Webdunia - Bharat's app for daily news and videos

Install App

ನ್ಯೂಜಿಲೆಂಡ್ ನೆಲದಲ್ಲಿ ಕೆಎಲ್ ರಾಹುಲ್-ಮನೀಶ್ ಪಾಂಡೆ ಕನ್ನಡದ ಕಂಪು

Webdunia
ಮಂಗಳವಾರ, 11 ಫೆಬ್ರವರಿ 2020 (11:17 IST)
ಬೇ ಓವಲ್: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಅಂತಿಮ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಎದುರಾಳಿಗೆ ಗೆಲ್ಲಲು 297 ರನ್ ಗಳ ಗುರಿ ನಿಗದಿಪಡಿಸಿದೆ. ಎಲ್ಲಕ್ಕಿಂತ ಹೆಚ್ಚಾಗಿ ಈ ಪಂದ್ಯದಲ್ಲಿ ಹೈಲೈಟ್ ಆಗಿದ್ದು ಕನ್ನಡಿಗರಾದ ಕೆಎಲ್ ರಾಹುಲ್ ಮತ್ತು ಮನೀಶ್ ಪಾಂಡೆ ಜತೆಯಾಟ.


ಕರ್ನಾಟಕ ಪರ ರಣಜಿ, ದೇಶೀಯ ಪಂದ್ಯಗಳಲ್ಲಿ ಜತೆಯಾಟವಾಡಿ ಚೆನ್ನಾಗಿ ಅನುಭವ ಹೊಂದಿರುವ ಈ ಇಬ್ಬರೂ ಕನ್ನಡಿಗರೂ ಇಂದು ಭಾರತದ ಇನಿಂಗ್ಸ್ ಕಟ್ಟುವಲ್ಲಿ ಪ್ರಮುಖ ಪಾತ್ರವಹಿಸಿದರು. ಕೆಳ ಕ್ರಮಾಂಕದಲ್ಲಿ ಉತ್ತಮ ಜತೆಯಾಟ ಬೇಕಾಗಿದ್ದ ರಾಹುಲ್-ಮನೀಶ್ ಜೋಡಿ ಶತಕದ ಜತೆಯಾಟವಾಡಿದರು. ವಿಶೇಷವೆಂದರೆ ಇಬ್ಬರೂ ರನ್ ಗಾಗಿ ಓಡಾಡುವಾಗ ಕನ್ನಡದಲ್ಲೇ ಸಂವಹನ ನಡೆಸುತ್ತಿದ್ದುದೂ ಕಂಡುಬಂತು.

ಕೆಎಲ್ ರಾಹುಲ್ ಭರ್ಜರಿ ಶತಕ (112) ಗಳಿಸಿಔಟಾದರೆ ಮರು ಎಸೆತದಲ್ಲೇ 42 ರನ್ ಗಳಿಸಿದ್ದ ಮನೀಶ್ ಪಾಂಡೆ ಕೂಡಾ ವಿಕೆಟ್ ಒಪ್ಪಿಸಿ ನಡೆದರು. ರಾಹುಲ್ ಈ ಮೂಲಕ ಐದನೇ ಕ್ರಮಾಂಕದಲ್ಲಿ ಬ್ಯಾಟಿಂಗ್ ಗೆ ಬಂದು ನ್ಯೂಜಿಲೆಂಡ್ ನೆಲದಲ್ಲಿ ಶತಕ ಗಳಿಸಿದ ಭಾರತದ ಎರಡನೇ ಬ್ಯಾಟ್ಸ್ ಮನ್ ಎಂಬ ದಾಖಲೆ ಮಾಡಿದರು. ಉಳಿದಂತೆ ಶ್ರೇಯಸ್ ಐಯರ್ ಉಪಯುಕ್ತ 62, ಪೃಥ್ವಿ ಶಾ 40 ರನ್ ಗಳಿಸಿದರು. ಇದರೊಂದಿಗೆ ಭಾರತ ನಿಗದಿತ 50 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 296 ರನ್ ಗಳಿಸಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

ಮುಂದಿನ ಸುದ್ದಿ
Show comments