Webdunia - Bharat's app for daily news and videos

Install App

ಐತಿಹಾಸಿಕ ಪಂದ್ಯದಲ್ಲಿ ಮನೀಶ್ ಪಾಂಡೆಗೆ ಸಿಗುತ್ತಾ ಛಾನ್ಸ್!

Webdunia
ಮಂಗಳವಾರ, 13 ಫೆಬ್ರವರಿ 2018 (04:49 IST)
ಪೋರ್ಟ್ ಎಲಿಜೆಬತ್: ಕಾಮನಬಿಲ್ಲಿನ ನಾಡಿನಲ್ಲಿ ಹೊಸದೊಂದು ಇತಿಹಾಸ ರಚಿಸಲು ಸಿದ್ಧವಾಗಿರುವ ಟೀಂ ಇಂಡಿಯಾ ಇಂದು ಐದನೇ ಏಕದಿನ ಆಡಲು ಸಜ್ಜಾಗಿದೆ.
 

ಆದರೆ ಭಾರತ ತಂಡಕ್ಕೆ ಕಳೆದ ಪಂದ್ಯದಲ್ಲಿ ಮಾಡಿದ್ದ ಸ್ವಯಂಕೃತ ಅಪರಾಧಗಳನ್ನು ತಿದ್ದಿಕೊಳ್ಳುವ ಅನಿವಾರ್ಯತೆಯಿದೆ. ಫೀಲ್ಡಿಂಗ್ ಮಾಡಿದ ತಪ್ಪುಗಳು, ಬೌಲಿಂಗ್ ನಲ್ಲಿ ತೋರಿದ ಬೇಜವಾಬ್ದಾರಿತನ ತಿದ್ದಿಕೊಳ್ಳಲೇಬೇಕಿದೆ.

ಕೊಹ್ಲಿ, ಧವನ್ ಆಟದಿಂದಾಗಿ ಭಾರತ ತಂಡದ ಬ್ಯಾಟಿಂಗ್ ಹುಳುಕು ಹೆಚ್ಚಾಗಿ ಹೊರ ಬಂದಿಲ್ಲ. ಹಾಗಿದ್ದರೂ ಮಧ್ಯಮ ಕ್ರಮಾಂಕ ಇನ್ನೂ ಸಿಡಿದಿಲ್ಲ. ಅಜಿಂಕ್ಯಾ ರೆಹಾನೆ, ಹಾರ್ದಿಕ್ ಪಾಂಡ್ಯ ತಮ್ಮ ಖ್ಯಾತಿಗೆ ತಕ್ಕ ಆಟವಾಡಿಲ್ಲ. ರೋಹಿತ್ ಶರ್ಮಾ ಕೂಡಾ ಪರದಾಡುತ್ತಿದ್ದಾರೆ. ಇದರಿಂದಾಗಿ ನಿರೀಕ್ಷೆಗೆ ತಕ್ಕ ರನ್ ಸ್ಕೋರ್ ಆಗುತ್ತಿಲ್ಲ. ಹೀಗಾಗಿ ರೆಹಾನೆಗೆ ಆರಂಭಿಕ ಸ್ಥಾನಕ್ಕೆ ಬಡ್ತಿ ನೀಡಿ ಕನ್ನಡಿಗ ಮನೀಶ್ ಪಾಂಡೆಗೆ ಮಧ್ಯಮ ಕ್ರಮಾಂಕದಲ್ಲಿ ಆಡುವ ಅವಕಾಶ ಸಿಗಬಹುದೇ ಎಂಬ ನಿರೀಕ್ಷೆ ಅಭಿಮಾನಿಗಳದ್ದು.

ಎಲ್ಲಾ ಹುಳುಕಳನ್ನು ಮೀರಿ ಇಂದು ಗೆಲ್ಲಲು ಸಾಧ್ಯವಾದರೆ ಭಾರತದ ಎದುರು ಹೊಸದೊಂದು ಇತಿಹಾಸ ತೆರೆಯಲಿದೆ. ಇದುವರೆಗೆ ಆಫ್ರಿಕಾ ನಾಡಿನಲ್ಲಿ ಮರೀಚಿಕೆಯಾಗಿದ್ದ ಸರಣಿ ಗೆಲುವು ಟೀಂ ಇಂಡಿಯಾ ಕೈ ವಶ ಮಾಡಿಕೊಳ್ಳಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments