Webdunia - Bharat's app for daily news and videos

Install App

ಮೊದಲ ಪಂದ್ಯದಲ್ಲೇ ಶೈನ್ ಆದ ಟೀಂ ಇಂಡಿಯಾ ಯುವ ಕ್ರಿಕೆಟಿಗರು

Webdunia
ಸೋಮವಾರ, 19 ಜುಲೈ 2021 (08:45 IST)
ಕೊಲೊಂಬೋ: ಭಾರತ ಮತ್ತು ಶ್ರೀಲಂಕಾ ನಡುವೆ ನಡೆದ ಮೊದಲ ಏಕದಿನ ಪಂದ್ಯವನ್ನು ಟೀಂ ಇಂಡಿಯಾ ಭರ್ಜರಿಯಾಗಿ 7 ವಿಕೆಟ್ ಗಳಿಂದ ಗೆದ್ದುಕೊಂಡಿದೆ.
Photo Courtesy: Twitter


ಮೊದಲು ಬ್ಯಾಟಿಂಗ್ ಮಾಡಿದ ಶ್ರೀಲಂಕಾ ಭಾರತದ ಸ್ಪಿನ್ನರ್ ಗಳ ದಾಳಿಗೆ ಸಿಲುಕಿ 50 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 262 ರನ್ ಗಳಿಸಲಷ್ಟೇ ಶಕ್ತವಾಯಿತು.  ಭಾರತದ ಪರ ದೀಪಕ್ ಚಹರ್, ಕುಲದೀಪ್ ಯಾದವ್, ಯಜುವೇಂದ್ರ ಚಾಹಲ್ ತಲಾ 2 ವಿಕೆಟ್ ಪಡೆದರೆ ಪಾಂಡ್ಯ ಸಹೋದರರು ತಲಾ 1 ವಿಕೆಟ್ ತಮ್ಮದಾಗಿಸಿಕೊಂಡರು.

ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಯುವ ಕ್ರಿಕೆಟಿಗರು ಯದ್ವಾ ತದ್ವಾ ಬ್ಯಾಟ್ ಬೀಸಿದರು. ಕೇವಲ 5 ಓವರ್ ಗಳಲ್ಲೇ ತಂಡದ ಮೊತ್ತ 50 ರನ್ ದಾಟಿತ್ತು. ಆರಂಭಿಕ ಪೃಥ್ವಿ ಶಾ 24 ಎಸೆತಗಳಲ್ಲಿ 43 ರನ್ ಗಳಿಸಿದರೆ, ಅವರಿಗೆ ತಕ್ಕ ಸಾಥ್ ನೀಡಿದ ನಾಯಕ ಶಿಖರ್ ಧವನ್ ತಾಳ್ಮೆಯ ಆಟವಾಡಿ 95 ಎಸೆತಗಳಿಂದ 86 ರನ್ ಗಳಿಸಿ ಅಜೇಯರಾಗುಳಿದರು. ಶಾ ಔಟಾದ ಬಳಿಕ ಬಂದ ಇಶಾನ್ ಕಿಶನ್ ಕೂಡಾ ಹೊಡೆಬಡಿಯ ಇನಿಂಗ್ಸ್ ಆಡಿದರು. 42 ಎಸೆತಗಳಲ್ಲೇ 59 ರನ್ ಗಳಿಸಿ ಗೆಲುವಿನ ಹಾದಿ ಸುಗಮವಾಗಿಸಿದರು.  ಆದರೆ ಕನ್ನಡಿಗ ಮನೀಶ್ ಪಾಂಡೆಯದ್ದು ಇದಕ್ಕೆ ತದ್ವಿರುದ್ದ ಆಟ 40 ಎಸೆತ ಎದುರಿಸಿದ ಅವರು 26 ರನ್ ಗಳಿಸಲಷ್ಟೇ ಶಕ್ತರಾದರು. ಆದರೆ ನಂತರ ಬಂದ ಸೂರ್ಯಕುಮಾರ್ ಯಾದವ್ 20 ಎಸೆತಗಳಲ್ಲೇ 31 ರನ್ ಚಚ್ಚಿ ಗೆಲುವಿನ ದಡ ಮುಟ್ಟಿಸಿದರು. ಭಾರತ ಅಂತಿಮವಾಗಿ 36.4 ಓವರ್ ಗಳಲ್ಲಿ  3 ವಿಕೆಟ್ ನಷ್ಟಕ್ಕೆ 263 ರನ್ ಗಳಿಸಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಅಜಿಂಕ್ಯಾ ರೆಹಾನೆ

ಟೀಂ ಇಂಡಿಯಾ ಸಹಾಯಕ ಸಿಬ್ಬಂದಿ ವಿಕೆಟ್ ಪತನ: ಗೌತಮ್ ಗಂಭೀರ್ ಆಪ್ತ ರಾಜೀನಾಮೆ

IND vs SL: ಶ್ರೀಲಂಕಾ ವಿರುದ್ಧ ಟೆಸ್ಟ್ ಸರಣಿಗೆ ಟೀಂ ಇಂಡಿಯಾ ಪ್ರಕಟ: ಕೆಎಲ್ ರಾಹುಲ್ ಗೆ ಮಹತ್ವದ ಜವಾಬ್ಧಾರಿ

ಫಾರ್ಮ್ ಇಲ್ಲ ಅಂದ್ರೆ ಡ್ರಾಪ್ ಮಾಡೋದು ಸಂಜು ಸ್ಯಾಮ್ಸನ್ ಗೆ ಮಾತ್ರನಾ: ಅಭಿಷೇಕ್ ಶರ್ಮಾ ಏನು ಸ್ಪೆಷಲ್

ಮುಂದಿನ ಸುದ್ದಿ
Show comments