ಟೀಂ ಇಂಡಿಯಾಗೆ ಸರಣಿ ಸೋಲುಣಿಸಿದ್ದು ಕೊರೋನಾ!

Webdunia
ಶುಕ್ರವಾರ, 30 ಜುಲೈ 2021 (08:50 IST)
ಕೊಲೊಂಬೋ: ಭಾರತ ಮತ್ತು ಶ್ರೀಲಂಕಾ ನಡುವಿನ ತೃತೀಯ ಟಿ20 ಪಂದ್ಯವನ್ನು ಟೀಂ ಇಂಡಿಯಾ 7 ವಿಕೆಟ್ ಗಳಿಂದ ಹೀನಾಯವಾಗಿ ಸೋತಿದೆ.


ಇದರೊಂದಿಗೆ ಮೂರು ಪಂದ್ಯಗಳ ಟಿ20 ಸರಣಿ ಲಂಕಾ ಪಾಲಾಗಿದೆ. ಅಸಲಿಗೆ ಈ ಸರಣಿಯಲ್ಲಿ ಭಾರತಕ್ಕೆ ಕಾಡಿದ್ದು, ಎದುರಾಳಿ ಆಟಗಾರರಲ್ಲ! ಬದಲಾಗಿ ಕೊರೋನಾ! ಮೊದಲ ಟಿ20 ಗೆದ್ದಿದ್ದ ಟೀಂ ಇಂಡಿಯಾಗೆ ಬಳಿಕ ಕೊರೋನಾ ಕಾಡಿತು. ಕೊರೋನಾದಿಂದಾಗಿ ಪ್ರಮುಖ ಆಟಗಾರರು ಉಳಿದ ಎರಡು ಪಂದ್ಯಗಳಲ್ಲಿ ಆಡಲು ಸಾಧ‍್ಯವಾಗದೇ ಇದ್ದಿದ್ದು, ಭಾರತಕ್ಕೆ ದೊಡ್ಡ ಹೊಡೆತ ನೀಡಿತು.

ನಿನ್ನೆಯ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 81 ರನ್ ಗಳಿಸಲಷ್ಟೇ ಶಕ್ತವಾಯಿತು. ಒಂದು ಕುಲದೀಪ್ ಯಾದವ್ 23 ರನ್ ಗಳಿಸದೇ ಹೋಗಿದ್ದಲ್ಲಿ ಭಾರತ ಕನಿಷ್ಠ ಮೊತ್ತಕ್ಕೆ ಆಲೌಟ್ ಆದ ಅವಮಾನಕ್ಕೆ ಗುರಿಯಾಗುತ್ತಿತ್ತು.

ಭಾರತ ನೀಡಿದ ಸುಲಭ ರನ್ ಗುರಿಯನ್ನು ಬೆನ್ನತ್ತಿದ ಲಂಕಾ ಆರಂಭದಲ್ಲಿ 3 ವಿಕೆಟ್ ಕಳೆದುಕೊಂಡರೂ ಬಳಿಕ 14.3 ಓವರ್ ಗಳಲ್ಲೇ 3 ವಿಕೆಟ್ ನಷ್ಟಕ್ಕೆ 82 ರನ್ ಗಳಿಸುವ ಮೂಲಕ ಗೆಲುವು ಸಾಧಿಸಿತು. ಬೌಲಿಂಗ್ ನಲ್ಲಿ ಭುವನೇಶ್ವರ್ ಕುಮಾರ್ 2 ವಿಕೆಟ್, ವರುಣ್ ಚಕ್ರವರ್ತಿ,ಸಂದೀಪ್ ವಾರಿಯರ್ ಮತ್ತು ಕುಲದೀಪ್ ಯಾದವ್ ತಲಾ 1 ವಿಕೆಟ್ ಕಬಳಿಸಿದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ, ಪಾಲಾಶ್ ಮುಚ್ಚಲ್ ಹೊಸ ಮದುವೆ ದಿನಾಂಕ ಫಿಕ್ಸ್

ವಿವಾದಗಳ ಬೆನ್ನಲ್ಲೇ ಏರ್ ಪೋರ್ಟ್ ನಲ್ಲಿ ಆಯ್ಕೆ ಸಮಿತಿಯ ಪ್ರಗ್ಯಾನ್ ಓಝಾ ಜೊತೆ ಕೊಹ್ಲಿ ಗಂಭೀರ ಚರ್ಚೆ video

ವಿರಾಟ್ ಕೊಹ್ಲಿ ಶತಕ ಸಿಡಿಸಿದಾಗ ಅಗ್ರೆಸಿವ್ ಆಗಿ ರೋಹಿತ್ ಶರ್ಮಾ ಹೇಳಿದ್ದೇನು: ಕೊನೆಗೂ ರಿವೀಲ್

ಗೌತಮ್ ಗಂಭೀರ್ ವಿರುದ್ಧ ಸೀನಿಯರ್ ಆಟಗಾರರು ಸಿಟ್ಟಾಗಿರುವುದಕ್ಕೆ ಕಾರಣ ಬಯಲು

ವಿರಾಟ್ ಕೊಹ್ಲಿ, ಧೋನಿ ಮೇಲೆ ಗೌತಮ್ ಗಂಭೀರ್ ಗೆ ವೈಮನಸ್ಯ ಹುಟ್ಟಿಕೊಂಡಿದ್ದು ಇದೇ ಕಾರಣಕ್ಕಾ

ಮುಂದಿನ ಸುದ್ದಿ
Show comments