Webdunia - Bharat's app for daily news and videos

Install App

ಹೇಳಿದಂತೇ ಮಾಡಿಬಿಟ್ಟರು ರೋಹಿತ್ ಶರ್ಮಾ!

Webdunia
ಬುಧವಾರ, 7 ಮಾರ್ಚ್ 2018 (08:57 IST)
ಕೊಲೊಂಬೋ: ತ್ರಿಕೋನ ಟಿ 20 ಸರಣಿ ಆರಂಭಕ್ಕೆ ಮೊದಲು ಈ ಸರಣಿ ಗೆಲ್ಲುವ ಫೇವರಿಟ್ ತಂಡ ನಾವಲ್ಲ ಎಂದು ಹಂಗಾಮಿ ನಾಯಕ ರೋಹಿತ್ ಶರ್ಮಾ ಘೋಷಿಸಿದ್ದರು. ಇದೀಗ ಅದರಂತೆಯೇ ನಡೆದುಕೊಂಡಿದ್ದಾರೆ.

ಮೊದಲ ಪಂದ್ಯದಲ್ಲೇ ಶ್ರೀಲಂಕಾ ವಿರುದ್ಧ ಸೋತು ಚುಟುಕು ಕ್ರಿಕೆಟ್ ನ ಫಲಿತಾಂಶ ಹೇಗೆ ಬೇಕಾದರೂ ವಾಲಬಹುದು ಎಂಬ ತಮ್ಮ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಮೊದಲು ಬ್ಯಾಟ್ ಮಾಡಿದ್ದ ಭಾರತ ನಿಗದಿತ 20 ಓವರ್ ಗಳಲ್ಲಿ 174 ರನ್ ಗಳಿಸಿತು. ಶಿಖರ್ ಧವನ್ ಬಿರುಗಾಳಿಯಂತೆ 49 ಎಸೆತಗಳಲ್ಲಿ 6 ಬೌಂಡರಿ, 6 ಸಿಕ್ಸರ್ ಗಳ ಸಹಿತ 90 ರನ್ ಚಚ್ಚದೇ ಇದ್ದಿದ್ದರೆ ಭಾರತದ ಸ್ಕೋರ್ ಇನ್ನೂ ಕಳಪೆಯಾಗುತ್ತಿತ್ತು.

ಮನೀಶ್ ಪಾಂಡೆ 35 ಎಸೆತಗಳಲ್ಲಿ 37 ರನ್ ಗಳಿಸಿದರು. ರಿಷಬ್ ಪಂತ್ 23 ರನ್ ಗಳಿಸಿದರು. ಉಳಿದ ಹೊಸಬರಿಗೆ ಬ್ಯಾಟಿಂಗ್ ಅವಕಾಶ ಸಿಗಲಿಲ್ಲ. ನಾಯಕ ರೋಹಿತ್ ಶರ್ಮಾ ಯಥಾವತ್ ಶೂನ್ಯಕ್ಕೆ ನಿರ್ಗಮಿಸಿದರು.

ನಂತರ ಬ್ಯಾಟಿಂಗ್ ಮಾಡಿದ ಲಂಕಾ ಕುಸಲಾ ಪೆರೆರಾ ಆಸರೆಯಾದರು. ಅವರೊಬ್ಬರೇ ಏಕಾಂಗಿಯಾಗಿ ಸಿಡಿದು 66 ರನ್ ಗಳಿಸುವ ಮೂಲಕ ಲಂಕೆಗೆ ಜಯ ತಂದಿತ್ತರು. ಭಾರತದ ಪರ ವಾಷಿಂಗ್ಟನ್ ಸುಂದರ್, ಯಜುವೇಂದ್ರ ಚಾಹಲ್ ತಲಾ 2 ವಿಕೆಟ್ ಕಿತ್ತರು. ಜಯದೇವ್ ಉನಾದ್ಕಟ್ ಗೆ 1 ವಿಕೆಟ್ ದಕ್ಕಿತು. ಇದರೊಂದಿಗೆ ಲಂಕಾ 5 ವಿಕೆಟ್ ಗಳ ಗೆಲುವ ಕಂಡಿತು.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಕ್ಯಾಚ್‌ಗಳನ್ನು ಬಿಟ್ಟು ಕೆಟ್ಟ ಗಿಲ್ ಪಡೆ, ಇಂಗ್ಲೆಂಡ್‌ಗೆ 5 ವಿಕೆಟ್‌ಗಳ ಗೆಲುವು

ENG vs IND: ಟೆಸ್ಟ್‌ ಆರಂಭಕ್ಕೂ ಮುನ್ನಾ ಆಟಗಾರರು ಕಪ್ಪು ಪಟ್ಟಿ ಧರಿಸಿದ್ದೇಕೆ

ದಯವಿಟ್ಟು ಎಲ್ಲ ಟೆಸ್ಟ್‌ಗಳನ್ನು ಆಡಿ: ಬೂಮ್ರಾಗೆ ಪತ್ನಿಯಲ್ಲೇ ಸಂದೇಶ ಕಳುಹಿಸಿದ ಗವಾಸ್ಕಾರ್‌, ಪೂಜಾರ

ಅದ್ಭುತ ಪ್ರದರ್ಶನ ನೀಡಿಯೂ ಕೆಎಲ್ ರಾಹುಲ್ ಗೆ ತಂಡದಲ್ಲಿ ಇಂಥಾ ಸ್ಥಾನವೇ

ಪೆವಿಲಿಯನ್ ನಲ್ಲಿ ಕೂತು ಯಾರೂ ಮಾಡದ ಕೆಲಸವೊಂದನ್ನು ಮಾಡ್ತಾರೆ ಸಾಯಿ ಸುದರ್ಶನ್

ಮುಂದಿನ ಸುದ್ದಿ
Show comments