ಕೊನೆಯವರೆಗೂ ನಿಂತು ಟೀಂ ಇಂಡಿಯಾಗೆ ಗೆಲುವು ಕೊಡಿಸಿದ ಕೆಎಲ್ ರಾಹುಲ್

Webdunia
ಭಾನುವಾರ, 26 ಜನವರಿ 2020 (16:21 IST)
ಆಕ್ಲೆಂಡ್: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯುತ್ತಿರುವ ದ್ವಿತೀಯ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ 7 ವಿಕೆಟ್ ಗಳ ಭರ್ಜರಿ ಜಯ ಗಳಿಸಿದೆ. ಈ ಮೂಲಕ ಐದು ಪಂದ್ಯಗಳ ಸರಣಿಯಲ್ಲಿ 2-0 ರಿಂದ ಮುನ್ನಡೆ ಸಾಧಿಸಿದೆ.


ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ ಆರಂಭ ಉತ್ತಮವಾಗಿದ್ದರೂ ಬಳಿಕ ಭಾರತೀಯ ಬೌಲರ್ ಗಳ ನಿಯಂತ್ರಿತ ದಾಳಿಯಿಂದಾಗಿ ನಿಗದಿತ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 132 ರನ್ ಗಳಿಸಲಷ್ಟೇ ಶಕ್ತವಾಯಿತು.

ಈ ಮೊತ್ತವನ್ನು ಬೆನ್ನತ್ತಿದ್ದ ಟೀಂ ಇಂಡಿಯಾ ರೋಹಿತ್ ಶರ್ಮಾ ಮತ್ತೆ ಕೈಕೊಟ್ಟರು. 8 ರನ್ ಗಳಿಸಿ ರೋಹಿತ್ ಔಟಾದ ಬೆನ್ನಲ್ಲೇ ನಾಯಕ ಕೊಹ್ಲಿ ಕೂಡಾ 11 ರನ್ ಗಳಿಗೆ ಪೆವಿಲಿಯನ್ ಹಾದಿ ಹಿಡಿದರು. ಈ ವೇಳೆ ಭಾರತಕ್ಕೆ ಆತಂಕ ಕಾಡಿತಾದರೂ ಕೆಎಲ್ ರಾಹುಲ್ ಒಂದೆಡೆ ಜವಾಬ್ಧಾರಿಯುತ ಇನಿಂಗ್ಸ್ ಕಟ್ಟಿದರೆ ಯುವ ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಮತ್ತೊಂದು ಹೊಡೆಬಡಿಯ ಇನಿಂಗ್ಸ್ ಆಡಿ ಭಾರತವನ್ನು ಗೆಲುವಿನ ಗುರಿ ಮುಟ್ಟಿಸಿದರು. ರಾಹುಲ್ ಅಜೇಯ 57 ರನ್ ಗಳಿಸಿದರೆ ಅಯ್ಯರ್ 33 ಎಸೆತಗಳಿಂದ 44 ರನ್ ಗಳಿಸಿದರು.  ಇದರೊಂದಿಗೆ ಭಾರತ 17.3 ಓವರ್ ಗಳಲ್ಲಿಯೇ 135 ರನ್ ಗಳಿಸಿ ಗುರಿ ಮುಟ್ಟಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್ ಕೊಹ್ಲಿ ಶತಕ ಸಿಡಿಸಿದಾಗ ಅಗ್ರೆಸಿವ್ ಆಗಿ ರೋಹಿತ್ ಶರ್ಮಾ ಹೇಳಿದ್ದೇನು: ಕೊನೆಗೂ ರಿವೀಲ್

ಗೌತಮ್ ಗಂಭೀರ್ ವಿರುದ್ಧ ಸೀನಿಯರ್ ಆಟಗಾರರು ಸಿಟ್ಟಾಗಿರುವುದಕ್ಕೆ ಕಾರಣ ಬಯಲು

ವಿರಾಟ್ ಕೊಹ್ಲಿ, ಧೋನಿ ಮೇಲೆ ಗೌತಮ್ ಗಂಭೀರ್ ಗೆ ವೈಮನಸ್ಯ ಹುಟ್ಟಿಕೊಂಡಿದ್ದು ಇದೇ ಕಾರಣಕ್ಕಾ

ಸ್ಮೃತಿ ಜತೆಗಿನ ಮದುವೆ ಮುಂದೂಡಿಕೆ ಬಳಿಕ ಮೊದಲ ಬಾರಿ ಪಲಾಶ್ ಮುಚ್ಚಲ್ ಕಾಣಿಸಿಕೊಂಡಿದ್ದು ಹೀಗೆ

Video: ಕರೆದರೂ ಕೇಳದೇ ಕೇಕ್ ಕಟಿಂಗ್ ಸೆಲೆಬ್ರೇಷನ್ ನಿಂದ ದೂರ ಹೋದ ವಿರಾಟ್ ಕೊಹ್ಲಿ

ಮುಂದಿನ ಸುದ್ದಿ
Show comments