ವಿಂಡೀಸ್ ವಿರುದ್ಧ ಕೊನೆಯ ಎಸೆತದಲ್ಲಿ ಗೆದ್ದ ಟೀಂ ಇಂಡಿಯಾ

Webdunia
ಶನಿವಾರ, 23 ಜುಲೈ 2022 (08:10 IST)
ಟ್ರಿನಿಡಾಡ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆದ ಮೊದಲ ಏಕದಿನ ಪಂದ್ಯವನ್ನು ಟೀಂ ಇಂಡಿಯಾ ರೋಚಕವಾಗಿ 3 ರನ್ ಗಳಿಂದ ಗೆದ್ದುಕೊಂಡಿದೆ.

ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ನಿಗದಿತ 50 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 308 ರನ್ ಗಳಿಸಿತು. ನಾಯಕನ ಆಟವಾಡಿದ ಶಿಖರ್ ಧವನ್ 97 ರನ್ ಗಳಿಗೆ ಔಟಾದರೆ ಅವರಿಗೆ ತಕ್ಕ ಸಾಥ್ ನೀಡಿದ ಶುಬ್ನಂ ಗಿಲ್ 64 ರನ್ ಗಳಿಸಿದರು. ನಂತರ ಬಂದ ಶ್ರೇಯಸ್ ಅಯ್ಯರ್ 54 ರನ್ ಗಳಿಸಿ ಗಮನ ಸೆಳೆದರು. ಆದರೆ ಸೂರ್ಯಕುಮಾರ್ ಯಾದವ್ (13), ಸಂಜು ಸ್ಯಾಮ್ಸನ್ (12) ರನ್ ಗಳಿಸದೇ ಭಾರತ ತಂಡಕ್ಕೆ ಕೊಂಚ ಹಿನ್ನಡೆಯಾಯಿತು. ಕೊನೆಯಲ್ಲಿ ದೀಪಕ್ ಹೂಡಾ 27, ಅಕ್ಸರ್ ಪಟೇಲ್ 21 ರನ್ ಗಳಿಸಿ ತಂಡದ ಮೊತ್ತ 300 ಗಡಿ ದಾಟಲು ಸಹಾಯ ಮಾಡಿದರು.

ಈ ಮೊತ್ತ ಬೆನ್ನತ್ತಿದ ವಿಂಡೀಸ್ ಆರಂಭದಲ್ಲೇ ಶೈ ಹೋಪ್ (7) ವಿಕೆಟ್ ಕಳೆದುಕೊಂಡಿತಾದರೂ ಬಳಿಕ ಕೈಲ್ ಮೇಯರ್ಸ್ 75, ಬ್ರೂಕ್ಸ್ 46, ಬ್ರೆಂಡನ್ ಕಿಂಗ್ 54 ರನ್ ಗಳಿಸಿ ಭಾರತಕ್ಕೆ ಭೀತಿ ತಂದೊಡ್ಡಿದ್ದರು. ಆದರೆ ಇಬ್ಬರು ಸೆಟ್ ಬ್ಯಾಟಿಗರನ್ನು ಶ್ರಾದ್ಧೂಲ್ ಠಾಕೂರ್ ಪೆವಿಲಿಯನ್ ಗಟ್ಟಿದ್ದರಿಂದ ಕೊಂಚ ನಿಟ್ಟುಸಿರುವ ಬಿಡುವಂತಾಗಿತ್ತು. 

ಆದರೆ ಕೊನೆಯಲ್ಲಿ ಸಿಡಿದ ಶೆಫರ್ಡ್ ಅಜೇಯ 39, ಹೊಸೈನ್ 32 ರನ್ ಗಳಿಸಿ ಇನ್ನೇನು ಗೆಲುವು ತಂದೇ ಕೊಡುತ್ತಾರೆ ಎಂಬಂತಿದ್ದರು. ಆದರೆ ಕೊನೆಯ ಎಸೆತದಲ್ಲಿ ಬೌಂಡರಿ ಬೇಕಾಗಿದ್ದಾಗ ಮೊಹಮ್ಮದ್ ಸಿರಾಜ್ ಕೇವಲ 1 ರನ್ ಬಿಟ್ಟುಕೊಟ್ಟು ಗೆಲುವು ಭಾರತದ ಪಾಲಾಗಿಸಿದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಟೀಂ ಇಂಡಿಯಾ ಇಂದು ಸರಣಿ ಗೆಲ್ಲಲು ಈ ಬದಲಾವಣೆ ಮಾಡಲೇಬೇಕು

ವಿರಾಟ್ ಕೊಹ್ಲಿಯಲ್ಲಿ ಆಗಿದೆ ಈ ಒಂದು ಬದಲಾವಣೆ

ಮೊಹಮ್ಮದ್ ಶಮಿ ಎಲ್ಲಿ; ಅಜಿತ್ ಅಗರ್ಕರ್ ವಿರುದ್ಧ ಮುಗಿಬಿದ್ದ ಮಾಜಿ ಆಟಗಾರರು

ಏನೂ ಸಾಧಿಸದವರೆಲ್ಲಾ ಕೊಹ್ಲಿ, ರೋಹಿತ್ ಭವಿಷ್ಯ ನಿರ್ಧರಿಸುತ್ತಿದ್ದಾರೆ, ನನಗೂ ಹೀಗೇ ಆಗಿದೆ ಎಂದ ಹರ್ಭಜನ್

ದಕ್ಷಿಣ ಆಫ್ರಿಕಾ ವಿರುದ್ಧದ ಸೋಲಿಗೆ ಕಾರಣ ಬಿಚ್ಚಿಟ್ಟ ರಾಹುಲ್‌: ಬೌಲರ್‌ಗಳನ್ನು ಪ್ರಶಂಸಿಸಿದ ನಾಯಕ

ಮುಂದಿನ ಸುದ್ದಿ
Show comments