Webdunia - Bharat's app for daily news and videos

Install App

Team India: ಡ್ರೆಸ್ಸಿಂಗ್ ರೂಂ ಮಾಹಿತಿ ಲೀಕ್: ಗೌತಮ ಗಂಭೀರ್ ಪಟಾಲಂ ಸೇರಿದಂತೆ ಸಹಾಯಕ ಸಿಬ್ಬಂದಿಗಳನ್ನು ಕಿತ್ತೆಸೆದ ಬಿಸಿಸಿಐ

Krishnaveni K
ಗುರುವಾರ, 17 ಏಪ್ರಿಲ್ 2025 (12:19 IST)
ಮುಂಬೈ: ಟೀಂ ಇಂಡಿಯಾ ಮುಖ್ಯ ಕೋಚ್ ಗೌತಮ್ ಗಂಭೀರ್ ಆಪ್ತ ಸೇರಿ ಟೀಂ ಇಂಡಿಯಾದ ಪ್ರಮುಖ ಸಹಾಯಕ ಸಿಬ್ಬಂದಿಗಳನ್ನು ಬಿಸಿಸಿಐ ಕಿತ್ತೆಸೆದಿದೆ. ಆಸ್ಟ್ರೇಲಿಯಾ ಪ್ರವಾಸ ವೇಳೆ ತಂಡದ ವಿಚಾರಗಳನ್ನು ಲೀಕ್ ಮಾಡಿರುವುದಾಗಿ ವರದಿಯಾದ ಬೆನ್ನಲ್ಲೇ ಈ ಕ್ರಮ ಕೈಗೊಳ್ಳಲಾಗಿದೆ.

ಕಳೆದ ಆಸ್ಟ್ರೇಲಿಯಾ ಟೆಸ್ಟ್ ಸರಣಿ ಪ್ರವಾಸದ ವೇಳೆ ಟೀಂ ಇಂಡಿಯಾದೊಳಗಿನ ವಿಚಾರಗಳು ಅನೇಕ ಬಾರಿ ಲೀಕ್ ಆಗಿದೆ. ಸರ್ಫರಾಜ್ ಖಾನ್ ಮೇಲೆ ಕೋಚ್ ಗಂಭೀರ್ ಸಿಟ್ಟಾಗಿದ್ದರು. ಹಿರಿಯ ಆಟಗಾರರೊಬ್ಬರು ತಂಡದ ನಾಯಕತ್ವ ವಹಿಸಿಕೊಳ್ಳಲು ರೆಡಿಯಿದ್ದಾರೆ ಎಂದೆಲ್ಲಾ ಸುದ್ದಿಯಾಗಿತ್ತು.

ಈ ಸುದ್ದಿಗಳನ್ನು ಲೀಕ್ ಮಾಡಿರುವುದು ಟೀಂ ಇಂಡಿಯಾ ಸಿಬ್ಬಂದಿಗಳೇ ಎಂದು ಹೇಳಲಾಗಿತ್ತು. ಇದೀಗ ಘಟನೆ ನಡೆದು ಇಷ್ಟು ದಿನಗಳ ಬಳಿಕ ಬಿಸಿಸಿಐ ಸಹಾಯಕ ಸಿಬ್ಬಂದಿಗಳನ್ನು ಕಿತ್ತು ಹಾಕಿದೆ.

ಟೀಂ ಇಂಡಿಯಾ ಬ್ಯಾಟಿಂಗ್ ಕೋಚ್, ಗಂಭೀರ್ ಆಪ್ತ ಅಭಿಷೇಕ್ ನಾಯರ್, ಫೀಲ್ಡಿಂಗ್ ಕೋಚ್ ಟಿ ದಿಲೀಪ್, ಮೆಂಟಲ್ ಸ್ಟ್ರೆಂಗ್ತ್ ಆಂಡ್ ಕಂಡೀಷನಿಂಗ್ ಕೋಚ್ ಸೋಹಂ ದೇಸಾಯಿ ಹಾಗೂ ಇನ್ನೊಬ್ಬರು ಮಸಾಜರ್ ನನ್ನೂ ಕಿತ್ತು ಹಾಕಲಾಗಿದೆ.

ಟಿ ದಿಲೀಪ್ ರಾಹುಲ್ ದ್ರಾವಿಡ್ ಕಾಲದಿಂದಲೇ ತಂಡದ ಭಾಗವಾಗಿದ್ದರು. ಏಕದಿನ ವಿಶ್ವಕಪ್, ಟಿ20 ವಿಶ್ವಕಪ್ ವೇಳೆ ಟೀಂ ಇಂಡಿಯಾದಲ್ಲಿ ಫೀಲ್ಡಿಂಗ್ ಮೆಡಲ್ ನೀಡುವ ವಿಶಿಷ್ಟ ಸಂಪ್ರದಾಯವನ್ನು ಹುಟ್ಟುಹಾಕಿದ್ದರು. ಇದೀಗ ಅವರನ್ನೂ ಕಿತ್ತು ಹಾಕಲಾಗಿದೆ. ಸದ್ಯದಲ್ಲೇ ತಂಡಕ್ಕೆ ಹೊಸ ಸಹಾಯಕ ಸಿಬ್ಬಂದಿಗಳ ನೇಮಕವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶುಭಮನ್ ಗಿಲ್ ಗೆ ಅನಾರೋಗ್ಯ, ಬ್ಲಡ್ ರಿಪೋರ್ಟ್ ಬಿಸಿಸಿಐಗೆ ಸಲ್ಲಿಸಿದ ಗಿಲ್

ಏಷ್ಯಾ ಕಪ್ ನಲ್ಲಿ ಟೀಂ ಇಂಡಿಯಾ ಜೆರ್ಸಿಗೆ ಪ್ರಾಯೋಜಕರೇ ಇರಲ್ವಾ

ಭಾರತ ಪಾಕಿಸ್ತಾನ ಕ್ರಿಕೆಟ್: ಪಹಲ್ಗಾಮ್ ನಲ್ಲಿ ಪತಿ ಮೃತದೇಹದ ಮುಂದೆ ಕೂತ ಮಹಿಳೆಯರ ಮರೆತು ಹೋಯ್ತಾ

ಭಾರತ ಪಾಕಿಸ್ತಾನ ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

ಏಷ್ಯಾ ಕಪ್ ಗೆ ಆಯ್ಕೆ ಮಾಡದಿದ್ದರೇನಂತೆ ಶ್ರೇಯಸ್ ಅಯ್ಯರ್ ಗೆ ದೊಡ್ಡ ಸ್ಥಾನ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments