ಈ ಬದಲಾವಣೆ ಮಾಡಿಕೊಳ್ಳದಿದ್ದರೆ ಟೀಂ ಇಂಡಿಯಾಕ್ಕೆ ಮುಂದಿನ ಪಂದ್ಯದಲ್ಲೂ ಸೋಲೇ ಗತಿ!

Webdunia
ಬುಧವಾರ, 19 ಡಿಸೆಂಬರ್ 2018 (09:25 IST)
ಮೆಲ್ಬೋರ್ನ್: ಪರ್ತ್ ನಲ್ಲಿ ನಡೆದಿದ್ದ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಸೋತ ಬಳಿಕ ಮುಂದಿನ ಪಂದ್ಯ ಗೆಲ್ಲಬೇಕಾದರೆ ಟೀಂ ಇಂಡಿಯಾ ತಂಡದಲ್ಲಿ ಬದಲಾವಣೆ ಮಾಡಿಕೊಳ್ಳಲೇಬೇಕಿದೆ.


ಟೀಂ ಇಂಡಿಯಾ ಕಳೆದ ಕೆಲವು ದಿನಗಳಿಂದ ತಲೆನೋವಾಗಿರುವುದು ಆರಂಭಿಕರ ಫಾರ್ಮ್. ಕೆಎಲ್ ರಾಹುಲ್, ಮುರಳಿ ವಿಜಯ್ ಇಬ್ಬರೂ 10 ರನ್ ಒಳಗೇ ವಿಕೆಟ್ ಒಪ್ಪಿಸಿ ನಡೆಯುತ್ತಿರುವುದರಿಂದ ಭಾರತ ಸಂಕಷ್ಟಕ್ಕೆ ಸಿಲುಕುತ್ತಿದೆ. ಇದು ಮಧ್ಯಮ ಕ್ರಮಾಂಕದ ಮೇಲೆ ಅತಿಯಾದ ಒತ್ತಡ ತರುತ್ತಿದೆ. ಹೀಗಾಗಿ ಮುಂದಿನ ಪಂದ್ಯದಲ್ಲಿ ಟೀಂ ಇಂಡಿಯಾ ಆರಂಭಿಕ ರಾಹುಲ್, ವಿಜಯ್ ಗೆ ಕೊಕ್ ನೀಡಿ ಹೊಸ ಆರಂಭಿಕರಿಗೆ ಅವಕಾಶ ನೀಡಲೇಬೇಕಿದೆ.

ಇನ್ನು ಆಸ್ಟ್ರೇಲಿಯಾಕ್ಕೆ ಬಂದ ಮೇಲೆ ಸ್ಪಿನ್ ವಿಭಾಗವನ್ನು ಸಂಪೂರ್ಣವಾಗಿ ಕಡೆಗಣಿಸಿ ಕೊಹ್ಲಿ ತಪ್ಪು ಮಾಡಿದ್ದಾರೆ. ಮೊದಲ ಪಂದ್ಯದಲ್ಲಿ ಹಿರಿಯ ಆಟಗಾರ ಎನ್ನುವ ಕಾರಣಕ್ಕೆ ಅಶ್ವಿನ್ ಗೆ ಸ್ಥಾನ ಸಿಕ್ಕಿತ್ತು. ಆದರೆ ದ್ವಿತೀಯ ಪಂದ್ಯದಲ್ಲಿ ವೇಗಿಗಳ ಪಿಚ್ ನಲ್ಲಿ ಪರಿಣಾಮಕಾರಿ ದಾಳಿ ನಡೆಸಿ ಹಲವು ಬಾರಿ ಭಾರತಕ್ಕೆ ಗೆಲುವು ತಂದುಕೊಟ್ಟ ರವೀಂದ್ರ ಜಡೇಜಾರನ್ನು ಕಡೆಗಣಿಸಿ ಕೊಹ್ಲಿ ತಪ್ಪು ಮಾಡಿದರು. ಆಸ್ಟ್ರೇಲಿಯಾ ವೇಗದ ಪಿಚ್ ಗಳಾದರೂ ಕಳೆದ ಎರಡೂ ಪಂದ್ಯಗಳಲ್ಲಿ ಸ್ಪಿನ್ನರ್ ಗಳೇ ನಿರ್ಣಾಯಕ ಪಾತ್ರ ವಹಿಸಿದರು. ಹೀಗಾಗಿ ವೇಗಿಗಳಿಗೆ ಅತಿಯಾದ ಮಹತ್ವ ಕೊಡುವುದನ್ನು ಬಿಡಬೇಕಿದೆ. ಇವೆರಡೂ ತಪ್ಪುಗಳನ್ನು ತಿದ್ದಿಕೊಳ್ಳದೇ ಹೋದರೆ ಮುಂದಿನ ಪಂದ್ಯದಲ್ಲೂ ಸೋಲು ಗ್ಯಾರಂಟಿ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾ ಉದ್ದಾರವಾಗಬೇಕೆಂದರೆ ಈ ಇಬ್ಬರನ್ನು ಮೊದಲು ಕಿತ್ತು ಹಾಕ್ಬೇಕು

ಎರಡು ಬಾರಿ ಸೊನ್ನೆ ಸುತ್ತಿದ ವಿರಾಟ್ ಕೊಹ್ಲಿ ಮಾಡಿದ್ದೇನು

INDW vs NZW: ಅಂತೂ ಇಂತೂ ವಿಶ್ವಕಪ್ ಸೆಮಿಫೈನಲ್ ಗೆ ಲಗ್ಗೆಯಿಟ್ಟ ಭಾರತ ವನಿತೆಯರು

Rohit Sharma: ಅಯ್ಯೋ.. ನಾನೇ ಕಟ್ಟಿದ ಕೋಟೆ ನನ್ನೆದುರಲ್ಲೇ ಒಡೆದೇ ಹೋಯ್ತಲ್ಲಾ

INDW vs NZW: ಒಂದೇ ದಿನ ಕಿಂಗ್ ಕೊಹ್ಲಿ ಶೂನ್ಯ, ಕ್ವೀನ್ ಸ್ಮೃತಿ ಮಂಧಾನ ಸೆಂಚುರಿ

ಮುಂದಿನ ಸುದ್ದಿ
Show comments