Webdunia - Bharat's app for daily news and videos

Install App

ಇನ್ಮುಂದೆ ಟೀಂ ಇಂಡಿಯಾ ಕೋಚ್ ನ ಈ ಅಧಿಕಾರ ಕಟ್!

Webdunia
ಗುರುವಾರ, 18 ಜುಲೈ 2019 (09:42 IST)
ಮುಂಬೈ: ಇದುವರೆಗೆ ಟೀಂ ಇಂಡಿಯಾ ಮುಖ್ಯ ಕೋಚ್ ಆಗಿ ಆಯ್ಕೆಯಾದವರು ತಮ್ಮ ಸಹಾಯಕ ಸಿಬ್ಬಂದಿಗಳನ್ನೂ ತಮಗೆ ಇಷ್ಟ ಬಂದ ಹಾಗೆ ಆಯ್ಕೆ ಮಾಡಿಕೊಳ್ಳುತ್ತಿದ್ದರು.


ತಮ್ಮ ಆಪ್ತರ ಬಳಗವನ್ನೇ ಬೌಲಿಂಗ್, ಫೀಲ್ಡಿಂಗ್ ಕೋಚ್ ಗಳಾಗಿ ತಾವೇ ಆಯ್ಕೆ ಮಾಡಿಕೊಳ್ಳುತ್ತಿದ್ದರು. ಹಾಲಿ ಕೋಚ್ ರವಿಶಾಸ್ತ್ರಿ ಈ ಅಧಿಕಾರವನ್ನು ಚೆನ್ನಾಗಿಯೇ ಬಳಸಿಕೊಂಡಿದ್ದರು. ಕೋಚ್ ಆಯ್ಕೆ ಪ್ರಕ್ರಿಯೆ ಸಂದರ್ಭದಲ್ಲಿ ಬೌಲಿಂಗ್ ಕೋಚ್ ಆಗಿ ಮಾಜಿ ವೇಗಿ ಜಹೀರ್ ಖಾನ್ ರನ್ನು ಆಯ್ಕೆ ಸಮಿತಿ ಆಯ್ಕೆ ಮಾಡಿದ್ದರೂ ರವಿಶಾಸ್ತ್ರಿ ಪಟ್ಟು ಹಿಡಿದು ತಮ್ಮ ನೆಚ್ಚಿನ ಭರತ್ ಅರುಣ್ ರನ್ನು ಬೌಲಿಂಗ್ ಕೋಚ್ ಆಗಿ ನೇಮಿಸಿಕೊಂಡಿದ್ದರು. ಜಾನ್ ರೈಟ್ ಕಾಲಾವಧಿಯಿಂದಲೂ ಇದು ನಡೆದುಕೊಂಡು ಬಂದಿದೆ.

ಆದರೆ ಇನ್ನು ಮುಂದೆ ಮುಖ್ಯ ಕೋಚ್ ನ ಈ ಅಧಿಕಾರಕ್ಕೆ ಕತ್ತರಿ ಹಾಕುವ ಬಗ್ಗೆ ಬಿಸಿಸಿಐ ಚಿಂತನೆ ನಡೆಸಿದೆ. ಬಿಸಿಸಿಐ ಸಲಹಾ ಮಂಡಳಿ ಮುಖ್ಯ ಕೋಚ್ ಆಯ್ಕೆ ಮಾಡಲಿದ್ದು, ಎಂಎಸ್ ಕೆ ಪ್ರಸಾದ್ ನೇತೃತ್ವದ ಆಯ್ಕೆ ಸಮಿತಿ ಉಳಿದ ಸಹಾಯಕ ಸಿಬ್ಬಂದಿಗಳ ಆಯ್ಕೆ ನಡೆಸುವ ಸಾಧ್ಯತೆಯಿದೆ. ಹೀಗಾಗಿ ಟೀಂ ಇಂಡಿಯಾಗೆ ಸಂಪೂರ್ಣ ಹೊಸ ಸಹಾಯಕ ಸಿಬ್ಬಂದಿಗಳ ನೇಮಕವಾಗುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸಿಂಗಾಪುರದಲ್ಲಿ ಐಸಿಸಿ ಎಜಿಎಂ: ಟಿ20 ವಿಶ್ವಕಪ್​ನಲ್ಲಿ ಬರೋಬ್ಬರಿ 32 ತಂಡಗಳನ್ನು ಕಣಕ್ಕಿಳಿಸಲು ಮಾಸ್ಟರ್‌ ಪ್ಲಾನ್‌

ವಿಶ್ವ ಲೆಜೆಂಡ್ಸ್ ಚಾಂಪಿಯನ್‌ಶಿಪ್: ಪಾಕ್‌ಗೆ ಭಾರತ ಶಾಕ್‌, ಇಂದು ನಡೆಯಬೇಕಿದ್ದ ಪಂದ್ಯ ರದ್ದು

ಲಾರ್ಡ್ಸ್‌ ಪಂದ್ಯಕ್ಕೆ ಮಳೆ ಅಡ್ಡಿ: ಡಿಎಲ್‌ಎಸ್‌ ಆಧಾರದಲ್ಲಿ ಭಾರತವನ್ನು ಮಣಿಸಿದ ಇಂಗ್ಲೆಂಡ್‌ ವನಿತೆಯರು

ನಟಿ ಜಾಸ್ಮಿನ್ ವಾಲಿಯಾಗೆ ಗುಡ್‌ಬೈ ಹೇಳಿದ್ರಾ ಕ್ರಿಕೆಟಿಗ ಹಾರ್ದಿಕ್‌ ಪಾಂಡ್ಯ: ಪುಷ್ಟಿ ನೀಡಿದ ಇಬ್ಬರ ನಡೆ

ಮತ್ತೊಂದು ವಿವಾದದಲ್ಲಿ ಕ್ರಿಕೆಟಿಗ ಮೊಹಮ್ಮದ್ ಶಮಿ ಮಾಜಿ ಪತ್ನಿ, ಜಾಗಕ್ಕಾಗಿ ನೆರೆಹೊರೆಯರ ಜತೆ ಗುದ್ದಾಟ

ಮುಂದಿನ ಸುದ್ದಿ
Show comments