Webdunia - Bharat's app for daily news and videos

Install App

ಹಸಿದ ಹೆಬ್ಬುಲಿಗಳಂತೆ ದ.ಆಫ್ರಿಕನ್ನರ ಮೇಲೆರಗಿದ ಟೀಂ ಇಂಡಿಯಾ

Webdunia
ಭಾನುವಾರ, 11 ಜೂನ್ 2017 (18:10 IST)
ಲಂಡನ್: ಭಾರತಕ್ಕೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿತ್ತು. ಇಂತಹ ಪ್ರತಿಷ್ಠೆಯ ಕಣದಲ್ಲಿ ಭಾರತೀಯ ಆಟಗಾರರು ಸಾಂಘಿಕ ಹೋರಾಟ ಮಾಡಿ ದ.ಆಫ್ರಿಕಾವನ್ನು ಕೇವಲ 191 ರನ್ ಗಳಿಗೆ ಆಲೌಟ್ ನಿಯಂತ್ರಿಸುವಲ್ಲಿ ಯಶಸ್ವಿಯಾಗಿದೆ.

 
ಚಾಂಪಿಯನ್ಸ್ ಟ್ರೋಫಿ ಪಂದ್ಯಾವಳಿಯ ಇಂದಿನ ಪಂದ್ಯದಲ್ಲಿ ಭಾರತದ ಬೌಲಿಂಗ್ ಮತ್ತು ಫೀಲ್ಡಿಂಗ್ ನಲ್ಲಿ ಅತ್ಯದ್ಭುತ ಪ್ರದರ್ಶನ ತೋರಿದ್ದರಿಂದ ಆಫ್ರಿಕನ್ನರು 44.3 ಓವರ್ ಗಳಿಗೆ ಆಲೌಟ್ ಆಯಿತು.

ವಿಶೇಷವೆಂದರೆ ಆಫ್ರಿಕನ್ನರಿಗೆ ಉತ್ತಮ ಆರಂಭ ದೊರಕಿತ್ತು. ಆರಂಭಿಕರಾದ ಕ್ವಿಂಟನ್ ಡಿ ಕಾಕ್ 53 ಮತ್ತು ಹಶೀಮ್ ಆಮ್ಲಾ 35 ರನ್ ಗಳಿಸಿ ಮೊದಲ ವಿಕೆಟ್ ಗೆ 76 ರನ್ ಪೇರಿಸಿದರು. ಆದರೆ ಸ್ಪಿನ್ನರ್ ಗಳು ದಾಳಿಗೆ ಇಳಿದ ಮೇಲೆ ಪಂದ್ಯದ ಮೇಲೆ ಭಾರತ ಸಂಪೂರ್ಣ ಹಿಡಿತ ಸಾಧಿಸಿತು.

ರವಿಚಂದ್ರನ್ ಅಶ್ವಿನ್ ಮತ್ತು ರವೀಂದ್ರ ಜಡೇಜಾ ಆರಂಭಿಕರಿಬ್ಬರನ್ನೂ ಪೆವಿಲಿಯನ್ ಗೆ ಕಳುಹಿಸಿದರು. ನಂತರ ನಾಯಕ ಎಬಿಡಿ ವಿಲಿಯರ್ಸ್ ಧೋನಿ ಕೈಯಲ್ಲಿ ರನೌಟ್ ಆದರೆ ಡಿ ಮಿಲ್ಲರ್ ಕೊಹ್ಲಿಯಿಂದಾಗಿ ರನೌಟ್ ಆಗಿ ಮರಳಿದರು.

ಈ ಎರಡೂ ಕ್ಷಿಪ್ರ ವಿಕೆಟ್ ನಿಂದಾಗಿ ಭಾರತ ಸಂಪೂರ್ಣವಾಗಿ ಮೇಲುಗೈ ಸಾಧಿಸಿತು. ಅಂತಿಮವಾಗಿ ಭುವನೇಶ್ವರ್ ಕುಮಾರ್ ಎರಡು ವಿಕೆಟ್ ಕಬಳಿಸಿದರು. ಒಟ್ಟಾರೆಯಾಗಿ ಮೂವರು ಬ್ಯಾಟ್ಸ್ ಮನ್ ಗಳು ರನೌಟ್ ಆಗಿ ಮರಳಿದ್ದು, ಭಾರತದ ಸುಧಾರಿತ ಫೀಲ್ಡಿಂಗ್ ಗೆ ಸಾಕ್ಷಿಯಾಗಿತ್ತು. ಹಾಗಿದ್ದರೂ, ಪಂದ್ಯವಿನ್ನೂ ಮುಗಿದಿಲ್ಲ! ಆಫ್ರಿಕನ್ನರ ಬೌಲಿಂಗ್ ಪಡೆ ಉತ್ತಮವಾಗಿದೆ. ಹಾಗಾಗಿ ಟೀಂ ಇಂಡಿಯಾ ಗಟ್ಟಿಯಾಗಿ ನಿಂತರೆ ಮಾತ್ರ ಪಂದ್ಯ ಗೆಲ್ಲಲು ಸಾಧ್ಯ.

http://kannada.fantasycricket.webdunia.com
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಭಾರತದ ವಿರುದ್ಧ ಕಣಕ್ಕಿಳಿಯಲಿರುವ 11 ಆಟಗಾರರ ಪಟ್ಟಿ ಪ್ರಕಟಿಸಿದ ಇಂಗ್ಲೆಂಡ್

ತುಳುನಾಡಿನ ಅಳಿಯ ಸೂರ್ಯಕುಮಾರ್‌ಗೆ ಹರ್ನಿಯಾ ನೋವು: ಚಿಕಿತ್ಸೆಗೆ ಇಂಗ್ಲೆಂಡ್‌ನತ್ತ ಸ್ಟಾರ್‌ ಕ್ರಿಕೆಟಿಗ

ಸೂರ್ಯಕುಮಾರ್ ಯಾದವ್ ಗೆ ಕಾಡುತ್ತಿದೆ ಈ ಆರೋಗ್ಯ ಸಮಸ್ಯೆ: ಕೆಲವು ದಿನ ಕ್ರಿಕೆಟ್ ನಿಂದ ದೂರ

IND vs ENG: ಲೀಡ್ಸ್ ಪಿಚ್ ನಲ್ಲಿ ಮೊದಲ ದಿನ ಇಷ್ಟು ರನ್ ಬಂದರೂ ಸಾಕು

ಟೀಂ ಇಂಡಿಯಾ ಟೆಸ್ಟ್ ಕ್ಯಾಪ್ಟನ್ಸಿ ಬೇಡ ಎಂದಿದ್ದಕ್ಕೆ ನಿಜ ಕಾರಣ ತಿಳಿಸಿದ ಜಸ್ಪ್ರೀತ್ ಬುಮ್ರಾ

ಮುಂದಿನ ಸುದ್ದಿ
Show comments