Webdunia - Bharat's app for daily news and videos

Install App

ಒಂದೇ ಬದಲಾವಣೆಯಿಂದ ಗೆದ್ದ ಟೀಂ ಇಂಡಿಯಾ

Webdunia
ಭಾನುವಾರ, 21 ಮಾರ್ಚ್ 2021 (09:14 IST)
ಅಹಮ್ಮದಾಬಾದ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಸರಣಿ ಟೀಂ ಇಂಡಿಯಾ ಪಾಲಾಗಿದೆ. ನಿನ್ನೆ ನಡೆದ ಪಂದ್ಯವನ್ನು ಟೀಂ ಇಂಡಿಯಾ 36 ರನ್ ಗಳಿಂದ ಗೆದ್ದು ಸರಣಿಯನ್ನು 3-2 ರಿಂದ ತನ್ನದಾಗಿಸಿಕೊಂಡಿದೆ.

Team India

ನಿನ್ನೆ ಪಂದ್ಯದಲ್ಲಿ ಭಾರತ ಮಾಡಿದ ಒಂದೇ ಒಂದು ಬದಲಾವಣೆ ತಂಡದ ರನ್ ಗತಿಯನ್ನೇ ಹೆಚ್ಚಿಸಿತು. ನಿನ್ನೆಯ ಪಂದ್ಯದಲ್ಲಿ ಕೆಎಲ್ ರಾಹುಲ್ ಗೆ ಕೊಕ್ ನೀಡಿದ್ದ ಕೊಹ್ಲಿ ತಾವೇ ರೋಹಿತ್ ಶರ್ಮಾ ಜೊತೆ ಆರಂಭಿಕರಾಗಿ ಕಣಕ್ಕಿಳಿದರು. ಇದುವರೆಗೆ ಆರಂಭದಲ್ಲೇ ವಿಕೆಟ್ ಕಳೆದುಕೊಂಡು ಆಘಾತ ಅನುಭವಿಸುತ್ತಿದ್ದ ಟೀಂ ಇಂಡಿಯಾಗೆ ಈ ಬದಲಾವಣೆ ಫಲ ಕೊಟ್ಟಿತು. ಆರಂಭಿಕ ವಿಕೆಟ್ ಗೆ ರೋಹಿತ್-ಕೊಹ್ಲಿ ಜೋಡಿ 94 ರನ್ ಪೇರಿಸಿತು. ಅದರಲ್ಲಿ ಹಿಟ್ ಮ್ಯಾನ್ ಕೊಡುಗೆ 64 ರನ್.

ಬಳಿಕ ಬಂದ ಸೂರ್ಯಕುಮಾರ್ ಯಾದವ್ ತಮ್ಮ ಹೊಡೆಬಡಿಯ ಶೈಲಿಯಲ್ಲಿ 17 ಎಸೆತಗಳಲ್ಲಿ 32 ರನ್ ಚಚ್ಚಿ ರನ್ ರೇಟ್ ಹೆಚ್ಷಿಸಿ ನಿರ್ಗಮಿಸಿದರು. ಆದರೆ ಇನ್ನೊಂದು ತುದಿಯಲ್ಲಿ ಬಂಡೆಯಂತೆ ನಿಂತಿದ್ದ ಕೊಹ್ಲಿ ಕೊನೆಯ ಓವರ್ ಗಳಲ್ಲಿ ಸತತವಾಗಿ ಚೆಂಡನ್ನು ಬೌಂಡರಿ ಗೆರೆ ದಾಟಿಸುವ ಮೂಲಕ ಭಾರತಕ್ಕೆ 20 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 224 ರನ್ ಗಳ ಬೃಹತ್ ಮೊತ್ತ ಪೇರಿಸಲು ಕಾರಣರಾದರು.

ಈ ಮೊತ್ತ ಬೆನ್ನತ್ತಿದ ಇಂಗ್ಲೆಂಡ್ ಆರಂಭದಲ್ಲೇ ಜೇಸನ್ ರಾಯ್ ರನ್ನು ಶೂನ್ಯಕ್ಕೆ ಕಳೆದುಕೊಂಡರೂ ಡೇವಿಡ್ ಮಲನ್ (68), ಜೋಸ್ ಬಟ್ಲರ್ (52) ಅಪಾಯಕಾರಿ ಎನಿಸಿದರು. ಆದರೆ ಇವರಿಬ್ಬರ ವಿಕೆಟ್ ಬಿದ್ದ ಮೇಲೆ ಭಾರತ ಪಂದ್ಯದ ಮೇಲೆ ತನ್ನ ನಿಯಂತ್ರಣ ಸಾಧಿಸಿತು. ಅಂತಿಮವಾಗಿ ಇಂಗ್ಲೆಂಡ್ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 188 ರನ್ ಗಳಿಸಲಷ್ಟೇ ಶಕ್ತವಾಯಿತು. ಇಂತಹ ಹೈ ಸ್ಕೋರಿಂಗ್ ಪಂದ್ಯದಲ್ಲೂ ಬಿಗುವಿನ ದಾಳಿ ನಡೆಸಿದ ಭುವನೇಶ್ವರ್ ಕುಮಾರ್ 2 ವಿಕೆಟ್ ಕಬಳಿಸಿ ಪಂದ್ಯ ಶ್ರೇಷ್ಠರಾದರು. ಸರಣಿಯುದ್ದಕ್ಕೂ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದ ವಿರಾಟ್ ಕೊಹ್ಲಿ ಸರಣಿ ಶ್ರೇಷ್ಠರಾದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಣ್ಣು ಕುಕ್ಕಿದ ಇಂಗ್ಲೆಂಡ್ ಪ್ರೇಕ್ಷಕನ ಕೆಂಪು ಟೀ ಶರ್ಟ್‌, ಕ್ರೀಸ್‌ನಲ್ಲಿದ್ದ ಜಡೇಜಾ ಮಾಡಿದ್ದೇನು ಗೊತ್ತಾ

ಕೆಣಕಿದ ಕ್ರಾಲಿಗೆ ತಕ್ಕ ಉತ್ತರ ನೀಡಿದ ಮೊಹಮ್ಮದ್‌ ಸಿರಾಜ್‌: ಕುತೂಹಲಕರ ಘಟ್ಟದತ್ತ ಐದನೇ ಟೆಸ್ಟ್‌

ತಪ್ಪನ್ನು ಸರಿಪಡಿಸಿಕೊಂಡು ಮತ್ತೆ ಆಖಾಢಕ್ಕೆ ಸಿದ್ಧವಾಗುತ್ತೇವೆ ಎಂದ ಮಹೇಂದ್ರ ಸಿಂಗ್ ಧೋನಿ

ವಿಚ್ಚೇದನದಿಂದ ಹಿಂದೆ ಸರಿದ ಸೈನಾ ನೆಹ್ವಾಲ್‌: ದೂರವಾದಾಗಲೇ ಬೆಲೆ ತಿಳಿಯೋದು ಎಂದ ಬ್ಯಾಡ್ಮಿಂಟನ್‌ ತಾರೆ

END vs IND Test: ನೈಟ್ ವಾಚ್ಮೆನ್ ಆಗಿ ಬಂದು ಮೊದಲ ಅರ್ಧ ಶತಕ ಸಿಡಿಸಿದ ಆಕಾಶದೀಪ್‌

ಮುಂದಿನ ಸುದ್ದಿ
Show comments