Webdunia - Bharat's app for daily news and videos

Install App

ಭಾರತ-ವಿಂಡೀಸ್ ದ್ವಿತೀಯ ಏಕದಿನ ಇಂದು: ಮಳೆ ಕರುಣೆ ತೋರಿದರೆ ಪಂದ್ಯ

Webdunia
ಭಾನುವಾರ, 11 ಆಗಸ್ಟ್ 2019 (08:47 IST)
ಗಯಾನ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಇಂದು ದ್ವಿತೀಯ ಏಕದಿನ ಪಂದ್ಯ ನಡೆಯಲಿದ್ದು, ಮಳೆ ಕೃಪೆ ತೋರಿದರೆ ಮಾತ್ರ ಪಂದ್ಯ ಎಂಬ ಪರಿಸ್ಥಿತಿ ಎದುರಾಗಿದೆ.


ಮೊದಲ ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು. ಹೀಗಾಗಿ ಒಟ್ಟು ಮೂರು ಪಂದ್ಯಗಳ ಸರಣಿಯನ್ನು ಗೆಲ್ಲಬೇಕಾದರೆ ಯಾವುದೇ ತಂಡವೂ ಇನ್ನೆರಡೂ ಪಂದ್ಯಗಳನ್ನೂ ಗೆದ್ದುಕೊಳ್ಳಬೇಕು.

ಭಾರತ ವಿಂಡೀಸ್ ಗೆ ಕಾಲಿಟ್ಟಾಗಿನಿಂದ ಮಳೆಯದ್ದೇ ಆಟವಾಗಿದೆ. ಹೀಗಾಗಿ ಇಂದಿನ ಪಂದ್ಯದಲ್ಲಾದರೂ ಮಳೆ ಕೃಪೆ ತೊರಿ ಆಟ ಸಂಪೂರ್ಣವಾದರೆ ಸಾಕು ಎಂದು ಪ್ರಾರ್ಥಿಸುವಂತಾಗಿದೆ.

ಈ ಪಂದ್ಯದಲ್ಲಿ ಭಾರತ ತಂಡದಲ್ಲಿ ಪ್ರಮುಖವಾಗಿ ನಾಲ್ಕನೇ ಕ್ರಮಾಂಕಕ್ಕೆ ಯಾರನ್ನು ಆಡಿಸುತ್ತಾರೆ ಎಂಬುದೇ ಕುತೂಹಲದ ವಿಚಾರವಾಗಿದೆ. ಒಂದು ವೇಳೆ ರಿಷಬ್ ಪಂತ್ ರನ್ನು ಆಡಿಸಿದರೆ, ಕೆಎಲ್ ರಾಹುಲ್ ಇನ್ನೂ ಕೆಳ ಕ್ರಮಾಂಕದಲ್ಲಿ ಬ್ಯಾಟಿಂಗ್ ಗಿಳಿಯಬೇಕಾಗುತ್ತದೆ. ಇದರ ಹೊರತಾಗಿ ಮೊದಲ ಪಂದ್ಯದಲ್ಲಿ ನವ್ ದೀಪ್ ಶೈನಿಗೆ ಅವಕಾಶ ನೀಡಿರಲಿಲ್ಲ. ಟಿ20 ಸರಣಿಯಲ್ಲಿ ಮಿಂಚಿದ್ದ ಶೈನಿಯನ್ನು ಈ ಪಂದ್ಯದಲ್ಲಿ ಆಡಿಸಲೂಬಹುದು. ಒಟ್ಟಾರೆ ತಂಡದ ಕಾಂಬಿನೇಷನ್ ಆಯ್ಕೆ ನಾಯಕ ಕೊಹ್ಲಿಗೆ ದೊಡ್ಡ ತಲೆನೋವಾಗಲಿದೆ.

ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದ್ದು, ಸೋನಿ ವಾಹಿನಿಯಲ್ಲಿ ನೇರಪ್ರಸಾರ ವೀಕ್ಷಿಸಬಹುದಾಗಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments