Select Your Language

Notifications

webdunia
webdunia
webdunia
Monday, 7 April 2025
webdunia

ಕೆಎಲ್ ರಾಹುಲ್ ಬದಲು ದಿನೇಶ್ ಕಾರ್ತಿಕ್ ಗೆ ಅವಕಾಶ ಕೊಟ್ಟಿದ್ದಕ್ಕೆ ಟ್ರೋಲ್ ಗೊಳಗಾದ ಟೀಂ ಇಂಡಿಯಾ!

ಕೆಎಲ್ ರಾಹುಲ್
ಲೀಡ್ಸ್ , ಗುರುವಾರ, 19 ಜುಲೈ 2018 (09:22 IST)
ಲೀಡ್ಸ್: ಇಂಗ್ಲೆಂಡ್ ವಿರುದ್ಧ ಮೂರನೇ ಏಕದಿನ ಪಂದ್ಯ ಸೋತು ಸರಣಿ ಕಳೆದುಕೊಂಡ ಟೀಂ ಇಂಡಿಯಾಗೆ ಇದೀಗ ಅಭಿಮಾನಿಗಳು ಇನ್ನಿಲ್ಲದಂತೆ ತರಾಟೆಗೆ ತೆಗೆದುಕೊಳ್ಳುತ್ತಿದ್ದಾರೆ.

ಮೂರನೇ ಪಂದ್ಯದಲ್ಲಿ ಭರ್ಜರಿ ಫಾರ್ಮ್ ನಲ್ಲಿದ್ದ ಕೆಎಲ್ ರಾಹುಲ್ ರನ್ನು ಹೊರಗುಳಿಸಿ, ದಿನೇಶ್ ಕಾರ್ತಿಕ್ ಗೆ ಅವಕಾಶ ಕೊಟ್ಟಿದ್ದಕ್ಕೆ ನಾಯಕ ವಿರಾಟ್ ಕೊಹ್ಲಿ ಮತ್ತು ತಂಡದ ಮ್ಯಾನೇಜ್ ಮೆಂಟ್ ಗೆ ಅಭಿಮಾನಿಗಳು ಸಿಕ್ಕಾಪಟ್ಟೆ ಟ್ರೋಲ್ ಮಾಡಿದ್ದಾರೆ.

ದಿನೇಶ್ ಕಾರ್ತಿಕ್ ಗೆ ಅವಕಾಶ ಕೊಡಬೇಕಿದ್ದರೆ, ಕೆಎಲ್ ರಾಹುಲ್ ರನ್ನೇ ತೆಗೆಯಬೇಕಿತ್ತೇ? ಸುರೇಶ್ ರೈನಾರನ್ನು ಉಳಿಸಿ, ರಾಹುಲ್ ರನ್ನು ಹೊರಗಿಟ್ಟಿದ್ದು ಯಾಕೆ? ನಾಯಕನ ಲಾಜಿಕ್ ಅರ್ಥವೇ ಆಗುತ್ತಿಲ್ಲ. ಒಂದು ಪಂದ್ಯದಲ್ಲಿ ವಿಫಲರಾಗಿದರೆ ರಾಹುಲ್ ರನ್ನು ಹೊರ ಹಾಕುತ್ತಾರೆ ಎಂದು ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

Share this Story:

Follow Webdunia kannada

ಮುಂದಿನ ಸುದ್ದಿ

ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಗೆ ಭಾರತ ತಂಡ ಪ್ರಕಟ