Webdunia - Bharat's app for daily news and videos

Install App

ವಿಶ್ವಕಪ್ ಗೆದ್ದ ಬಳಿಕ ಭಾರತಕ್ಕೆ ಮರಳಲು ಸಾಧ್ಯವಾಗದೇ ಟೀಂ ಇಂಡಿಯಾ ಕ್ರಿಕೆಟಿಗ ಒದ್ದಾಟ

Krishnaveni K
ಸೋಮವಾರ, 1 ಜುಲೈ 2024 (11:15 IST)
ಬಾರ್ಬಡೋಸ್: ಟಿ20 ವಿಶ್ವಕಪ್ 2024 ರಲ್ಲಿ ಚಾಂಪಿಯನ್ ಆಗಿರುವ ಟೀಂ ಇಂಡಿಯಾ ಆಟಗಾರರು ಯಾವಾಗ ತವರಿಗೆ ಮರಳುತ್ತಾರೆ ಎಂದು ಅಭಿಮಾನಿಗಳು ಕಾಯುತ್ತಿದ್ದಾರೆ. ಆದರೆ ಅತ್ತ ಕ್ರಿಕೆಟಿಗರು ತವರಿಗೆ ಮರಳಲಾಗದೇ ಒದ್ದಾಡುತ್ತಿದ್ದಾರೆ.

ಇದಕ್ಕೆ ಕಾರಣವೂ ಇದೆ. ಸದ್ಯಕ್ಕೆ ಬಾರ್ಬಡೋಸ್ ನಲ್ಲಿರುವ ಕ್ರಿಕೆಟಿಗರು ನಿನ್ನೆಯೇ ಭಾರತಕ್ಕೆ ಪ್ರಯಾಣ ಮಾಡಬೇಕಿತ್ತು. ಆದರೆ ಸದ್ಯಕ್ಕೆ ವೆಸ್ಟ್ ಇಂಡೀಸ್ ನಲ್ಲಿ ಪ್ರತಿಕೂಲ ಹವಾಮಾನವಿದೆ. ಮಳೆ, ಮೋಡ ಕವಿದ ವಾತಾವರಣದಿಂದಾಗಿ ವಿಮಾನಗಳ ಹಾರಾಟಕ್ಕೆ ಅಡ್ಡಿಯಾಗಿದೆ.

ಜೊತೆಗೆ ಬಿರುಗಾಳಿ ಸಹಿತ ಮಳೆಯಾಗುವ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹೀಗಾಗಿ ಬಹುತೇಕ ವಿಮಾನಗಳು ರದ್ದಾಗಿವೆ. ಇದರಿಂದಾಗಿ ಟೀಂ ಇಂಡಿಯಾ ಕ್ರಿಕೆಟಿಗರಿಗೆ ತವರಿಗೆ ಮರಳಲು ಸಾಧ್ಯವಾಗಿಲ್ಲ. ಟೀಂ ಇಂಡಿಯಾ ಆಟಗಾರರು ಇಲ್ಲಿನ ಹಿಲ್ಟನ್ ಹೋಟೆಲ್ ನಲ್ಲಿ ತಂಗಿದ್ದಾರೆ. ಸದ್ಯಕ್ಕೆ ಬಾರ್ಬಡೋಸ್ ನಲ್ಲಿ ಕರ್ಫ್ಯೂ ವಾತಾವರಣವಿದೆ.

ಆಟಗಾರರು ಮಾತ್ರವಲ್ಲ, ವೆಸ್ಟ್ ಇಂಡೀಸ್ ಗೆ ತೆರಳಿದ್ದ ಬಿಸಿಸಿಐ ಕಾರ್ಯದರ್ಶಿ ಜಯ್ ಶಾ ಸೇರಿದಂತೆ ಅನೇಕರು ಅಲ್ಲಿಯೇ ಬಾಕಿಯಾಗಿದ್ದಾರೆ. ವಿಶ್ವಕಪ್ ಗೆಲುವಿನ ಬಳಿಕ ತವರಿಗೆ ಮರಳಲು ಹಾತೊರೆಯುತ್ತಿರುವ ಕ್ರಿಕೆಟಿಗರಿಗೆ ಈಗ ಹವಾಮಾನ ಶಾಪವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

ಮುಂದಿನ ಸುದ್ದಿ
Show comments