Daily Horoscope

ಟೀಂ ಇಂಡಿಯಾಗೆ ಸರಣಿ ಸೋಲುಣಿಸಿದ್ದು ಕೊರೋನಾ!

Webdunia
ಶುಕ್ರವಾರ, 30 ಜುಲೈ 2021 (08:50 IST)
ಕೊಲೊಂಬೋ: ಭಾರತ ಮತ್ತು ಶ್ರೀಲಂಕಾ ನಡುವಿನ ತೃತೀಯ ಟಿ20 ಪಂದ್ಯವನ್ನು ಟೀಂ ಇಂಡಿಯಾ 7 ವಿಕೆಟ್ ಗಳಿಂದ ಹೀನಾಯವಾಗಿ ಸೋತಿದೆ.


ಇದರೊಂದಿಗೆ ಮೂರು ಪಂದ್ಯಗಳ ಟಿ20 ಸರಣಿ ಲಂಕಾ ಪಾಲಾಗಿದೆ. ಅಸಲಿಗೆ ಈ ಸರಣಿಯಲ್ಲಿ ಭಾರತಕ್ಕೆ ಕಾಡಿದ್ದು, ಎದುರಾಳಿ ಆಟಗಾರರಲ್ಲ! ಬದಲಾಗಿ ಕೊರೋನಾ! ಮೊದಲ ಟಿ20 ಗೆದ್ದಿದ್ದ ಟೀಂ ಇಂಡಿಯಾಗೆ ಬಳಿಕ ಕೊರೋನಾ ಕಾಡಿತು. ಕೊರೋನಾದಿಂದಾಗಿ ಪ್ರಮುಖ ಆಟಗಾರರು ಉಳಿದ ಎರಡು ಪಂದ್ಯಗಳಲ್ಲಿ ಆಡಲು ಸಾಧ‍್ಯವಾಗದೇ ಇದ್ದಿದ್ದು, ಭಾರತಕ್ಕೆ ದೊಡ್ಡ ಹೊಡೆತ ನೀಡಿತು.

ನಿನ್ನೆಯ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 81 ರನ್ ಗಳಿಸಲಷ್ಟೇ ಶಕ್ತವಾಯಿತು. ಒಂದು ಕುಲದೀಪ್ ಯಾದವ್ 23 ರನ್ ಗಳಿಸದೇ ಹೋಗಿದ್ದಲ್ಲಿ ಭಾರತ ಕನಿಷ್ಠ ಮೊತ್ತಕ್ಕೆ ಆಲೌಟ್ ಆದ ಅವಮಾನಕ್ಕೆ ಗುರಿಯಾಗುತ್ತಿತ್ತು.

ಭಾರತ ನೀಡಿದ ಸುಲಭ ರನ್ ಗುರಿಯನ್ನು ಬೆನ್ನತ್ತಿದ ಲಂಕಾ ಆರಂಭದಲ್ಲಿ 3 ವಿಕೆಟ್ ಕಳೆದುಕೊಂಡರೂ ಬಳಿಕ 14.3 ಓವರ್ ಗಳಲ್ಲೇ 3 ವಿಕೆಟ್ ನಷ್ಟಕ್ಕೆ 82 ರನ್ ಗಳಿಸುವ ಮೂಲಕ ಗೆಲುವು ಸಾಧಿಸಿತು. ಬೌಲಿಂಗ್ ನಲ್ಲಿ ಭುವನೇಶ್ವರ್ ಕುಮಾರ್ 2 ವಿಕೆಟ್, ವರುಣ್ ಚಕ್ರವರ್ತಿ,ಸಂದೀಪ್ ವಾರಿಯರ್ ಮತ್ತು ಕುಲದೀಪ್ ಯಾದವ್ ತಲಾ 1 ವಿಕೆಟ್ ಕಬಳಿಸಿದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments