ಇಂದು ಸಂಜೆ ಭಾರತಕ್ಕೆ ವಿಮಾನವೇರಲಿದೆ ವಿಶ್ವ ವಿಜೇತ ಟೀಂ ಇಂಡಿಯಾ

Krishnaveni K
ಮಂಗಳವಾರ, 2 ಜುಲೈ 2024 (16:11 IST)
ಬಾರ್ಬಡೋಸ್: ಟಿ20 ವಿಶ್ವಕಪ್ ಫೈನಲ್ ನಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸಿ ವಿಶ್ವ ಚಾಂಪಿಯನ್ ಆಗಿರುವ ಟೀಂ ಇಂಡಿಯಾಕ್ಕೆ ತವರಿಗೆ ವಾಪಸಾಗಲು ಚಂಡಮಾರುತ ಅಡ್ಡಿಯಾಗಿದೆ.

ಬಾರ್ಬಡೋಸ್ ನಲ್ಲಿ ಬೆರಿಲ್ ಚಂಡಮಾರುತದಿಂದಾಗಿ ಕ್ರಿಕೆಟಿಗರು ಹೋಟೆಲ್ ರೂಂನಲ್ಲಿಯೇ ಬಂಧಿಯಾಗಿದ್ದಾರೆ. ಹೊರಗೆ ಓಡಾಡಲೂ ಆಗದಂತಹ ಪರಿಸ್ಥಿತಿಯಿದೆ. ಬಾರ್ಬಡೋಸ್ ನಲ್ಲಿ ಚಂಡಮಾರುತದಿಂದಾಗಿ ತುರ್ತು ಪರಿಸ್ಥಿತಿ ಹೇರಲಾಗಿದ್ದು, ವಿಮಾನಗಳ ಹಾರಾಟ ರದ್ದುಗೊಳಿಸಲಾಗಿತ್ತು.

ಹೀಗಾಗಿ ಟೀಂ ಇಂಡಿಯಾ ವಿಶ್ವಕಪ್ ಗೆದ್ದು ಎರಡು ದಿನವಾದರೂ ವಿಂಡೀಸ್ ನಿಂದ ಭಾರತಕ್ಕೆ ಮರಳಲು ಸಾಧ್ಯವಾಗಿರಲಿಲ್ಲ. ರೋಹಿತ್ ಶರ್ಮಾ ವಿಶ್ವಕಪ್ ಜೊತೆಗೆ ಫೋಟೋ ಶೂಟ್ ನಲ್ಲಿ ಭಾಗಿಯಾಗಿದ್ದು ಬಿಟ್ಟರೆ ಬಹುತೇಕ ಕ್ರಿಕೆಟಿಗರು ಹೋಟೆಲ್ ರೂಂನಲ್ಲಿಯೇ ಕಾಲ ಕಳೆದಿದ್ದಾರೆ.

ಇಂದು ಪರಿಸ್ಥಿತಿ ಸುಧಾರಿಸುವ ವಿಶ್ವಾಸವಿದ್ದು, ಟೀಂ ಇಂಡಿಯಾ ಕ್ರಿಕೆಟಿಗರು ಇಂದು ಸಂಜೆ ಭಾರತದತ್ತ ಪ್ರಯಾಣ ಬೆಳೆಸುವ ಸಾಧ್ಯತೆಯಿದೆ. ನಾಳೆ ಟೀಂ ಇಂಡಿಯಾ ಕ್ರಿಕೆಟಿಗರು ಭಾರತಕ್ಕೆ ತಲುಪುವ ನಿರೀಕ್ಷೆಯಿದೆ. ವಿಶ್ವ ವಿಜೇತ ತಂಡವನ್ನು ಎದುರಿಸಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

T20 WC: ಟೀಂ ಇಂಡಿಯಾ ಗೆಲುವಿಗೆ ಆ ಎರಡು ಶಾಟ್ ಕಾರಣ, ಯಾರೂ ಅದರ ಬಗ್ಗೆ ಮಾತಾಡಲ್ಲ ಎಂದು ಬೇಸರಿಸಿದ ಜಸ್ಪ್ರೀತ್ ಬುಮ್ರಾ

T20 WC: ಟೀಂ ಇಂಡಿಯಾಗೆ ಸೆಮಿಫೈನಲ್ ನಲ್ಲಿ ಯಾರು ಎದುರಾಳಿ, ಯಾವಾಗ ಇಲ್ಲಿದೆ ವಿವರ

T20 WC: ಅಭಿಷೇಕ್ ಬಿಟ್ಟು ಸಂಜು ಹಾಕ್ಲಾ ಎಂದಿದ್ದ ಸೂರ್ಯಕುಮಾರ್ ಯಾದವ್: ಇದೀಗ ಫುಲ್ ಟ್ರೋಲ್

Ind vs WI, T20 WC: ಟೀಕೆಗಳಿಗೆ ಅಬ್ಬರದ ಬ್ಯಾಟಿಂಗ್‌ನಿಂದಲೇ ಉತ್ತರಿಸಿದ ಸಂಜು ಸ್ಯಾಮ್ಸನ್‌

ದುಬೈನಲ್ಲಿ ಸಿಲುಕಿದ ಬ್ಯಾಡ್ಮಿಂಟನ್‌ ತಾರೆ ಪಿ.ವಿ. ಸಿಂಧು: ವಿಮಾನ ನಿಲ್ದಾಣದಿಂದಲೇ ಹೇಳಿದ್ದೇನು

ಮುಂದಿನ ಸುದ್ದಿ
Show comments