ಮುಂಬೈ: ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿ ಮುಗಿದ ಮೇಲೆ ಏಕದಿನ ಸರಣಿ ಆರಂಭವಾಗಲಿದೆ. ಆದರೆ ಈ ಸರಣಿಗೆ ಪ್ರಮುಖ ಬೌಲರ್ ಗಳಿಗೆ ವಿಶ್ರಾಂತಿ ನೀಡಲು ಆಯ್ಕೆಗಾರರು ಚಿಂತನೆ ನಡೆಸಿದ್ದಾರೆ.
ಭಾರತ ಈ ಋತುವಿನಲ್ಲಿ 13 ಟೆಸ್ಟ್ ಪಂದ್ಯಗಳನ್ನು ಆಡುತ್ತಿದೆ. ಇದರಲ್ಲಿ ಆರು ಪಂದ್ಯಗಳು ಈಗಾಗಲೇ ಮುಕ್ತಾಯಗೊಂಡಿದೆ. ಇಂಗ್ಲೆಂಡ್ ವಿರುದ್ಧ ಟೆಸ್ಟ್ ಪಂದ್ಯವಾಡಿದ ನಂತರ ಆಸ್ಟ್ರೇಲಿಯಾ ವಿರುದ್ಧ ಸರಣಿ ನಡೆಯಲಿದೆ. ಹೀಗಾಗಿ ಸುದೀರ್ಘ ಮಾದರಿಯ ಪಂದ್ಯಗಳಿಗೆ ರವಿಚಂದ್ರನ್ ಅಶ್ವಿನ್ ಮತ್ತು ರವೀಂದ್ರ ಜಡೇಜಾರಂತಹ ಪ್ರಮುಖ ಬೌಲರ್ ಗಳನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಆಯ್ಕೆಗಾರರು ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಲು ಚಿಂತಿಸಿದ್ದಾರೆ.
ಕೋಚ್ ಅನಿಲ್ ಕುಂಬ್ಳೆ ನಿರ್ದೇಶನದಂತೆ ಅಶ್ವಿನ್, ಜಡೇಜಾ, ಮೊಹಮ್ಮದ್ ಶಮಿ ಮತ್ತು ಉಮೇಶ್ ಯಾದವ್ ರನ್ನು ಏಕದಿನ ಪಂದ್ಯದಿಂದ ಹೊರಗಿಡುವ ಸಾಧ್ಯತೆಯಿದೆ. ಇಂಗ್ಲೆಂಡ್ ವಿರುದ್ಧ ಭಾರತ ಜನವರಿ 15 ರಿಂದ ಮೂರು ಏಕದಿನ ಮತ್ತು ಮೂರು ಟಿ-ಟ್ವೆಂಟಿ ಪಂದ್ಯಗಳನ್ನಾಡಲಿದೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ
ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