IND vs ENG test: ಕೆಎಲ್ ರಾಹುಲ್, ಬುಮ್ರಾ ಔಟ್: ರಾಂಚಿಗೆ ಬಂದ ಟೀಂ ಇಂಡಿಯಾ

Krishnaveni K
ಬುಧವಾರ, 21 ಫೆಬ್ರವರಿ 2024 (09:17 IST)
Photo Courtesy: Instagram
ರಾಂಚಿ: ಇಂಗ್ಲೆಂಡ್ ವಿರುದ್ಧ ನಾಲ್ಕನೇ ಟೆಸ್ಟ್ ಪಂದ್ಯವಾಡಲು ಟೀಂ ಇಂಡಿಯಾ ನಿನ್ನೆ ಜಾರ್ಖಂಡ್ ನ ರಾಂಚಿಗೆ ಬಂದಿಳಿದಿದೆ. ಆದರೆ ಈ ಪಂದ್ಯಕ್ಕೆ ಸ್ಟಾರ್ ಆಟಗಾರರಾದ ಕೆಎಲ್ ರಾಹುಲ್, ಜಸ್ಪ್ರೀತ್ ಬುಮ್ರಾ ಗೈರಾಗಲಿದ್ದಾರೆ.

ಟೀಂ ಇಂಡಿಯಾ ರಾಂಚಿಗೆ ಹೊರಟಿರುವ ಫೋಟೋಗಳನ್ನು ಕ್ರಿಕೆಟಿಗರು ಸೋಷಿಯಲ್ ಮೀಡಿಯಾದಲ್ಲಿ ಪ್ರಕಟಿಸಿದ್ದರು. ಆದರೆ ರಾಂಚಿಗೆ ಬಂದಿಳಿದ ಟೀಂ ಇಂಡಿಯಾದಲ್ಲಿ ಸ್ಟಾರ್ ವೇಗಿ ಜಸ್ಪ್ರಿತ್ ಬುಮ್ರಾ ಕಂಡುಬಂದಿಲ್ಲ. ಬುಮ್ರಾಗೆ ನಾಲ್ಕನೇ ಪಂದ್ಯದಲ್ಲಿ ವಿಶ್ರಾಂತಿ ನೀಡಲು ನಿರ್ಧರಿಸಿಲಾಗಿದೆ. ಹೀಗಾಗಿ ಬುಮ್ರಾ ತಂಡದ ಜೊತೆ ಪ್ರಯಾಣಿಸಿಲ್ಲ.

ಫೆಬ್ರವರಿ 23 ರಿಂದ ರಾಂಚಿ ಮೈದಾನದಲ್ಲಿ ನಾಲ್ಕನೇ ಟೆಸ್ಟ್ ಪಂದ್ಯ ಆರಂಭವಾಗಲಿದೆ. ಈ ಪಂದ್ಯಕ್ಕೆ ಸತತ ಕ್ರಿಕೆಟ್ ನಿಂದ ಬಳಲಿರುವ ಬುಮ್ರಾಗೆ ವಿಶ್ರಾಂತಿ ನೀಡಲು ವೈದ್ಯರು ಸೂಚಿಸಿದ್ದಾರೆ ಎನ್ನಲಾಗಿದೆ. ಮುಂಬರುವ ವಿಶ್ವಕಪ್ ಹಿನ್ನಲೆಯಲ್ಲಿ ಬುಮ್ರಾಗೆ ಗಾಯವಾಗದಂತೆ ಕಾಪಾಡಿಕೊಳ್ಳುವುದೇ ಟೀಂ ಇಂಡಿಯಾಗೆ ದೊಡ್ಡ ತಲೆನೋವಾಗಿದೆ. ಕಳೆದ ವರ್ಷ ಬೆನ್ನಿನ ಶಸ್ತ್ರಚಿಕಿತ್ಸೆಗೊಳಗಾದ ಬಳಿಕ ಬುಮ್ರಾರನ್ನು ಟೀಂ ಇಂಡಿಯಾ ಎಚ್ಚರಿಕೆಯಿಂದ ಬಳಸಿಕೊಳ್ಳುತ್ತಿದೆ.

