Webdunia - Bharat's app for daily news and videos

Install App

ಸ್ಪೆಷಲ್ ಟ್ರೀಟ್ಮೆಂಟ್ ಪಡೆಯುತ್ತಿದ್ದ ಟೀಂ ಇಂಡಿಯಾ ಕ್ರಿಕೆಟಿಗರ ಕತೆ ಈಗ ಏನಾಗಿದೆ ನೋಡಿ

Krishnaveni K
ಬುಧವಾರ, 22 ಜನವರಿ 2025 (12:06 IST)
Photo Credit: X
ಮುಂಬೈ: ಟೀಂ ಇಂಡಿಯಾಕ್ಕೆ ಸೇರಿ ಸ್ಟಾರ್ ಪಟ್ಟ ಸಿಕ್ಕ ಮೇಲೆ ಕ್ರಿಕೆಟಿಗರನ್ನು ಹಿಡಿಯುವವರೇ ಇಲ್ಲ ಎನ್ನುವ ಪರಿಸ್ಥಿತಿಯಿತ್ತು. ಆದರೆ ಈಗ ಕೋಚ್ ಗೌತಮ್ ಗಂಭೀರ್, ಬಿಸಿಸಿಐ ಖಡಕ್ ನಿಯಮದಿಂದಾಗಿ ಹಿರಿಯ ಆಟಗಾರರ ಪರಿಸ್ಥಿತಿ ಏನಾಗಿದೆ ನೋಡಿ.

ಟೀಂ ಇಂಡಿಯಾ ಹಿರಿಯ ಕ್ರಿಕೆಟಿಗರು ಕಳೆದ ಎರಡು ಪ್ರಮುಖ ಸರಣಿಗಳಲ್ಲಿ ಕಳೆಗುಂದಿರುವುದರಿಂದ ಕೋಚ್ ಗೌತಮ್ ಗಂಭೀರ್ ಮತ್ತು ಬಿಸಿಸಿಐ ಖಡಕ್ ನಿಯಮವೊಂದನ್ನು ಜಾರಿಗೆ ತಂದಿದೆ. ಅದರಂತೆ ಎಲ್ಲಾ ಕ್ರಿಕೆಟಿಗರೂ ರಣಜಿ ಪಂದ್ಯಗಳನ್ನು ಆಡಲೇಬೇಕೆಂದು ಕಡ್ಡಾಯ ಮಾಡಿದೆ.

ಪರಿಣಾಮ ಈಗ ಕ್ಯಾಪ್ಟನ್ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ ಸೇರಿದಂತೆ ಎಲ್ಲಾ ಪ್ರಮುಖ ಆಟಗಾರರೂ ಹಿರಿ-ಕಿರಿಯ, ಸ್ಟಾರ್ ಗಳೆಂಬ ಬೇದಭಾವವಿಲ್ಲದೇ ದೇಶೀಯ ಟೂರ್ನಿ ಕಡೆಗೆ ಗಮನ ಹರಿಸಿದ್ದಾರೆ. ಇಷ್ಟು ದಿನ ರಣಜಿ ಕ್ರಿಕೆಟ್ ಇರಲಿ, ಯಾವುದೇ ದೇಶೀಯ ಕ್ರಿಕೆಟ್ ಕಡೆಗೆ ತಲೆಯೂ ಹಾಕಿರದ ಸ್ಟಾರ್ ಕ್ರಿಕೆಟಿಗರು ತಮ್ಮ ಸ್ಟಾರ್ ಗಿರಿ ಹಮ್ಮು ಬಿಟ್ಟು ರಣಜಿ ಪಂದ್ಯಕ್ಕೆ ಸಿದ್ಧತೆ ನಡೆಸುತ್ತಿದ್ದಾರೆ.

ರೋಹಿತ್ ಶರ್ಮಾ ಬಹಳ ದಿನಗಳ ನಂತರ ಮುಂಬೈ ರಣಜಿ ಜೆರ್ಸಿಯಲ್ಲಿ ಅಭ್ಯಾಸ ಮಾಡುತ್ತಿರುವ ಫೋಟೋ ವೈರಲ್ ಆಗಿದೆ. ಮೊಹಮ್ಮದ್ ಸಿರಾಜ್ ಹೈದರಾಬಾದ್ ತಂಡದ ಜೊತೆಗೆ ರಣಜಿ ಪಂದ್ಯಕ್ಕೆ ಅಭ್ಯಾಸ ನಡೆಸುತ್ತಿರುವ ವಿಡಿಯೋ ವೈರಲ್ ಆಗಿದೆ. ವಿರಾಟ್ ಕೊಹ್ಲಿ ಕೂಡಾ ರಣಜಿ ಪಂದ್ಯದಲ್ಲಿ ಭಾಗಿಯಾಗಲಿದ್ದಾರೆ. ಉಳಿದಂತೆ ಶುಬ್ಮನ್ ಗಿಲ್, ರವೀಂದ್ರ ಜಡೇಜಾ ಸೇರಿದಂತೆ ಘಟಾನುಘಟಿ ಆಟಗಾರರೆಲ್ಲರೂ ರಣಜಿ ಪಂದ್ಯದಲ್ಲಿ ಭಾಗಿಯಾಗಲಿದ್ದಾರೆ. ಕೇವಲ ಗಾಯಗೊಂಡಿರುವ ಜಸ್ಪ್ರೀತ್ ಬುಮ್ರಾ ಮತ್ತು ಕೌಟುಂಬಿಕ ಕಾರಣಗಳಿಗೆ ಬ್ರೇಕ್ ಪಡೆದಿರುವ ಕೆಎಲ್ ರಾಹುಲ್ ಮಾತ್ರ ರಣಜಿಯಿಂದ ಹೊರಗುಳಿಯಲಿದ್ದಾರೆ. ನಾಳೆಯಿಂದ ರಣಜಿ ಟ್ರೋಫಿ ಪಂದ್ಯಗಳು ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

Virat Kohli: ನೀವೇ ಕರೆಸಿ ಜಾತ್ರೆ ಮಾಡಿ ಈಗ ವಿರಾಟ್ ಕೊಹ್ಲಿ ಮೇಲೆ ಯಾಕೆ ಕೇಸ್ ಹಾಕ್ತೀರಿ

ಮುಂದಿನ ಸುದ್ದಿ
Show comments