರೂ ಟೀಂ ಇಂಡಿಯಾ ಪಾಲಿಗೆ ಈ ಪಂದ್ಯ ಮಹತ್ವದ್ದೇ ಆಗಿದೆ.
 

ಸರಣಿ ಗೆದ್ದರೂ ಭಾರತ ತಂಡ ಇದುವರೆಗೆ ಸಂಘಟಿತ ಪ್ರದರ್ಶನ ನೀಡಿಲ್ಲ. ಪ್ರತೀ ಪಂದ್ಯದ ಗೆಲುವಿಗೂ ಒಬ್ಬರೋ, ಇಬ್ಬರೋ ಬ್ಯಾಟ್ಸ್ ಮನ್ ಗಳಷ್ಟೇ ಕೊಡುಗೆ ನೀಡಿದ್ದಾರೆ. ಕಳೆದ ಪಂದ್ಯದಲ್ಲಿ ರೋಹಿತ್ ಶರ್ಮಾ ಶತಕ ಗಳಿಸಿದ್ದು ಬಿಟ್ಟರೆ ಈ ಸರಣಿಯಲ್ಲಿ ಸರಾಗವಾಗಿ ರನ್ ಗಳಿಸಿದ್ದು ವಿರಾಟ್ ಕೊಹ್ಲಿ ಮತ್ತು ಶಿಖರ್ ಧವನ್ ಮಾತ್ರ.

ಧೋನಿ, ಹಾರ್ದಿಕ್ ಪಾಂಡ್ಯ, ಅಜಿಂಕ್ಯಾ ರೆಹಾನೆ ಬ್ಯಾಟಿಂಗ್ ಸದ್ದು ಮಾಡಿಯೇ ಇಲ್ಲ. ಹೀಗಾಗಿ ಮಧ್ಯಮ ಕ್ರಮಾಂಕ ಸೊರಗಿದೆ. ಈ ಹುಳುಕು ಹೋಗಬೇಕಾದರೆ ಇಂದಿನ ಪಂದ್ಯದಲ್ಲಿ ಟೀಂ ಇಂಡಿಯಾ ಸಂಘಟಿತ ಪ್ರದರ್ಶನ ನೀಡಲೇಬೇಕು. ಉಳಿದಂತೆ ಸ್ಪಿನ್ನರ್ ಗಳೇ ಭಾರತದ ಆಸ್ಥಿ.

ಈಗಾಗಲೇ ವಿರಾಟ್ ಕೊಹ್ಲಿ ಔಪಚಾರಿಕ ಪಂದ್ಯವೆಂದು ಹಗುರವಾಗಿ ಕಾಣುವುದಿಲ್ಲ ಎಂದಿದ್ದಾರೆ. ಹಾಗಾಗಿ ಕನ್ನಡಿಗ ಮನೀಶ್ ಪಾಂಡೆ ಸೇರಿದಂತೆ ಇದುವರೆಗೆ ಅವಕಾಶ ಸಿಗದ ಆಟಗಾರರನ್ನು ಕಣಕ್ಕಿಳಿಸುವುದು ಅನುಮಾನ. ಒಂದು ವೇಳೆ ಭಾರತ ಇಂದು ಗೆದ್ದರೆ ಇದು ವಿದೇಶಗಳಲ್ಲಿ ಭಾರತದ ಅತೀ ದೊಡ್ಡ ಅಂತರದ ಸರಣಿ ಗೆಲುವಾಗಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಗಿಲ್ ನಾಯಕತ್ವಕ್ಕೆ ಫುಲ್ ಮಾರ್ಕ್ಸ್‌ ನೀಡಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

ಮೂರು ಮಾದರಿಗಳಲ್ಲಿ ಸ್ಮೃತಿ ಮಂದಾನಾ ಶತಕ: ಈ ಸಾಧನೆ ಮಾಡಿದ ಭಾರತದ ಮೊದಲ ಆಟಗಾರ್ತಿ

ಆರ್ ಸಿಬಿ ವೇಗಿ ಯಶ್ ದಯಾಳ್ ವಿರುದ್ಧ ಮಹಿಳೆಗೆ ವಂಚನೆ ಮಾಡಿದ ಆರೋಪ

ರೋಹಿತ್ ಶರ್ಮಾ ಇದ್ದ ರೂಂಗೆ ಗರ್ಲ್ ಫ್ರೆಂಡ್ ಕರೆದಿದ್ದ ಶಿಖರ್ ಧವನ್

ಜಸ್ಪ್ರೀತ್ ಬುಮ್ರಾ ಎರಡನೇ ಟೆಸ್ಟ್ ಆಡಲ್ಲ: ಅವರ ಸ್ಥಾನಕ್ಕೆ ಇವರೇ ಬೆಸ್ಟ್ ಅಂತಿದ್ದಾರೆ ಫ್ಯಾನ್ಸ್

ಮುಂದಿನ ಸುದ್ದಿ
Show comments