ಇಂದು ಸಂಜೆ ಭಾರತಕ್ಕೆ ವಿಮಾನವೇರಲಿದೆ ವಿಶ್ವ ವಿಜೇತ ಟೀಂ ಇಂಡಿಯಾ

Krishnaveni K
ಮಂಗಳವಾರ, 2 ಜುಲೈ 2024 (16:11 IST)
ಬಾರ್ಬಡೋಸ್: ಟಿ20 ವಿಶ್ವಕಪ್ ಫೈನಲ್ ನಲ್ಲಿ ದಕ್ಷಿಣ ಆಫ್ರಿಕಾವನ್ನು ಸೋಲಿಸಿ ವಿಶ್ವ ಚಾಂಪಿಯನ್ ಆಗಿರುವ ಟೀಂ ಇಂಡಿಯಾಕ್ಕೆ ತವರಿಗೆ ವಾಪಸಾಗಲು ಚಂಡಮಾರುತ ಅಡ್ಡಿಯಾಗಿದೆ.

ಬಾರ್ಬಡೋಸ್ ನಲ್ಲಿ ಬೆರಿಲ್ ಚಂಡಮಾರುತದಿಂದಾಗಿ ಕ್ರಿಕೆಟಿಗರು ಹೋಟೆಲ್ ರೂಂನಲ್ಲಿಯೇ ಬಂಧಿಯಾಗಿದ್ದಾರೆ. ಹೊರಗೆ ಓಡಾಡಲೂ ಆಗದಂತಹ ಪರಿಸ್ಥಿತಿಯಿದೆ. ಬಾರ್ಬಡೋಸ್ ನಲ್ಲಿ ಚಂಡಮಾರುತದಿಂದಾಗಿ ತುರ್ತು ಪರಿಸ್ಥಿತಿ ಹೇರಲಾಗಿದ್ದು, ವಿಮಾನಗಳ ಹಾರಾಟ ರದ್ದುಗೊಳಿಸಲಾಗಿತ್ತು.

ಹೀಗಾಗಿ ಟೀಂ ಇಂಡಿಯಾ ವಿಶ್ವಕಪ್ ಗೆದ್ದು ಎರಡು ದಿನವಾದರೂ ವಿಂಡೀಸ್ ನಿಂದ ಭಾರತಕ್ಕೆ ಮರಳಲು ಸಾಧ್ಯವಾಗಿರಲಿಲ್ಲ. ರೋಹಿತ್ ಶರ್ಮಾ ವಿಶ್ವಕಪ್ ಜೊತೆಗೆ ಫೋಟೋ ಶೂಟ್ ನಲ್ಲಿ ಭಾಗಿಯಾಗಿದ್ದು ಬಿಟ್ಟರೆ ಬಹುತೇಕ ಕ್ರಿಕೆಟಿಗರು ಹೋಟೆಲ್ ರೂಂನಲ್ಲಿಯೇ ಕಾಲ ಕಳೆದಿದ್ದಾರೆ.

ಇಂದು ಪರಿಸ್ಥಿತಿ ಸುಧಾರಿಸುವ ವಿಶ್ವಾಸವಿದ್ದು, ಟೀಂ ಇಂಡಿಯಾ ಕ್ರಿಕೆಟಿಗರು ಇಂದು ಸಂಜೆ ಭಾರತದತ್ತ ಪ್ರಯಾಣ ಬೆಳೆಸುವ ಸಾಧ್ಯತೆಯಿದೆ. ನಾಳೆ ಟೀಂ ಇಂಡಿಯಾ ಕ್ರಿಕೆಟಿಗರು ಭಾರತಕ್ಕೆ ತಲುಪುವ ನಿರೀಕ್ಷೆಯಿದೆ. ವಿಶ್ವ ವಿಜೇತ ತಂಡವನ್ನು ಎದುರಿಸಲು ಅಭಿಮಾನಿಗಳು ಕಾತುರದಿಂದ ಕಾಯುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಫಿಫಾ ವಿಶ್ವಕಪ್‌ ಫೈನಲ್‌ ಪಂದ್ಯದ ಮಜಾ ಸವಿಯಲು ಶಾಲಾ ಕಾಲೇಜುಗಳಿಗೆ ರಜೆ ಸಾರಿದ ಕೇರಳ ಸರ್ಕಾರ

ಕೆಲ ವರ್ಷಗಳ ಪ್ರಶಸ್ತಿಯ ಬರ ನೀಗಿಸಿಕೊಂಡ ಸಿಂಧು: ಜಪಾನ್‌ನಲ್ಲಿ ಇತಿಹಾಸ ನಿರ್ಮಿಸಿದ ಭಾರತದ ತಾರೆ

ಭಾರತ–ಇಂಗ್ಲೆಂಡ್‌ ನಿರ್ಣಾಯಕ ಪಂದ್ಯಕ್ಕೆ ಲಾರ್ಡ್ಸ್‌ ಸಜ್ಜು: ರೋಹಿತ್‌ ಶರ್ಮಾ ಆಟದತ್ತ ಎಲ್ಲರ ಚಿತ್ತ

ಫಿಫಾ ವಿಶ್ವಕಪ್‌ನಲ್ಲಿ ಹೊಸ ದಾಖಲೆ ಬರೆದ ಎಂಬಾಪೆ: ಮೆಸ್ಸಿ ದಾಖಲೆ ಉಡೀಸ್‌ ಮಾಡಿದ ಫ್ರಾನ್ಸ್‌ ತಾರೆ

Rohit Sharma: ರೋಹಿತ್ ಶರ್ಮಾ ಫ್ಯಾನ್ಸ್ ಗೆ ಗುಡ್ ನ್ಯೂಸ್ ಕೊಟ್ಟ ಬಿಸಿಸಿಐ

ಮುಂದಿನ ಸುದ್ದಿ
Show comments