ಸಿಡ್ನಿ: ಟಿ20 ವಿಶ್ವಕಪ್ ಕೂಟದ ಎರಡನೇ ಪಂದ್ಯದಲ್ಲಿ ಭಾಗಿಯಾಗಲು ಟೀಂ ಇಂಡಿಯಾ ಸಿಡ್ನಿಗೆ ಬಂದಿಳಿದಿದೆ.
ಕೋಚ್ ರಾಹುಲ್ ದ್ರಾವಿಡ್, ರೋಹಿತ್ ಶರ್ಮಾ ಸೇರಿದಂತೆ ಟೀಂ ಇಂಡಿಯಾ ಮೆಲ್ಬೋರ್ನ್ ನಿಂದ ಸಿಡ್ನಿಗೆ ಬಂದಿಳಿದಿದ್ದಾರೆ. ಗುರುವಾಗ ನೆದರ್ಲ್ಯಾಂಡ್ಸ್ ವಿರುದ್ಧ ಭಾರತ ಎರಡನೇ ಪಂದ್ಯವಾಡಲಿದೆ.
ಮೊದಲ ಪಂದ್ಯ ಗೆದ್ದ ಖುಷಿಯಲ್ಲಿರುವ ಟೀಂ ಇಂಡಿಯಾ ಈ ಪಂದ್ಯವನ್ನೂ ಗೆದ್ದ ಸದ್ಯದ ಮಟ್ಟಿಗೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರುವ ಅವಕಾಶ ಹೊಂದಿದೆ.