Webdunia - Bharat's app for daily news and videos

Install App

ಟೀಂ ಇಂಡಿಯಾ ವಿರುದ್ಧ ಸಿಟ್ಟಿಗೆದ್ದು ಸುದ್ದಿಗೋಷ್ಠಿ ಬಹಿಷ್ಕರಿಸಿದ ಮಾಧ್ಯಮಗಳು

Webdunia
ಮಂಗಳವಾರ, 4 ಜೂನ್ 2019 (10:07 IST)
ಲಂಡನ್: ವಿಶ್ವಕಪ್ ಕ್ರಿಕೆಟ್ 2019 ರ ಮೊದಲ ಪಂದ್ಯವನ್ನು ಟೀಂ ಇಂಡಿಯಾ ಜೂನ್ 6 ರಂದು ದ.ಆಫ್ರಿಕಾ ವಿರುದ್ಧ ಆಡಲಿದ್ದು, ಅದಕ್ಕೂ ಮೊದಲು ನಡೆಯಬೇಕಿರುವ ಸುದ್ದಿಗೋಷ್ಠಿಗೆ ಮಾಧ್ಯಮಗಳಿಂದ ಬಹಿಷ್ಕಾರದ ಬಿಸಿ ಅನುಭವಿಸಿದೆ.


ಟೀಂ ಇಂಡಿಯಾ ವಿರುದ್ಧ ಮಾಧ್ಯಮಗಳಿಗೆ ಸಿಟ್ಟು ಬರಲು ಕಾರಣವೇನು ಗೊತ್ತಾ? ಸಾಮಾನ್ಯವಾಗಿ ಇಂತಹ ಮಹತ್ವದ ಟೂರ್ನಿಗೆ ಮೊದಲು ಸುದ್ದಿಗೋಷ್ಠಿಗೆ ಕೋಚ್ ರವಿಶಾಸ್ತ್ರಿ ಅಥವಾ ಸಹಾಯಕ ಸಿಬ್ಬಂದಿಗಳು ಇಲ್ಲವೇ ತಂಡದ ಹಿರಿಯ ಕ್ರಿಕೆಟಿಗರನ್ನು ಕಳುಹಿಸಬೇಕಿತ್ತು.

ಆದರೆ ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ಮಾಧ್ಯಮಗಳ ಎದುರು ಮಾತನಾಡಲು ನೆಟ್ ಬೌಲರ್ ಗಳನ್ನು ಕಳುಹಿಸಿ ಅವಮಾನ ಮಾಡಿದೆ. ಇದರಿಂದ ಸಿಟ್ಟಿಗೆದ್ದ ಮಾಧ್ಯಮಗಳು ಸುದ್ದಿಗೋಷ್ಠಿಯನ್ನೇ ಬಹಿಷ್ಕರಿಸಿವೆ.

ಈ ಬಗ್ಗೆ ಟೀಂ ಇಂಡಿಯಾ ಮೀಡಿಯಾ ಮ್ಯಾನೇಜರ್ ಮತ್ತು ಮಾಧ್ಯಮ ಪ್ರತಿನಿಧಿಗಳ ನಡುವೆ ಕಿತ್ತಾಟ ನಡೆದಿದೆ. ನೆಟ್ ಬೌಲರ್ ಗಳಾಗಿ ತಂಡದೊಂದಿಗೆ ಬಂದಿರುವ ದೀಪಕ್ ಚಹರ್ ಮತ್ತು ಅವೇಶ್ ತಂಡದ ಬಗ್ಗೆ ಏನು ಹೇಳಲು ಸಾಧ್ಯ? ಹಿರಿಯ ಆಟಗಾರರನ್ನು ಕರೆಸಿ ಎಂದಿದ್ದಕ್ಕೆ ಮ್ಯಾನೇಜರ್ ಇನ್ನೂ ಭಾರತ ಒಂದೇ ಒಂದು ಪಂದ್ಯವಾಡಿಲ್ಲ. ಹೀಗಾಗಿ ಸಾಧ್ಯವಿಲ್ಲ ಎಂದು ಅಸಮಂಜಸ ಉತ್ತರ ನೀಡಿದ್ದು ಮಾಧ್ಯಮಗಳ ಆಕ್ರೋಶಕ್ಕೆ ಕಾರಣವಾಗಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments