Webdunia - Bharat's app for daily news and videos

Install App

ಶುಬ್ಮನ್ ಗಿಲ್ ಗೆ ಅಂತಿಮ ಗಡುವು ನೀಡಿದ್ದ ಮ್ಯಾನೇಜ್ ಮೆಂಟ್

Krishnaveni K
ಸೋಮವಾರ, 5 ಫೆಬ್ರವರಿ 2024 (16:20 IST)
ವಿಶಾಖಪಟ್ಟಣಂ: ಇಂಗ್ಲೆಂಡ್ ವಿರುದ್ಧ ಶತಕ ಸಿಡಿಸುವ ಮೊದಲು ಟೀಂ ಇಂಡಿಯಾ ಬ್ಯಾಟಿಗ ಶುಬ್ಮನ್ ಗಿಲ್ ಗೆ ಮ್ಯಾನೇಜ್ ಮೆಂಟ್ ಗಡುವು ನೀಡಿತ್ತು ಎನ್ನಲಾಗಿದೆ.

ಶುಬ್ಮನ್ ಗಿಲ್ ಕಳೆದ ಕೆಲವು ಪಂದ್ಯಗಳಿಂದ ಉತ್ತಮ ಪ್ರದರ್ಶನ ನೀಡಿರಲಿಲ್ಲ. ಅವರನ್ನು ತಂಡದಿಂದ ಕಿತ್ತು ಹಾಕಬೇಕೆಂದು ಒತ್ತಾಯಗಳು ಕೇಳಿಬರುತ್ತಿತ್ತು. ಒಂದು ವೇಳೆ ಈ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡದೇ ಹೋಗಿದ್ದರೆ ಗಿಲ್ ಗೆ ಗೇಟ್ ಪಾಸ್ ಸಿಗುತ್ತಿತ್ತು.

ಶುಬ್ಮನ್ ಗಿಲ್ ಗೆ ಈ ಪಂದ್ಯದಲ್ಲಿ ತಮ್ಮ ಫಾರ್ಮ್ ಸಾಬೀತುಪಡಿಸಲು ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ಅಂತಿಮ ಗಡುವು ನೀಡಿತ್ತು ಎಂಬ ಮಾತಿದೆ. ಪ್ರೂವ್ ಮಾಡಲೇಬೇಕಾದ ಪಂದ್ಯದಲ್ಲಿ ಗಿಲ್ ಶತಕ ಸಿಡಿಸಿ ತಮ್ಮ ಸ್ಥಾನ ಭದ್ರಪಡಿಸಿಕೊಂಡಿದ್ದಾರೆ. ಒಂದು ವೇಳೆ ಅವರು ಈ ಪಂದ್ಯದಲ್ಲಿ ಉತ್ತಮ ಪ್ರದರ್ಶನ ನೀಡದೇ ಹೋಗಿದ್ದರೆ ಮುಂದಿನ ಪಂದ್ಯಕ್ಕೆ ಸರ್ಫರಾಜ್ ಖಾನ್ ಅವರ ಸ್ಥಾನ ಕಬಳಿಸುತ್ತಿದ್ದರು. ಆದರೆ ಶತಕ ಸಿಡಿಸಿದ ಗಿಲ್ ಈಗ ನಿರಾಳರಾಗಿದ್ದಾರೆ.

ಆದರೆ ತಂಡದ ಇನ್ನೊಬ್ಬ ಬ್ಯಾಟಿಗ ಶ್ರೇಯಸ್ ಅಯ್ಯರ್ ಭಾರೀ ಟೀಕೆಗೊಳಗಾಗಿದ್ದಾರೆ. ಅವರ ಬ್ಯಾಟಿನಿಂದ ಶತಕ ಬಂದು ಎಷ್ಟೋ ಕಾಲವಾಗಿದೆ. ಟೆಸ್ಟ್ ಮಾದರಿಯಲ್ಲಿ ಅವರು ಮಧ್ಯಮ ಕ್ರಮಾಂಕದಲ್ಲಿ ತಂಡಕ್ಕೆ ಆಧಾರವಾಗಬೇಕು. ಆದರೆ ಅವರಿಂದ ಅಂತಹ ಪ್ರದರ್ಶನ ಬರುತ್ತಿಲ್ಲ. ಹೀಗಾಗಿ ಮುಂದಿನ ಪಂದ್ಯಕ್ಕೆ ಕೊಕ್ ನೀಡಿದರೂ ಅಚ್ಚರಿಯಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments