Select Your Language

Notifications

webdunia
webdunia
webdunia
webdunia

ಫೈನಲ್ ಪಂದ್ಯದಲ್ಲಿ ಕೊನೆಗೂ ಟೀಂ ಇಂಡಿಯಾ ಅದೃಷ್ಟ ಖುಲಾಯಿಸಿತು!

ಫೈನಲ್ ಪಂದ್ಯದಲ್ಲಿ ಕೊನೆಗೂ ಟೀಂ ಇಂಡಿಯಾ ಅದೃಷ್ಟ ಖುಲಾಯಿಸಿತು!
ದುಬೈ , ಶುಕ್ರವಾರ, 28 ಸೆಪ್ಟಂಬರ್ 2018 (16:59 IST)
ದುಬೈ: ಏಷ್ಯಾ ಕಪ್ ಫೈನಲ್ ಪಂದ್ಯದಲ್ಲಿ ಕೊನೆಗೂ ಇದುವರೆಗೆ ಶಾಪವಾಗಿಯೇ ಉಳಿದುಕೊಂಡಿದ್ದ ಮಹತ್ವದ ಟಾಸ್ ನ್ನು ಟೀಂ ಇಂಡಿಯಾ ಗೆದ್ದುಕೊಂಡಿದೆ.

ವಿರಾಟ್ ಕೊಹ್ಲಿ ನೇತೃತ್ವದಲ್ಲಿ ಇಂಗ್ಲೆಂಡ್ ಪ್ರವಾಸ ಮಾಡಿದ್ದಾಗ ಭಾರತ ಒಂದು ಬಾರಿ ಮಾತ್ರ ಟಾಸ್ ಗೆದ್ದಿತ್ತು. ಏಷ್ಯಾ ಕಪ್ ನಲ್ಲಿ ರೋಹಿತ್ ಶರ್ಮಾ ನಾಯಕರಾದರೂ ಟೀಂ ಇಂಡಿಯಾಗೆ ಟಾಸ್ ಗೆಲ್ಲುವ ಅದೃಷ್ಟ ಮಾತ್ರ ಕೂಡಿ ಬಂದಿರಲಿಲ್ಲ. ಕೊನೆಗೂ ಈಗ ಫೈನಲ್ ಪಂದ್ಯದಲ್ಲಿ ರೋಹಿತ್ ಪಡೆ ಟಾಸ್ ಗೆದ್ದಿದ್ದು ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ.

ಭಾರತ ಈ ಪಂದ್ಯಕ್ಕೆ ಪಾಕಿಸ್ತಾನದ ವಿರುದ್ಧ ಆಡಿದ ತಂಡವನ್ನು ಕಣಕ್ಕಿಳಿಸಿದೆ. ಅದರಂತೆ ಕಳೆದ ಪಂದ್ಯದಲ್ಲಿ ಆಡಿದ್ದ ಕೆಎಲ್ ರಾಹುಲ್, ಮನೀಶ್ ಪಾಂಡೆ, ಶ್ರಾದ್ಧೂಲ್ ಠಾಕೂರ್, ಮೊಹಮ್ಮದ್ ಖಲೀಲ್ ಈ ಪಂದ್ಯದಲ್ಲಿ ಆಡುತ್ತಿಲ್ಲ. ಅತ್ತ ಬಾಂಗ್ಲಾದೇಶ ಐವರು ತಜ್ಞ ಬೌಲರ್ ಗಳೊಂದಿಗೆ ಕಣಕ್ಕಿಳಿದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

Share this Story:

Follow Webdunia kannada

ಮುಂದಿನ ಸುದ್ದಿ

ಪತ್ನಿ ಅನುಷ್ಕಾ ಶರ್ಮಾ ಆಕ್ಟಿಂಗ್ ಮಾಡಿದ್ದಾರೆಂಬ ಕಾರಣಕ್ಕೆ ಹೀಗೆ ಮಾಡಿದ್ರಾ ವಿರಾಟ್ ಕೊಹ್ಲಿ!