Webdunia - Bharat's app for daily news and videos

Install App

ಮೊದಲ ಪಂದ್ಯದಲ್ಲೇ ಶೈನ್ ಆದ ಟೀಂ ಇಂಡಿಯಾ ಯುವ ಕ್ರಿಕೆಟಿಗರು

Webdunia
ಸೋಮವಾರ, 19 ಜುಲೈ 2021 (08:45 IST)
ಕೊಲೊಂಬೋ: ಭಾರತ ಮತ್ತು ಶ್ರೀಲಂಕಾ ನಡುವೆ ನಡೆದ ಮೊದಲ ಏಕದಿನ ಪಂದ್ಯವನ್ನು ಟೀಂ ಇಂಡಿಯಾ ಭರ್ಜರಿಯಾಗಿ 7 ವಿಕೆಟ್ ಗಳಿಂದ ಗೆದ್ದುಕೊಂಡಿದೆ.
Photo Courtesy: Twitter


ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ ಭಾರತದ ಸ್ಪಿನ್ನರ್ ಗಳ ದಾಳಿಗೆ ಸಿಲುಕಿ 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 262 ರನ್ ಗಳಿಸಲಷ್ಟೇ ಶಕ್ತವಾಯಿತು.  ಭಾರತದ ಪರ ದೀಪಕ್ ಚಹರ್, ಕುಲದೀಪ್ ಯಾದವ್, ಯಜುವೇಂದ್ರ ಚಾಹಲ್ ತಲಾ 2 ವಿಕೆಟ್ ಪಡೆದರೆ ಪಾಂಡ್ಯ ಸಹೋದರರು ತಲಾ 1 ವಿಕೆಟ್ ತಮ್ಮದಾಗಿಸಿಕೊಂಡರು.

ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಯುವ ಕ್ರಿಕೆಟಿಗರು ಯದ್ವಾ ತದ್ವಾ ಬ್ಯಾಟ್ ಬೀಸಿದರು. ಕೇವಲ 5 ಓವರ್ ಗಳಲ್ಲೇ ತಂಡದ ಮೊತ್ತ 50 ರನ್ ದಾಟಿತ್ತು. ಆರಂಭಿಕ ಪೃಥ್ವಿ ಶಾ 24 ಎಸೆತಗಳಲ್ಲಿ 43 ರನ್ ಗಳಿಸಿದರೆ, ಅವರಿಗೆ ತಕ್ಕ ಸಾಥ್ ನೀಡಿದ ನಾಯಕ ಶಿಖರ್ ಧವನ್ ತಾಳ್ಮೆಯ ಆಟವಾಡಿ 95 ಎಸೆತಗಳಿಂದ 86 ರನ್ ಗಳಿಸಿ ಅಜೇಯರಾಗುಳಿದರು. ಶಾ ಔಟಾದ ಬಳಿಕ ಬಂದ ಇಶಾನ್ ಕಿಶನ್ ಕೂಡಾ ಹೊಡೆಬಡಿಯ ಇನಿಂಗ್ಸ್ ಆಡಿದರು. 42 ಎಸೆತಗಳಲ್ಲೇ 59 ರನ್ ಗಳಿಸಿ ಗೆಲುವಿನ ಹಾದಿ ಸುಗಮವಾಗಿಸಿದರು.  ಆದರೆ ಕನ್ನಡಿಗ ಮನೀಶ್ ಪಾಂಡೆಯದ್ದು ಇದಕ್ಕೆ ತದ್ವಿರುದ್ದ ಆಟ 40 ಎಸೆತ ಎದುರಿಸಿದ ಅವರು 26 ರನ್ ಗಳಿಸಲಷ್ಟೇ ಶಕ್ತರಾದರು. ಆದರೆ ನಂತರ ಬಂದ ಸೂರ್ಯಕುಮಾರ್ ಯಾದವ್ 20 ಎಸೆತಗಳಲ್ಲೇ 31 ರನ್ ಚಚ್ಚಿ ಗೆಲುವಿನ ದಡ ಮುಟ್ಟಿಸಿದರು. ಭಾರತ ಅಂತಿಮವಾಗಿ 36.4 ಓವರ್ ಗಳಲ್ಲಿ  3 ವಿಕೆಟ್ ನಷ್ಟಕ್ಕೆ 263 ರನ್ ಗಳಿಸಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Bengaluru stampede: ಮೊನ್ನೆಯಷ್ಟೇ ಕೊಹ್ಲಿ ಜೊತೆ ಸುತ್ತಾಟ, ಇಂದು ಪೊಲೀಸರ ಜೊತೆ ಅಲೆದಾಟ

Bengaluru Stampede: ಮೃತರ ಕುಟುಂಬಗಳಿಗೆ ಆರ್‌ಸಿಬಿ ತಲಾ ₹1ಕೋಟಿ ಪರಿಹಾರ ನೀಡಲು ಹೆಬ್ಬಾಳಕರ ಒತ್ತಾಯ

RCB: ಆರ್ ಸಿಬಿ ಮಾಲಿಕರು ನಿಜಕ್ಕೂ ಯಾರು, ತಂಡಕ್ಕೆ ಈ ಹೆಸರು ಬಂದಿದ್ದು ಹೇಗೆ ಇಲ್ಲಿದೆ ವಿವರ

Nikhil Sosale: ಅನುಷ್ಕಾ ಶರ್ಮಾಗೆ ಅಂಟಿಕೊಂಡೇ ಇದ್ದರು ಅರೆಸ್ಟ್ ಆಗಿರುವ ನಿಖಿಲ್ ಸೋಸಲೆ ಪತ್ನಿ

Gautam Gambhir: ಪೆಟ್ರೋಲ್ ಬಂಕ್ ಫೀಲ್ ಬರ್ತಾ ಇದ್ಯಲ್ಲೋ.. ಟ್ರೋಲ್ ಆಯ್ತು ಟೀಂ ಇಂಡಿಯಾ ಹೊಸ ಜೆರ್ಸಿ

ಮುಂದಿನ ಸುದ್ದಿ
Show comments