ಕೋಚ್ ಗೌತಮ್ ಗಂಭೀರ್ ನಿಂದ ಟೀಂ ಇಂಡಿಯಾ ಫುಲ್ ಕನ್ ಫ್ಯೂಸ್

Krishnaveni K
ಗುರುವಾರ, 2 ಜನವರಿ 2025 (08:53 IST)
ಸಿಡ್ನಿ: ಟೀಂ ಇಂಡಿಯಾ ಕೋಚ್ ಆಗಿ ಗೌತಮ್ ಗಂಭೀರ್ ಅಧಿಕಾರ ಸ್ವೀಕರಿಸಿದಾಗಿನಿಂದ ಟೀಂ ಇಂಡಿಯಾ ಆಟಗಾರರು ಫುಲ್ ಕನ್ ಫ್ಯೂಸ್ ಆಗಿದ್ದಾರೆ ಎನ್ನುತ್ತಿದೆ ಕೆಲವು ವರದಿಗಳು.
 

ಟೀಂ ಇಂಡಿಯಾ ಈಗ ಸತತ ಸೋಲಿನಿಂದ ಕಂಗೆಟ್ಟಿದೆ. ರಾಹುಲ್ ದ್ರಾವಿಡ್ ಕೋಚ್ ಹುದ್ದೆಯಿಂದ ನಿರ್ಗಮಿಸಿದ ಬಳಿಕ ಟೀಂ ಇಂಡಿಯಾದಲ್ಲೂ ಗೆಲುವು ಕೂಡಾ ಅವರ ಹಿಂದೆಯೇ ಹೋಗಿದೆ. ಗಂಭೀರ್ ಕೋಚ್ ಆದ ಬಳಿಕ ತಂಡದ ಬ್ಯಾಟಿಂಗ್ ಪಾತಾಳಕ್ಕೆ ಕುಸಿದಿದೆ. ಗೆಲುವೂ ಅಪರೂಪವಾಗಿದೆ.

ಈ ನಡುವೆ ಗೌತಮ್ ಗಂಭೀರ್ ಕೋಚ್ ಆದ ಬಳಿಕ ಟೀಂ ಇಂಡಿಯಾದಲ್ಲಿ ಎಲ್ಲವೂ ಸರಿಯಿಲ್ಲ ಎಂಬ ಮಾತು ಕೇಳಿಬರುತ್ತಿದೆ. ದ್ರಾವಿಡ್ ಇದ್ದಾಗ ಯಾವುದೇ ಆಟಗಾರನನ್ನು ಕೈ ಬಿಡುವ ಮೊದಲು ಅಥವಾ ಆತನ ಪಾತ್ರವೇನು ಎಂಬ ಬಗ್ಗೆ ಸೂಕ್ತ ರೀತಿಯಲ್ಲಿ ಸಂವಹನ ನಡೆಸಲಾಗುತ್ತಿತ್ತು. ರವಿಶಾಸ್ತ್ರಿ ಕಾಲದಲ್ಲೂ ಇದು ನಡೆಯುತ್ತಿತ್ತು.

ಆದರೆ ಗಂಭೀರ್ ಕೋಚ್ ಆದಾಗಿನಿಂದ ತಂಡದ ಆಟಗಾರರು ತಮ್ಮ ಪಾತ್ರವೇನು ಎಂಬ ಬಗ್ಗೆ ಗೊಂದಲದಲ್ಲಿದ್ದಾರೆ ಎನ್ನಲಾಗುತ್ತಿದೆ. ಈ ಹಿಂದಿನ ಕೋಚ್ ಗಳಿಗೆ ಹೋಲಿಸಿದರೆ ಗಂಭೀರ್ ಆಟಗಾರರ ಜೊತೆ ಸರಿಯಾಗಿ ಸಂವಹನ ನಡೆಸುತ್ತಿಲ್ಲ ಎಂಬ ಆರೋಪಗಳಿವೆ. ತಂಡದ ಆಯ್ಕೆ, ಆಟಗಾರರನ್ನು ನಿಭಾಯಿಸುವ ರೀತಿಯಲ್ಲಿ ಗಂಭೀರ್ ಸಂಪೂರ್ಣ ಗೊಂದಲ ಸೃಷ್ಟಿಸಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿದೆ. ಇದೇ ಕಾರಣಕ್ಕೆ ಟೀಂ ಇಂಡಿಯಾ ಇತ್ತೀಚೆಗಿನ ದಿನಗಳಲ್ಲಿ ಮೊದಲಿನ ಆಟ ಆಡುತ್ತಿಲ್ಲ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಾಲಾಶ್ ಜೊತೆ ಮದುವೆ ಮುರಿದ ಬೆನ್ನಲ್ಲೇ ಸ್ಮೃತಿ ಮಂಧಾನ ಮತ್ತು ಕ್ರಿಕೆಟಿಗರು ಮಾಡಿದ್ದೇನು ಗೊತ್ತಾ

ರೋಹಿತ್, ಕೊಹ್ಲಿಗೆ ದೇಶೀಯ ಟೂರ್ನಿ ಮಾಡಲು ಒತ್ತಡ ಹೇರಲಾಗಿದೆಯೇ

ಏಕದಿನ ಕ್ರಿಕೆಟ್‌ನಲ್ಲಿ ಮೋಡಿ ಬೆನ್ನಲ್ಲೇ ಕೊಹ್ಲಿ ವೈಜಾಗ್‌ನ ಪ್ರಮುಖ ದೇವಸ್ಥಾನಕ್ಕೆ ಭೇಟಿ

ಕೊನೆಗೂ ಪಲಾಶ್ ಮುಚ್ಚಲ್ ಜತೆಗಿನ ಮದುವೆ ಬಗ್ಗೆ ಮೌನ ಮುರಿದ ಸ್ಮೃತಿ ಮಂಧಾನ

ಆರ್‌ಸಿಬಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಬೆಂಗಳೂರಿನಿಂದ ಐಪಿಎಲ್‌ ಪಂದ್ಯ ಕೈತಪ್ಪಲ್ಲ ಎಂದ ಡಿಕೆಶಿ

ಮುಂದಿನ ಸುದ್ದಿ
Show comments