Webdunia - Bharat's app for daily news and videos

Install App

ಏಷ್ಯಾ ಕಪ್: ಹಿಟ್ ಮ್ಯಾನ್ ರೋಹಿತ್ ಶರ್ಮಾ ಏಕಾಂಗಿ ಹೋರಾಟ

Webdunia
ಮಂಗಳವಾರ, 6 ಸೆಪ್ಟಂಬರ್ 2022 (21:27 IST)
ದುಬೈ: ಏಷ್ಯಾಕಪ್ ಕ್ರಿಕೆಟ್ ಟೂರ್ನಿಯ ಸೂಪರ್ ಫೋರ್ ಹಂತದ ಪಂದ್ಯದಲ್ಲಿ ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಿ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 173 ರನ್ ಗಳಿಸಿದೆ.

ಟೀಂ ಇಂಡಿಯಾ ಬ್ಯಾಟಿಂಗ್ ನದ್ದು ಮತ್ತದೇ ರಾಗ, ಅದೇ ಹಾಡು ಎನ್ನುವಂತಿತ್ತು. ಕಳೆದ ಪಂದ್ಯದಲ್ಲಿ ಕೊಹ್ಲಿ ಏಕಾಂಗಿ ಶೋ ನಡೆಸಿದ್ದರು. ಈ ಪಂದ್ಯದಲ್ಲಿ ರೋಹಿತ್ ಶರ್ಮಾ ಏಕಾಂಗಿ ಹೋರಾಟ ನಡೆಸಿದರು. ರೋಹಿತ್ 41 ಎಸೆತಗಳಿಂದ 4 ಸಿಕ್ಸರ್ ಸಹಿತ 71 ರನ್ ಚಚ್ಚಿ ಔಟಾದರು. ಅವರು ಕ್ರೀಸ್ ನಲ್ಲಿರುವವರೆಗೂ ಭಾರತದ ಬ್ಯಾಟಿಂಗ್ ಸರಿಯಾದ ಹಾದಿಯಲ್ಲಿತ್ತು.

ಆದರೆ ಅವರು ಔಟಾಗುತ್ತಿದ್ದಂತೇ 34 ರನ್ ಗಳಿಸಿದ ಸೂರ್ಯಕುಮಾರ್ ಯಾದವ್ ಔಟಾದರು. ಬಳಿಕ 17 ರನ್ ಗಳಿಸಿದ ಹಾರ್ದಿಕ್ ಪಾಂಡ್ಯ ದೊಡ್ಡ ಹೊಡೆತಕ್ಕೆ ಕೈ ಹಾಕಲು ಹೋಗಿ ವಿಕೆಟ್ ಒಪ್ಪಿಸಿದರು. ದೀಪಕ್ ಹೂಡಾ ಗಳಿಕೆ ಕೇವಲ 3 ರನ್. 10 ನೇ ಓವರ್ ಬಳಿಕ ಮತ್ತೆ ರನ್ ಗಳಿಸಲು ಪರದಾಡಿದ ಭಾರತ ನಿರೀಕ್ಷಿಸಿದಷ್ಟು ರನ್ ಗಳಿಸಲಾಗದೇ ಪರದಾಡಿತು. ಮತ್ತೆ ವಿಫಲರಾದ ಆರಂಭಿಕ ಕೆಎಲ್ ರಾಹುಲ್ 6 ರನ್ ಗೆ ವಿಕೆಟ್ ಒಪ್ಪಿಸಿದರೆ ವಿರಾಟ್ ಕೊಹ್ಲಿ ಶೂನ್ಯ ಸುತ್ತಿದರು. ಕೊನೆಯ ಓವರ್ ಗಳಲ್ಲಿ ರಿಷಬ್ ಪಂತ್ ರನ್ ಗತಿ ಹೆಚ್ಚಿಸಬಹುದು ಎಂಬ ವಿಶ್ವಾಸವಿತ್ತು. ಆದರೆ ಅವರು 17 ರನ್ ಗೆ ವಿಕೆಟ್ ಒಪ್ಪಿಸಿದರು. ಇದರೊಂದಿಗೆ ಭಾರತದ ರನ್ ಗತಿ ಹೆಚ್ಚಿಸುವ ಕನಸು ಭಗ್ನಗೊಂಡಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಗೆಳೆಯ ಪ್ರಸಿದ್ಧನಿಗಾಗಿ ಅಂಪಾಯರ್ ಜೊತೆ ಕಿತ್ತಾಟಕ್ಕಿಳಿದ ಕೆಎಲ್ ರಾಹುಲ್

Video: ಮಗಾ ಈ ಕಡೆಯಿಂದ ಹಾಕು ಸ್ವಲ್ಪ: ಪ್ರಸಿದ್ಧ ಕೃಷ್ಣಗೆ ಕನ್ನಡದಲ್ಲೇ ಟಿಪ್ಸ್ ಕೊಟ್ಟ ಕೆಎಲ್ ರಾಹುಲ್

Video: ಕೊಡು ಮಗಾ ಬ್ಲಷ್ ಮಾಡ್ತಾ ಇದ್ದಾನೆ.. ಕರುಣ್ ನಾಯರ್ ಗೆ ಚುಡಾಯಿಸಿದ ಪ್ರಸಿದ್ಧ

IND vs ENG: ಇಂದಿನ ದಿನದಾಟಕ್ಕೂ ಓವಲ್ ಮೈದಾನದಲ್ಲಿ ಮಳೆ ಬರುತ್ತಾ: ಇಲ್ಲಿದೆ ಹವಾಮಾನ ವರದಿ

IND vs ENG: ಕರುಣ್ ನಾಯರ್ ಗೆ ಅವಮಾನದ ನಂತರ ಸನ್ಮಾನ

ಮುಂದಿನ ಸುದ್ದಿ
Show comments