Webdunia - Bharat's app for daily news and videos

Install App

ಇಂದು ವಿಶ್ವ ವಿಜೇತ ಟೀಂ ಇಂಡಿಯಾಗೆ ಅಭಿಮಾನದ ಮೆರವಣಿಗೆ

Krishnaveni K
ಗುರುವಾರ, 4 ಜುಲೈ 2024 (09:19 IST)
ಮುಂಬೈ: ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾ ಕ್ರಿಕೆಟಿಗರು ಭಾರತಕ್ಕೆ ಬಂದಿದ್ದು ಇಂದು ಅಭಿಮಾನಿಗಳ ಸಮ್ಮುಖದಲ್ಲಿ ವಿಜೇತ ತಂಡದ ಮೆರವಣಿಗೆ ನಡೆಯಲಿದೆ.

ಕಳೆದ ಬಾರಿಯೂ T20 ವಿಶ್ವಕಪ್ ಗೆದ್ದಾಗ ಇಡೀ ಟೀಂ ಇಂಡಿಯಾ ಬಳಗ ಸಾರ್ವಜನಿಕವಾಗಿ ತೆರೆದ ಬಸ್ ನಲ್ಲಿ ಮೆರವಣಿಗೆಯಲ್ಲಿ ಸಾಗಿತ್ತು. ಈ ಮೂಲಕ ಅಭಿಮಾನಿಗಳ ಪ್ರೀತಿಗೆ ಧನ್ಯವಾದ ಸಲ್ಲಿಸಿತ್ತು. ಇದೀಗ ಮತ್ತೊಮ್ಮೆ ಅಂತಹದ್ದೇ ಕಾರ್ಯಕ್ರಮ ನಡೆಸಲು ಬಿಸಿಸಿಐ ತಯಾರಿ ಮಾಡಿಕೊಂಡಿದೆ.

2007 ರಲ್ಲಿ ಧೋನಿ ನೇತೃತ್ವದಲ್ಲಿ ಟಿ20 ವಿಶ್ವಕಪ್ ಗೆದ್ದಾಗ ಟೀಂ ಇಂಡಿಯಾ ಕ್ರಿಕೆಟಿಗರನ್ನು ತೆರೆದ ಬಸ್ ನಲ್ಲಿ ರಸ್ತೆಯಲ್ಲಿ ಮೆರವಣಿಗೆ ಮಾಡಲಾಗಿತ್ತು. ಈ ವೇಳೆ ಧೋನಿ ಸೇರಿದಂತೆ ಎಲ್ಲಾ ಆಟಗಾರರೂ ಟ್ರೋಫಿ ಹಿಡಿದು ಸಾವಿರಾರು ಅಭಿಮಾನಿಗಳ ಮಧ್ಯೆ ಸಾಗಿದ್ದರು.

ಇದೀಗ 2024 ರ ಟಿ20 ವಿಶ್ವಕಪ್ ಗೆದ್ದ ಬಳಿಕವೂ ಸಾರ್ವಜನಿಕವಾಗಿ ಮೆರವಣಿಗೆ ಮಾಡಿ ಸಂಭ್ರಮಿಸಲಾಗುತ್ತಿದೆ. ಬಾರ್ಬಡೋಶ್ ನಲ್ಲಿ ಬೆರಿಲ್ ಚಂಡಮಾರುತದಿಂದಾಗಿ ಟೀಂ ಇಂಡಿಯಾ ಕ್ರಿಕೆಟಿಗರು ತಡವಾಗಿ ತವರಿಗೆ ಮರಳಿದ್ದಾರೆ. ಏರ್ ಇಂಡಿಯಾ ವಿಶೇಷ ವಿಮಾನದ ಮೂಲಕ ಅವರನ್ನು ಸ್ವದೇಶಕ್ಕೆ ಕರೆತರಲಾಗಿದೆ. ಇಂದು ಮಧ್ಯಾಹ್ನ ಪ್ರಧಾನಿ ಮೋದಿ ಜೊತೆ ಔತಣಕೂಟ ಏರ್ಪಡಿಸಲಾಗಿದೆ. ಇಂದು ಸಂಜೆ ಮುಂಬೈನಲ್ಲಿ ನಾರಿಮನ್ ಪಾಯಿಂಟ್ ನಿಂದ ಕ್ರಿಕೆಟಿಗರ ರೋಡ್ ಶೋ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

Virat Kohli: ನೀವೇ ಕರೆಸಿ ಜಾತ್ರೆ ಮಾಡಿ ಈಗ ವಿರಾಟ್ ಕೊಹ್ಲಿ ಮೇಲೆ ಯಾಕೆ ಕೇಸ್ ಹಾಕ್ತೀರಿ

Vijay Mallya: ನಾನೇನಾದ್ರೂ ಆರ್ ಸಿಬಿಯಲ್ಲಿ ಇದ್ದಿದ್ರೆ ಕೆಎಲ್ ರಾಹುಲ್..: ವಿಜಯ್ ಮಲ್ಯ ಸ್ಪೋಟಕ ಹೇಳಿಕೆ

Arrest Kohli: ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ನಲ್ಲಿ ಹ್ಯಾಶ್‌ಟ್ಯಾಗ್‌

ಮುಂದಿನ ಸುದ್ದಿ
Show comments