ಹೀಗಾಗಿ ಈಗ ವೈದ್ಯರ ಸಲಹೆ ಮೇರೆಗೆ ನಾಲ್ಕನೇ ಪಂದ್ಯಕ್ಕೆ ಅವರಿಗೆ ವಿಶ್ರಾಂತಿ ನೀಡಲಾಗಿದೆ ಎನ್ನಲಾಗಿದೆ. ಒಂದು ವೇಳೆ ರಾಂಚಿಯಲ್ಲಿ ಬುಮ್ರಾ ಅನುಪಸ್ಥಿತಿಯಲ್ಲೂ ತಂಡ ಗೆದ್ದರೆ ಅಂತಿಮ ಪಂದ್ಯಕ್ಕೂ ಅವರು ಗೈರಾಗಲಿದ್ದಾರೆ. ನಾಲ್ಕನೇ ಪಂದ್ಯವನ್ನು ಗೆದ್ದರೆ ಟೀಂ ಇಂಡಿಯಾ ಸರಣಿ ಕೈವಶ ಮಾಡಿಕೊಳ್ಳಲಿದೆ. ಇಂದಿನಿಂದ ಟೀಂ ಇಂಡಿಯಾ ಅಭ್ಯಾಸ ಆರಂಭಿಸುವ ನಿರೀಕ್ಷೆಯಿದೆ.

ಜೊತೆಗೆ ಕಳೆದ ಎರಡು ಟೆಸ್ಟ್ ಪಂದ್ಯಗಳಲ್ಲಿ ಗಾಯದ ಕಾರಣದಿಂದ ತಂಡದಿಂದ ಹೊರುಗಳಿದಿದ್ದ ಬ್ಯಾಟಿಗ ಕೆಎಲ್ ರಾಹುಲ್ ರನ್ನೂ ಅನ್ ಫಿಟ್ ಎಂಬ ಕಾರಣಕ್ಕೆ ನಾಲ್ಕನೇ ಪಂದ್ಯದಿಂದ ಹೊರಗಿಡಲಾಗಿದೆ. ಕೊನೆಯ ಮೂರು ಪಂದ್ಯಗಳಿಗೆ ಆಯ್ಕೆಯಾದ ತಂಡಲ್ಲಿ ರಾಹುಲ್ ಕೂಡಾ ಸ್ಥಾನ ಪಡೆದಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮೊಹಮ್ಮದ್ ಶಮಿ ಯಾಕೆ ಆಯ್ಕೆ ಮಾಡಿಲ್ಲ ಎಂದು ಕೇಳಿದ್ದಕ್ಕೆ ಶುಭಮನ್ ಗಿಲ್ ಉತ್ತರ ಹೀಗಿತ್ತು

ಕ್ರಿಕೆಟ್ ಸುಂದರಿ ಸ್ಮೃತಿ ಮಂಧಾನ ಮದುವೆ ಕಾರ್ಡ್ ಫೋಟೋ ವೈರಲ್

IND vs SA Test: ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ

ಜೀವ ಭಯಕ್ಕೆ ಪಾಕಿಸ್ತಾನದಿಂದ ವಾಪಸ್ ಆಗ್ತೀವಿ ಎಂದ ಶ್ರೀಲಂಕಾ ಕ್ರಿಕೆಟಿಗರು: ಬರಬೇಡಿ ಅಂತಿದೆ ಕ್ರಿಕೆಟ್ ಬೋರ್ಡ್

ಮೊದಲ ಮದುವೆಯ ವರ್ಷದೊಳಗೆ ಎರಡನೇ ಮದುವೆಯಾದ ಅಫ್ಘಾನ್ ಕ್ರಿಕೆಟರ್ ರಶೀದ್ ಖಾನ್‌

ಮುಂದಿನ ಸುದ್ದಿ
Show comments