Webdunia - Bharat's app for daily news and videos

Install App

ಭಾರತ-ವಿಂಡೀಸ್ ದ್ವಿತೀಯ ಏಕದಿನ ಇಂದು: ಮಳೆ ಕರುಣೆ ತೋರಿದರೆ ಪಂದ್ಯ

Webdunia
ಭಾನುವಾರ, 11 ಆಗಸ್ಟ್ 2019 (08:47 IST)
ಗಯಾನ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಇಂದು ದ್ವಿತೀಯ ಏಕದಿನ ಪಂದ್ಯ ನಡೆಯಲಿದ್ದು, ಮಳೆ ಕೃಪೆ ತೋರಿದರೆ ಮಾತ್ರ ಪಂದ್ಯ ಎಂಬ ಪರಿಸ್ಥಿತಿ ಎದುರಾಗಿದೆ.


ಮೊದಲ ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು. ಹೀಗಾಗಿ ಒಟ್ಟು ಮೂರು ಪಂದ್ಯಗಳ ಸರಣಿಯನ್ನು ಗೆಲ್ಲಬೇಕಾದರೆ ಯಾವುದೇ ತಂಡವೂ ಇನ್ನೆರಡೂ ಪಂದ್ಯಗಳನ್ನೂ ಗೆದ್ದುಕೊಳ್ಳಬೇಕು.

ಭಾರತ ವಿಂಡೀಸ್ ಗೆ ಕಾಲಿಟ್ಟಾಗಿನಿಂದ ಮಳೆಯದ್ದೇ ಆಟವಾಗಿದೆ. ಹೀಗಾಗಿ ಇಂದಿನ ಪಂದ್ಯದಲ್ಲಾದರೂ ಮಳೆ ಕೃಪೆ ತೊರಿ ಆಟ ಸಂಪೂರ್ಣವಾದರೆ ಸಾಕು ಎಂದು ಪ್ರಾರ್ಥಿಸುವಂತಾಗಿದೆ.

ಈ ಪಂದ್ಯದಲ್ಲಿ ಭಾರತ ತಂಡದಲ್ಲಿ ಪ್ರಮುಖವಾಗಿ ನಾಲ್ಕನೇ ಕ್ರಮಾಂಕಕ್ಕೆ ಯಾರನ್ನು ಆಡಿಸುತ್ತಾರೆ ಎಂಬುದೇ ಕುತೂಹಲದ ವಿಚಾರವಾಗಿದೆ. ಒಂದು ವೇಳೆ ರಿಷಬ್ ಪಂತ್ ರನ್ನು ಆಡಿಸಿದರೆ, ಕೆಎಲ್ ರಾಹುಲ್ ಇನ್ನೂ ಕೆಳ ಕ್ರಮಾಂಕದಲ್ಲಿ ಬ್ಯಾಟಿಂಗ್ ಗಿಳಿಯಬೇಕಾಗುತ್ತದೆ. ಇದರ ಹೊರತಾಗಿ ಮೊದಲ ಪಂದ್ಯದಲ್ಲಿ ನವ್ ದೀಪ್ ಶೈನಿಗೆ ಅವಕಾಶ ನೀಡಿರಲಿಲ್ಲ. ಟಿ20 ಸರಣಿಯಲ್ಲಿ ಮಿಂಚಿದ್ದ ಶೈನಿಯನ್ನು ಈ ಪಂದ್ಯದಲ್ಲಿ ಆಡಿಸಲೂಬಹುದು. ಒಟ್ಟಾರೆ ತಂಡದ ಕಾಂಬಿನೇಷನ್ ಆಯ್ಕೆ ನಾಯಕ ಕೊಹ್ಲಿಗೆ ದೊಡ್ಡ ತಲೆನೋವಾಗಲಿದೆ.

ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದ್ದು, ಸೋನಿ ವಾಹಿನಿಯಲ್ಲಿ ನೇರಪ್ರಸಾರ ವೀಕ್ಷಿಸಬಹುದಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್ ಕೊಹ್ಲಿ 7 ವರ್ಷದ ಹಳೆಯ ಟ್ವೀಟ್ ವೈರಲ್: ಅಂತಹದ್ದೇನಿದೆ ಅದರಲ್ಲಿ

ಏರ್ ಇಂಡಿಯಾ ವಿಮಾನ ಹತ್ತಲ್ಲ ಎಂದ ಡೇವಿಡ್ ವಾರ್ನರ್: ನಾವೂ ಹೋಗಲ್ಲ ಎಂದ ನೆಟ್ಟಿಗರು

ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್: ಇತಿಹಾಸ ನಿರ್ಮಿಸಲು ಹೊರಟ ದಕ್ಷಿಣ ಆಫ್ರಿಕಾ

ಡಬ್ಲ್ಯುಟಿಸಿ ಫೈನಲ್ ಗೆಲ್ಲಲು ದ ಆಫ್ರಿಕಾಗೆ ಕಠಿಣ ಗುರಿ ನೀಡಿದ ಆಸ್ಟ್ರೇಲಿಯಾ

Gautam Gambhir: ಗೌತಮ್ ಗಂಭೀರ್ ತಾಯಿಗೆ ಗಂಭೀರ: ಭಾರತಕ್ಕೆ ಮರಳಿದ ಟೀಂ ಇಂಡಿಯಾ ಕೋಚ್

ಮುಂದಿನ ಸುದ್ದಿ
Show comments