Webdunia - Bharat's app for daily news and videos

Install App

ಕೋಚ್ ಆಗಿ ಮುಂದುವರಿಯುವಂತೆ ದ್ರಾವಿಡ್ ಗೆ ಟೀಂ ಇಂಡಿಯಾ ಕ್ರಿಕೆಟಿಗ ಒತ್ತಾಯ

Krishnaveni K
ಬುಧವಾರ, 15 ಮೇ 2024 (14:30 IST)
ಮುಂಬೈ: ಇದೇ ಜೂನ್ ಅಂತ್ಯಕ್ಕೆ ಅಧಿಕಾರಾವಧಿ ಮುಗಿಸುತ್ತಿರುವ ಕೋಚ್ ರಾಹುಲ್ ದ್ರಾವಿಡ್ ಗೆ ತಂಡದಲ್ಲಿರುವ ಹಿರಿಯ ಆಟಗಾರರು ಹುದ್ದೆ ತ್ಯಜಿಸದಂತೆ ಮನವಿ ಮಾಡಿದ್ದಾರೆ ಎನ್ನಲಾಗಿದೆ. ಆದರೆ ಇದಕ್ಕೆ ದ್ರಾವಿಡ್ ಪ್ರತಿಕ್ರಿಯೆ ಏನಾಗಿತ್ತು ಎಂದು ನೋಡಿ.

ಈಗಾಗಲೇ ಟೀಂ ಇಂಡಿಯಾ ಹೊಸ ಕೋಚ್ ಹುಡುಕಾಟಕ್ಕೆ ಅರ್ಜಿ ಆಹ್ವಾನಿಸಿದೆ. ಕೆಲವರು ಈಗಾಗಲೇ ಅರ್ಜಿ ಸಲ್ಲಿಸಿದ್ದಾರೆ. ಒಂದು ವೇಳೆ ದ್ರಾವಿಡ್ ಮುಂದುವರಿಯಲು ಬಯಸಿದರೆ ಅವರು ಮತ್ತೊಮ್ಮೆ ಅರ್ಜಿ ಸಲ್ಲಿಸಬಹುದು ಎಂದು ಬಿಸಿಸಿಐ ಹೇಳಿದೆ. ಆದರೆ ದ್ರಾವಿಡ್ ಗೆ ಮುಂದುವರಿಯಲು ಆಸಕ್ತಿಯಿಲ್ಲ ಎನ್ನಲಾಗಿದೆ.

ಇತ್ತ ಟೀಂ ಇಂಡಿಯಾದ ಹಿರಿಯ ಆಟಗಾರರೂ ದ್ರಾವಿಡ್ ಮನವೊಲಿಕೆಗೆ ಪ್ರಯತ್ನ ನಡೆಸಿದ್ದಾರೆ. ದ್ರಾವಿಡ್ ಗೆ ಹುದ್ದೆ ತ್ಯಜಿಸಿದಂತೆ ಮನವಿ ಮಾಡಿದ್ದರು. ಆದರೆ ದ್ರಾವಿಡ್ ಇದಕ್ಕೆ ಒಪ್ಪಿಲ್ಲ ಎನ್ನಲಾಗಿದೆ. ತಂಡದ ಆಟಗಾರರಿಗೆ ದ್ರಾವಿಡ್ ಕಾರ್ಯವೈಖರಿ ಬಗ್ಗೆ ತೃಪ್ತಿಯಿದೆ.  ಹಿರಿಯ ಆಟಗಾರರಿಗೂ ಅವರ ಜೊತೆ ಉತ್ತಮ ಬಾಂಧವ್ಯವಿದೆ. ಹೀಗಾಗಿ ಮುಂದುವರಿಯಲು ಮನವಿ ಮಾಡಿದ್ದರು.

ಇನ್ನೊಂದೆಡೆ ಕೋಚ್ ಸ್ಥಾನಕ್ಕೆ ವಿವಿಎಸ್ ಲಕ್ಷ್ಮಣ್ ಹೆಸರು ಕೇಳಿಬರುತ್ತಿತ್ತು. ಆದರೆ ಲಕ್ಷ್ಮಣ್ ಕೂಡಾ ಅರ್ಜಿ ಸಲ್ಲಿಸುತ್ತಿಲ್ಲ ಎಂಬ ಮಾಹಿತಿಯಿದೆ. ಹೀಗಾಗಿ ಇದೀಗ ಚೆನ್ನೈ  ಸೂಪರ್ ಕಿಂಗ್ಸ್ ತಂಡದ ಯಶಸ್ವೀ ಕೋಚ್ ಸ್ಟೀಫನ್ ಫ್ಲೆಮಿಂಗ್ ಹೆಸರು ಮುನ್ನಲೆಗೆ ಬಂದಿದೆ. ಅಂತಿಮವಾಗಿ ಟೀಂ ಇಂಡಿಯಾದ ಕೋಚ್ ಯಾರಾಗುತ್ತಾರೆ ಎಂಬ ಕುತೂಹಲ ಅಭಿಮಾನಿಗಳಲ್ಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯಾ ಕಪ್ ಗೆ ತಿಲಕ್ ವರ್ಮ ಬಿಟ್ಟು ಶುಭಮನ್ ಗಿಲ್ ಗೆ ಮಣೆ: ಇದೆಂಥಾ ಲೆಕ್ಕಾಚಾರ

ತಂದೆ ಸಚಿನ್ ಹಾದಿಯಲ್ಲೇ ನಡೆದ ಮಗ ಅರ್ಜುನ್‌, ಕೈ ಹಿಡಿಯಲಿರುವ ಸಾನಿಯಾ ವಯಸ್ಸೆಷ್ಟು ಗೊತ್ತಾ

ಮತ್ತೆ ಬ್ಯಾಟ್‌ ಹಿಡಿಯಲು ಸಜ್ಜಾದ ಸೂರ್ಯಕುಮಾರ್‌ ಯಾದವ್: ಏಷ್ಯಾ ಕಪ್‌ ಟೂರ್ನಿಗೆ ಮುನ್ನ ಪರೀಕ್ಷೆಯಲ್ಲಿ ಪಾಸ್‌

ಸಚಿನ್ ಪುತ್ರ ಅರ್ಜುನ್ ತೆಂಡುಲ್ಕರ್ ನಿಶ್ಚಿತಾರ್ಥ: ಸಚಿನ್ ಸೊಸೆಯಾಗುತ್ತಿರುವ ಸಾನಿಯಾ ಯಾರು

Rishabh Pant: ಕ್ರಿಕೆಟ್ ಆಡಲಾಗುತ್ತಿಲ್ಲ, ಅಸಹಾಯಕನಾದ ರಿಷಭ್ ಪಂತ್: ವಿಡಿಯೋ ನೋಡಿ

ಮುಂದಿನ ಸುದ್ದಿ
Show comments